AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

Bangalore KIAL Airport: ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಕೆಂಪೇಗೌಡ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!
ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ ಜಪ್ತಿ!
ನವೀನ್ ಕುಮಾರ್ ಟಿ
| Edited By: |

Updated on: Aug 16, 2023 | 9:46 AM

Share

ದೇವನಹಳ್ಳಿ, ಆಗಸ್ಟ್​ 16: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು (gold biscuit) ಜಫ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Also read: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಕಳೆದ ಜುಲೈನಲ್ಲಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ಕಿತ್ತು 4 ಕೋಟಿ ರೂ. ಮೌಲ್ಯದ ಚಿನ್ನ

ದೇವನಹಳ್ಳಿ (ಬೆಂಗಳೂರು), ಜುಲೈ 14: ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ