AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ

ಮಾರಕ ವೈರಸ್​ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ಈ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು. ಈ ಹಿನ್ನೆಲೆಯಲ್ಲಿ 11 ಜನರ ತಂಡ ರಚಿಸಲಾಗಿದೆ.

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ
ಸಾಂದರ್ಭಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ವಿವೇಕ ಬಿರಾದಾರ|

Updated on: Sep 17, 2023 | 2:33 PM

Share

ಆನೇಕಲ್ ಸೆ.17: ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್​​ಗೆ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದಲ್ಲಿನ ಏಳು ಚಿರತೆ ಮರಿಗಳು ಮೃತಪಟ್ಟಿವೆ. ರಾಜ್ಯದ ನಾನಾ ಭಾಗಗಳ ರೈತರ ಜಮೀನುಗಳ ಬಳಿ ಸಿಕ್ಕ ಚಿರತೆ ಮರಿಗಳನ್ನು ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನವಕ್ಕೆ ಕರೆತರಲಾಗಿತ್ತು. ಈ ಚಿರತೆ (Leopard) ಮರಿಗಳನ್ನು ಝೂನಲ್ಲಿ ಇರಿಸಲಾಗಿತ್ತು. ಆದರೆ ಈ ಚಿರತೆ ಮರಿಗಳು ಸೋಂಕಿಗೆ ಮೃತಪಟ್ಟಿವೆ. ಈ ಮಾರಕ ರೋಗ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು.

ಸೋಂಕು ತಗುಲಿದ ಬಳಿಕ ಜೀರ್ಣ ಕ್ರೀಯೆ ಆಗದೇ ರಕ್ತ ವಾಂತಿಯಾಗಿ ಪ್ರಾಣ ಬಿಟ್ಟಿವೆ. ಈ ಸೋಂಕು ಮನೆಯ ಸಾಕು ಬೆಕ್ಕುಗಳಿಂದ ಹರಡುತ್ತದೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್​​​ಗಳು ಊಟ ಪ್ರಾಣಿಗಳಿಗೆ ಆಹಾರ ನೀಡಲು ಹೋದಾಗ ಸೋಂಕು ಅಂಟಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಡಾ.ಉಮಾಶಂಕರ್, ಡಾ. ಮಂಜುನಾಥ್ ನೇತೃತ್ವದಲ್ಲಿ 11 ಜನರ ತಂಡ ರಚಿಸಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಳ; ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೈ ಅಲರ್ಟ್

ಈ ತಂಡ ಬೂಸ್ಟರ್ ಡೋಸ್ ನೀಡಿ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕ್ರಮ ಕೈಗೊಂಡಿದೆ. ಇನ್ನು ಚಿರತೆ, ಹುಲಿ, ಸಿಂಹ ಸೇರಿದಂತೆ ಎಲ್ಲಾ ಕೇಜ್​ಗಳಿಗೆ ಬರ್ನಿಂಗ್ ಮಾಡಿ ಬಿಸಿಯಾಗಿ ಇರುವಂತೆ ನೋಡಿಕೊಳ್ಳಲಾಗುತ್ತದೆ. ಅಲ್ಲದೇ ಬ್ಲೀಚಿಂಗ್ ಪೌಡರ್, ಔಷಧಿ ಸಿಂಪಡನೆ ಮಾಡಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!