AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕಿಟಕಿ ಮೂಲಕ ನುಗ್ಗಿ ಮನೆಯಲ್ಲಿದ್ದ 15ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ದೋಚಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಗಲಗುಂಟೆ ಬಳಿಯ ಮಂಜುನಾಥನಗರದ ವಿನಾಯಕ್ ಸಿಂಧೆ ಎಂಬುವರ ಮನೆಯಲ್ಲಿ 15 ಲಕ್ಷ ಮೌಲ್ಯದ 300 ಗ್ರಾಂ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ.

Bengaluru: ಕಿಟಕಿ ಮೂಲಕ ನುಗ್ಗಿ ಮನೆಯಲ್ಲಿದ್ದ 15ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ದೋಚಿದ ಖದೀಮರು
ಬೆಂಗಳೂರಿನಲ್ಲಿ ಮನೆ ಕಳ್ಳತನ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jul 30, 2023 | 12:18 PM

Share

ಬೆಂಗಳೂರು ಗ್ರಾಮಾಂತರ, ಜು.30: ಮಹಾನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಇತ್ತೀಚೆಗೆ ಓರ್ವ ಕಳ್ಳ ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತ ಪಡಿಸಿಕೊಂಡು ಮನೆಗೆ ಕನ್ನ ಹಾಕಿ, ಪೊಲೀಸ್​ ಬಲೆಗೆ ಬಿದ್ದಿದ್ದ. ಇಂತಹ ಅನೇಕ ಪ್ರಕರಣಗಳು ದಿನನಿತ್ಯ ಬೆಳಕಿಗೆ ಬರುತ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ಬಾಗಲಗುಂಟೆ ಬಳಿಯ ಮಂಜುನಾಥನಗರದ ವಿನಾಯಕ್ ಸಿಂಧೆ ಎಂಬುವರ ಮನೆಯಲ್ಲಿ 15 ಲಕ್ಷ ಮೌಲ್ಯದ 300 ಗ್ರಾಂ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮದುವೆ ಸಮಯದಲ್ಲಿ ಖರೀದಿಸಿದ ಚಿನ್ನಾಭರಣ ಕಳ್ಳತನ

ಹೌದು, ವಿನಾಯಕ್ ಸಿಂಧೆ ಅವರು ತಮ್ಮ ಮದುವೆಯಲ್ಲಿ ಖರೀದಿಸಿದ್ದ ಚಿನ್ನಾಭರಣಗಳು ಇದಾಗಿತ್ತು. 15 ದಿನದ ಹಿಂದೆ ವಿನಾಯಕ್​ ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಇತ್ತ ವಿನಾಯಕ್​ ಕೂಡ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಯಾರೂ ಇಲ್ಲದನ್ನು ನೋಡಿದ್ದ ಕಳ್ಳ, ಮನೆಯ ಕಿಟಕಿ ಮುರಿದು ಒಳಗೆ ನುಗ್ಗಿ ಚಿನ್ನದ ಬಳೆ, ಮಾಂಗಲ್ಯ, ಉಂಗುರು, ಓಲೆಗಳು, ನೆಕ್ಲೆಸ್, 1 ಡೈಮಂಡ್ ಎಗರಿಸಿದ್ದಾನೆ.

ಇದನ್ನೂ ಓದಿ:ಚಿಕ್ಕಮಗಳೂರಿನ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ; ಕಳ್ಳ ದಾರಿಯಲ್ಲಿ ಮುಳ್ಳಯ್ಯನಗಿರಿಗೆ ಹೊರಟಿದ್ದ ಪ್ರವಾಸಿಗರಿಗೆ ಶಾಕ್ ನೀಡಿದ ಜಿಲ್ಲಾಡಳಿತ

KYC ಅಪ್ಡೇಟ್ ಮಾಡಬೇಕು ಅಪ್ಡೇಟ್​ ಮಾಡಬೇಕೆಂದು ಓಟಿಪಿ ಪಡೆದು ವೃದ್ದೆಗೆ ವಂಚನೆ

ಬೆಂಗಳೂರು ಗ್ರಾಮಾಂತರ: ಕೆವೈಸಿ ಅಪ್ಡೇಟ್ ಮಾಡಬೇಕು ಇಲ್ಲವಾದ್ರೆ, ಯಾವ ಸೌಲಭ್ಯಗಳು ನಿಮಗೆ ದೊರಕುವುದಿಲ್ಲವೆಂದು ವೃದ್ದೆಗೆ ಕರೆ ಮಾಡಿ OTP ಪಡೆದು ವಂಚನೆ ಮಾಡಿದ ಘಟನೆ ನಡೆದಿದೆ. ಹೌದು, ನೆಲಮಂಗಲದ ದೊಡ್ಡಬಿದರಕಲ್ಲುವಿನಲ್ಲಿರುವ ಜಯಮ್ಮ ಎಂಬ 65ವರ್ಷದ ವೃದ್ದೆಯ ಪಿಂಚಣಿ ಅಕೌಂಟ್​ನಲ್ಲಿದ್ದ 6 ಸಾವಿರ ರೂಪಾಯಿಗಳನ್ನು ದುಷ್ಕರ್ಮಿಗಳು ಎಗರಿಸಿದ್ದಾರೆ. ಈ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ವೃದ್ದೆ ಜಯಮ್ಮ ದೂರು ದಾಖಲು ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?