AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂಪಾಯಿ ಮೌಲ್ಯದ 23 ಕೆಜಿ ಗಾಂಜಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರು ಗಾಂಜಾವನ್ನು ಲಗೇಜ್‌ನಲ್ಲಿಟ್ಟುಕೊಂಡು ತಂದಿದ್ದರು. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 16, 2025 | 3:12 PM

Share

ಬೆಂಗಳೂರು, ಜನವರಿ 16: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು (ganja) ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿ ಗಾಂಜಾ ತಂದಿದ್ದ ಮೂವರನ್ನು ಬಂಧಿಸಿದ್ದು, ಎನ್​ಡಿಪಿಎಸ್​ ಖಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ.

ಬಂಧಿತ ಮೂವರು ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ಪ್ರತ್ಯೇಕ ಕವರ್ಗಳಲ್ಲಿ  ಪ್ಯಾಕಿಂಗ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿಟ್ಟುಕೊಂಡು ಕೆಐಎಬಿಗೆ ಬಂದಿದ್ದರು.

ಇದನ್ನೂ ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಈ ವೇಳೆ ಕೆಂಪೇಗೌಡ ಏರ್​ಪೋರ್ಟ್​ ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ವೇಳೆ ಗಾಂಜಾ ಸಮೇತ ಮೂವರನ್ನು ಬಂಧಿಸಿದ್ದಾರೆ. ಇನ್ನು ಹೈಡ್ರೋಪೋನಿಕ್ ಗಾಂಜಾ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುತ್ತದೆ ಎನ್ನಲಾಗಿದೆ.

ಅಂತಾರಾಜ್ಯ ಬೈಕ್​​ ಕಳ್ಳನ ಬಂಧನ: 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ 

ಹಾವೇರಿಯಲ್ಲಿ ಅಂತಾರಾಜ್ಯ ಬೈಕ್​​ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ ಮಾಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮದ ನಿವಾಸಿ ಅಪ್ಪು‌ ನಾಗೇನಹಳ್ಳಿ(35) ಬಂಧಿತ ಆರೋಪಿ.

ಆರೋಪಿ ಜನಸಂದಣಿ ಪ್ರದೇಶದಲ್ಲಿ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್​​ಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಹೆಚ್ಚುವರಿ ಎಸ್​​ಪಿ ಎಲ್​​ವೈ ಶೀರಕೋಳ ಮತ್ತು ಸಂತೋಷ ಪವಾರ ನೇತೃತ್ವದಲ್ಲಿ ಬೈಕ್ ಕಳ್ಳನನ್ನು ಬಂಧಿಸಲಾಗಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ ಹರಿದು ಬಾಲಕಿ ಸೇರಿ ಇಬ್ಬರು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್​​ ಬಳಿ ಕೆಎಸ್​ಆರ್​ಟಿಸಿ ಬಸ್​ ಹರಿದು ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೈಕ್ ಸವಾರ ವೆಂಕಟೇಶ್​ ಮೂರ್ತಿ(29), ಬಾಲಕಿ ಮೋಕ್ಷಿತಾ(8) ಮೃತರು. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ಆ್ಯಕ್ಸಿಡೆಂಟ್​ ವಿಡಿಯೋ

ಬೈಕ್​ನಲ್ಲಿದ್ದ ಲಾವಣ್ಯ, ನರಸಮ್ಮಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಊರಿನಿಂದ ಬೆಂಗಳೂರಿಗೆ ಬೈಕ್​​​​​​ನಲ್ಲಿ ನಾಲ್ವರು ತೆರಳುತ್ತಿದ್ದರು. ಬೈಕ್​​ ಅನ್ನು ಆಂಧ್ರ ಸಾರಿಗೆ ಬಸ್ ಓವರ್​ ಟೇಕ್​ ಮಾಡಿದ್ದು, ಈ ವೇಳೆ ಬಸ್​ ಟಚ್​ ಆಗಿ ಬೈಕ್​ನಲ್ಲಿದ್ದ ನಾಲ್ವರು ಬಿದಿದ್ದಾರೆ. ಹಿಂದಿನಿಂದ ಬರುತ್ತಿದ್ದ KSRTC ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ಬಸ್​​​ಗಳ ಅತಿವೇಗವೇ​​​ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ