AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ: KIABಯಿಂದ 61 ಇಂಡಿಗೋ ಫ್ಲೈಟ್​ಗಳು ರದ್ದು

ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯ ಇವತ್ತೂ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಹಲವು ವಿಮಾನಗಳು ರದ್ದುಗೊಂಡಿವೆ. ಈ ಬಗ್ಗೆ ಪ್ರಯಾಣಿಕರಿಗೆ ಏರ್​​ಲೈನ್ಸ್​​ ಸಿಬ್ಬಂದಿ ಸಂದೇಶ ಕಳುಹಿಸಿದ್ದಾರೆ. ಮತ್ತೊಂದೆಡೆ ಕಳೆದ 5 ದಿನಗಳಿಂದ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಕೆಐಎಬಿ ಸಹಜ ಸ್ಥಿತಿಗೆ ಮರಳುತ್ತಿದೆ.

ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ: KIABಯಿಂದ 61 ಇಂಡಿಗೋ ಫ್ಲೈಟ್​ಗಳು ರದ್ದು
ಇಂಡಿಗೋ ವಿಮಾನ
ನವೀನ್ ಕುಮಾರ್ ಟಿ
| Edited By: |

Updated on: Dec 07, 2025 | 8:17 AM

Share

ಬೆಂಗಳೂರು, ಡಿಸೆಂಬರ್​​ 07: ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯಕ್ಕೆ ಸದ್ಯ ಬ್ರೇಕ್​​ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಬೆಂಗಳೂರಿನ ಕೇಂಪೇಗೌಡ ಏರ್​ಪೋರ್ಟ್​ನಿಂದ ಇಂದು ಹಾರಾಟ ನಡೆಸಬೇಕಿದ್ದ 61 ಇಂಡಿಗೋ ವಿಮಾನಗಳ ಸಂಚಾರ ರದ್ದಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಏರ್​​ಲೈನ್ಸ್​​ ಸಿಬ್ಬಂದಿ ಸಂದೇಶ ಕಳುಹಿಸಿದ್ದು, ವಿಮಾನಗಳ ಪ್ರಯಾಣಕ್ಕೆ ಬಾರದಂತೆ ಸೂಚಿಸಲಾಗಿದೆ. ದೆಹಲಿ, ಹೈದರಾಬಾದ್, ಇಂದೋರ್, ರಾಯಪುರ್ ,ಕೊಲ್ಕತ್ತಾ, ಮಂಗಳೂರು ಕೊಚ್ಚಿ, ಶ್ರೀನಗರ, ಭೂಪಾಲ್ ಸೇರಿದಂತೆ ಹಲವಡೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ ಕೆಲ ವಿಮಾನಗಳು ಕ್ಯಾನ್ಸಲ್ ಆಗಿವೆ.

ಸಹಜ ಸ್ಥಿತಿಯತ್ತ KIAB

ಹಾರಾಟ ರದ್ದಾಗಿರುವ ವಿಮಾನಗಳ ಮಾಹಿತಿಯನ್ನು ಇಂಡಿಗೋ ಸಂಸ್ಥೆ ಪ್ರಯಾಣಿಕರಿಗೆ ನೀಡುತ್ತಿರುವ ಹಿನ್ನಲೆ ಬೆಂಗಳೂರು ಏರ್​​ಪೋರ್ಟ್​​ನ ಇಂಡಿಗೋ ಕೌಂಟರ್ ಮುಂದೆ ಜಮಾಯಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಏರ್ಪೋಟ್ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮದಿಂದ ಜನದಟ್ಟಣೆ ಕಡಿಮೆಯಾಗಿದ್ದು, ಕಳೆದ ಐದು ದಿನಗಳಿಂದ ಪ್ರಯಾಣಿಕರಿಂದ ತುಂಬಿ ತುಳುಕಿದ್ದ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಕೆಲ ಇಂಡಿಗೋ ವಿಮಾನಗಳ ವಿಳಂಬ ಮುಂದುವರಿದಿರುವ ಹಿನ್ನಲೆ, ಪ್ರಯಾನಣಿಕರು ಏರ್​​ಪೋರ್ಟ್​ನಲ್ಲಿ ಕಾದು ಕುಳಿತಿರುವ ದೃಶ್ಯಗಳು ಕಂಡುಬಂದಿವೆ. ಏರ್ಪೋರ್ಟ್​​ ಆಡಳಿತ ಮಂಡಳಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಪ್ರಯಾಣಿಕರಿಗೆ ಪ್ಲೈಟ್​​ಗಳ ಮಾಹಿತಿ ನೀಡುವ ಕೆಲಸಕ್ಕೆ ಮುಂದಾಗಿರುವ ಕಾರಣ, ಪ್ರಯಾಣಿಕರಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ಬಹುತೇಕ ತೆರೆ ಬಿದ್ದಿದೆ.

ಇದನ್ನೂ ಓದಿ: ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

ಕಳೆದ ಕೆಲ ದಿನಗಳಿಂದ ಇಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಮಧ್ಯ ಪ್ರವೇಶಿಸಿದೆ. ವಿಮಾನಗಳ ಹಾರಾಟ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಬಾಕಿ ಹಣ ಪಾವತಿಸದ ಇಂಡಿಗೋ ಏರ್​ಲೈನ್ಸ್​​ಗೆ ಕೇಂದ್ರ ವಿಮಾನಯಾನ ಸಚಿವಾಲಯ ಖಡಕ್​​ ಸಂದೇಶ ರವಾನಿಸಿದೆ. ಇಂದು ರಾತ್ರಿ 8 ಗಂಟೆಯೊಳಗೆ ಬಾಕಿ ಹಣವನ್ನು ಮರುಪಾವತಿಸುವಂತೆ ಸೂಚಿಸಿದ್ದು, ಒಂದು ವೇಳೆ ಮರುಪಾವತಿ ಮಾಡದಿದ್ದರೆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಜೊತೆಗೆ ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿರುವುದನ್ನೇ ಇತರ ವಿಮಾನಯಾನ ಸಂಸ್ಥೆಗಳು ಬಂಡವಾಳ ಮಾಡಿಕೊಂಡಿವೆ. ಹೀಗಾಗಿ ಈ ಬಿಕ್ಕಟ್ಟು ಪರಿಹಾರ ಆಗುವವರೆಗೆ ಎಲ್ಲ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ವಿಮಾನಯಾನ ಸಚಿವಾಲಯ ಏಕರೂಪ ದರ ನಿಗದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ