AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ

ಮಾರಕ ವೈರಸ್​ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ಈ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು. ಈ ಹಿನ್ನೆಲೆಯಲ್ಲಿ 11 ಜನರ ತಂಡ ರಚಿಸಲಾಗಿದೆ.

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ
ಸಾಂದರ್ಭಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ವಿವೇಕ ಬಿರಾದಾರ|

Updated on: Sep 17, 2023 | 2:33 PM

Share

ಆನೇಕಲ್ ಸೆ.17: ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್​​ಗೆ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದಲ್ಲಿನ ಏಳು ಚಿರತೆ ಮರಿಗಳು ಮೃತಪಟ್ಟಿವೆ. ರಾಜ್ಯದ ನಾನಾ ಭಾಗಗಳ ರೈತರ ಜಮೀನುಗಳ ಬಳಿ ಸಿಕ್ಕ ಚಿರತೆ ಮರಿಗಳನ್ನು ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನವಕ್ಕೆ ಕರೆತರಲಾಗಿತ್ತು. ಈ ಚಿರತೆ (Leopard) ಮರಿಗಳನ್ನು ಝೂನಲ್ಲಿ ಇರಿಸಲಾಗಿತ್ತು. ಆದರೆ ಈ ಚಿರತೆ ಮರಿಗಳು ಸೋಂಕಿಗೆ ಮೃತಪಟ್ಟಿವೆ. ಈ ಮಾರಕ ರೋಗ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು.

ಸೋಂಕು ತಗುಲಿದ ಬಳಿಕ ಜೀರ್ಣ ಕ್ರೀಯೆ ಆಗದೇ ರಕ್ತ ವಾಂತಿಯಾಗಿ ಪ್ರಾಣ ಬಿಟ್ಟಿವೆ. ಈ ಸೋಂಕು ಮನೆಯ ಸಾಕು ಬೆಕ್ಕುಗಳಿಂದ ಹರಡುತ್ತದೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್​​​ಗಳು ಊಟ ಪ್ರಾಣಿಗಳಿಗೆ ಆಹಾರ ನೀಡಲು ಹೋದಾಗ ಸೋಂಕು ಅಂಟಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಡಾ.ಉಮಾಶಂಕರ್, ಡಾ. ಮಂಜುನಾಥ್ ನೇತೃತ್ವದಲ್ಲಿ 11 ಜನರ ತಂಡ ರಚಿಸಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಳ; ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೈ ಅಲರ್ಟ್

ಈ ತಂಡ ಬೂಸ್ಟರ್ ಡೋಸ್ ನೀಡಿ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕ್ರಮ ಕೈಗೊಂಡಿದೆ. ಇನ್ನು ಚಿರತೆ, ಹುಲಿ, ಸಿಂಹ ಸೇರಿದಂತೆ ಎಲ್ಲಾ ಕೇಜ್​ಗಳಿಗೆ ಬರ್ನಿಂಗ್ ಮಾಡಿ ಬಿಸಿಯಾಗಿ ಇರುವಂತೆ ನೋಡಿಕೊಳ್ಳಲಾಗುತ್ತದೆ. ಅಲ್ಲದೇ ಬ್ಲೀಚಿಂಗ್ ಪೌಡರ್, ಔಷಧಿ ಸಿಂಪಡನೆ ಮಾಡಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ