AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಬೀದಿ ನಾಯಿಗಳ ದಾಳಿಗೆ 35 ಕುರಿಗಳು ಬಲಿ; ಕಂಗಾಲ ಆದ ರೈತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವನಗೊಂದಿ ಗ್ರಾಮದಲ್ಲಿ ಕುರಿ ದೊಡ್ಡಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ 35 ಕುರಿಗಳು ಮೃತಪಟ್ಟಿವೆ. ಹಗಲಿರುಳು ಕುರಿಗಳನ್ನು ಮೇಯಿಸುತ್ತ ಜೀವನ ಕಟ್ಟಿಕೊಂಡಿದ್ದ ಮಾಲಿಕ ರಾಮಣ್ಣನಿಗೆ ಈಗ ದಿಕ್ಕೆ ತೋಚದಂತಾಗಿದೆ. ರಾಮಣ್ಣನಿಗೆ ಸರ್ಕಾರ ನೆರವು ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ದೇವನಹಳ್ಳಿ: ಬೀದಿ ನಾಯಿಗಳ ದಾಳಿಗೆ 35 ಕುರಿಗಳು ಬಲಿ; ಕಂಗಾಲ ಆದ ರೈತ
ನಾಯಿ ದಾಳಿಗೆ ಕುರಿಗಳು ಬಲಿ
Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on: Aug 29, 2023 | 2:17 PM

ಬೆಂಗಳೂರು ಗ್ರಾಮಾಂತರ: ನಾಯಿಗಳ (Dogs)  ಪ್ರಾಣಿಗಳು ಬಲಿಯಾಗುತ್ತಿವೆ. ಇದೀಗ ತಡರಾತ್ರಿ ಕುರಿಗಳ ದೊಡ್ಡಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, 35 ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ದೇವನಗೊಂದಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಣ್ಣ ಎಂಬುವವರು ಹಗಲಿರುಳು ಕುರಿಗಳನ್ನು ಮೇಯಿಸುತ್ತ ಜೀವನ ಕಟ್ಟಿಕೊಂಡಿದ್ದರು. ರಾಮಣ್ಣ ರಾತ್ರಿ ಕುರಿಗಳನ್ನ ದೊಡ್ಡಿಗೆ ಕಳುಹಿಸಿ ಮಲಗಿದ್ದ ವೇಳೆ ನಾಯಿಗಳು ದಾಳಿ ಮಾಡಿವೆ. ಬೆಳಿಗ್ಗೆ ಕುರಿ ದೊಡ್ಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸರ್ಕಾರ ರೈತನ ನೆರವಿಗೆ ದಾವಿಸುವಂತೆ ಒತ್ತಾಯ ಕೇಳಿಬಂದಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಡಾನೆ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ,  ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ

ಹಾಸನ: ಕಾಡಾನೆಗಳ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ಒಂಟಿಸಲಗ ನರಳಾಡುತ್ತಿದ್ದರೂ, ಅರಣ್ಯ ಇಲಾಖೆ ನಿಗಾ ವಹಿಸದೆ ನಿರ್ಲಕ್ಷ್ಯಿಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆ ಗಾಯಗೊಂಡು ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಗ್ಗೋವೆ ಗ್ರಾಮದಲ್ಲಿಯೇ ಉಳಿದಿದೆ. ಈ ಕಾಡಾನೆಯ ವೇದನೆ ಕಂಡು ಸ್ಥಳೀಯರು ಮರುಗುತ್ತಿದ್ದಾರೆ. ಇನ್ನು ಆನೆಯನ್ನು ಕೂಡಲೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಆನೆಯ ದೇಹದ ಹಿಂಬದಿ ತೀವ್ರ ಸ್ವರೂಪದ ಗಾಯವಾಗಿದ್ದು, ಗಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ ಯಾರಿಗೂ ತೊಂದರೆ ಕೊಡದೇ ಆಹಾರ ಅರಸಿ ಮನೆಯ ಬಾಗಿಲಿಗೆ ಬರುತ್ತಿದ್ದ ಭೀಮ ಈ ಗಾಯಗೊಂಡು ನರಳುತ್ತಿದ್ದಾನೆ.

ಇದನ್ನೂ ಓದಿ: ಮಹಿಳೆ ಮೇಲೆ‌ ಸಾಕು ನಾಯಿ ದಾಳಿ: ಚಿಕಿತ್ಸಾ ವೆಚ್ಚ ಭರಿಸದೇ ನಿರ್ಲಕ್ಷ ಆರೋಪ, ದೂರು ದಾಖಲು

ಭೀಮ ಕಳೆದ ಎರಡು ವಾರದ ಹಿಂದೆ ಹೆಗ್ಗೊವೆ ಗ್ರಾಮದ ಸಮೀಪ ಕಾಡಾನೆಗಳ ಕಾಳಗದಲ್ಲಿ ದಂತದಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದಾನೆ. ಭೀಮ ನೋವಿನಿಂದ ಬಸವಳಿದು ಆಹಾರ ತ್ಯಜಿಸಿ, ನೋವು ತಾಳಲಾರದೆ ಪ್ರತಿನಿತ್ಯವೂ ಹೆಗ್ಗಾವೆ ಸಮೀಪದ ಹೊಂಡದ ನೀರಿನಲ್ಲಿ ಮಲಗಿ ನರಳುತ್ತಿದ್ದಾನೆ.  ಇದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ವನ್ಯಜೀವಿ ವೈದ್ಯರು ಅಗಸ್ಟ್ 25 ರಂದು ಬೆಳಿಗ್ಗೆ ಮೈಸೂರಿನಿಂದ ಆಗಮಿಸಿ ಕಾಡಾನೆಗೆ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ನೀಡಿ ನಾಲ್ಕು ದಿನವಾದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ. ಒಮ್ಮೆ ಚಿಕಿತ್ಸೆ ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಪುನಃ ಇತ್ತ ತಿರುಗಿ ನೋಡಿಲ್ಲ. ಈ ಹಿನ್ನೆಲೆಯಲ್ಲಿ ಕಾಡಾನೆ ಸೆರೆ ಹಿಡಿದು, ಸ್ಥಳಾಂತರ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸ್ಥಳೀಯರ ಒತ್ತಾಯ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ