AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

80ರ ದಶಕದ ಹಳೆಯ ಶೈಲಿಯ ಫೋಟೋವನ್ನು ಎಡಿಟಿಂಗ್‌ ಮಾಡಲು ನಕಲಿ ಆ್ಯಪ್ ಬಳಸಿ ಬೆಂಗಳೂರಿನ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿದ್ದಾರೆ. ಮೊಬೈಲ್ ಹ್ಯಾಕ್ ಮಾಡಿ 50 ಸಾವಿರ ಹಣಕ್ಕೆ ಬೇಡಿಕೆ ಇಟ್ಟ ವಂಚಕರು, ಬೆತ್ತಲೆ ಫೋಟೋ ಹರಿಬಿಟ್ಟು ಬ್ಲಾಕ್‌ಮೇಲ್ ಮಾಡಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು
ಸೈಬರ್​ ವಂಚನೆImage Credit source: Getty images
ಮಂಜುನಾಥ ಎಚ್​. ವಿ.
| Edited By: |

Updated on:Sep 18, 2026 | 8:46 PM

Share

ನೆಲಮಂಗಲ, ಸೆಪ್ಟೆಂಬರ್​​ 18: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲ ದಿನಗಳಿಂದ ಎಲ್ಲರ ವಾಟ್ಸಾಪ್ ಸ್ಟೇಟಸ್‌ನಲ್ಲಿ ರಾರಾಜಿಸುತ್ತಿದ್ದ ‘80ರ ದಶಕದ ಹಳೆಯ ಶೈಲಿಯ ಫೋಟೋ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಹೊಸ ವಂಚನೆಯ ಜಾಲ ಬೀಸಿದ್ದಾರೆ. 80ರ ದಶಕದ ಲುಕ್‌ನಲ್ಲಿ ಫೋಟೋ ಎಡಿಟ್ ಮಾಡಲು ಹೋದ ವ್ಯಕ್ತಿಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ, ಅಶ್ಲೀಲ ಫೋಟೋ ಕಳುಹಿಸಿ 50 ಸಾವಿರ ರೂ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ನಕಲಿ ಆ್ಯಪ್ ಇನ್‌ಸ್ಟಾಲ್: ಖಾತೆಗೆ ಕನ್ನ

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ನಿವಾಸಿ ವಿನೋದ್ (45) ವಂಚನೆಗೊಳಗಾದ ದುರ್ದೈವಿ. ಮೂರು ದಿನಗಳ ಹಿಂದೆ ಚಾಟ್‌ ಜಿಪಿಟಿ ಮಾದರಿಯ ತಂತ್ರಜ್ಞಾನದ ಮೂಲಕ ತಮ್ಮ ಫೋಟೋವನ್ನು 80ರ ದಶಕದ ಶೈಲಿಗೆ ಬದಲಾಯಿಸಲು ಹೋಗಿ ನಕಲಿ ಆ್ಯಪ್ ಒಂದನ್ನು ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಆ್ಯಪ್ ಇನ್‌ಸ್ಟಾಲ್ ಆದ ಬೆನ್ನಲ್ಲೇ ಅವರ ಮೊಬೈಲ್ ಹಾಗೂ ಖಾತೆ ಹ್ಯಾಕ್ ಆಗಿದೆ.

LIVE TV

ಹಣ ನೀಡದ್ದಕ್ಕೆ ಸ್ನೇಹಿತರ ಗ್ರೂಪ್‌ಗಳಿಗೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು 

ಮೊಬೈಲ್ ಹ್ಯಾಕ್ ಆದ ಕೇವಲ ಐದು ನಿಮಿಷಗಳಲ್ಲಿ ವಿನೋದ್​​ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ 50 ಸಾವಿರ ರೂ ನೀಡುವಂತೆ ನೇರವಾಗಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ವಿನೋದ್ ಆತನಿಗೆ ಬೈದು ನಿರಾಕರಿಸಿದಾಗ, ‘ಹಣ ಕೊಡದಿದ್ದರೆ ನಿನ್ನ ಫೋಟೋವನ್ನು ಬೆತ್ತಲೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇನೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಆದರೂ ಹೆದರದ ವಿನೋದ್ ಕರೆಯನ್ನು ಕಟ್​ ಮಾಡಿದ್ದಾರೆ. ಆದರೆ, ಕಾಲ್ ಕಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ವಂಚಕರು ವಿನೋದ್ ಫೋಟೋವನ್ನು ಬೆತ್ತಲೆಯಾಗಿ ಎಡಿಟ್ ಮಾಡಿ, ಅವರ ಸ್ನೇಹಿತರ ವಾಟ್ಸಾಪ್ ಗ್ರೂಪ್‌ಗಳಿಗೆ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವೈರಲ್ ಆಗ್ತಿದೆ 80ರ ದಶಕದ ಟ್ರೆಂಡ್; ಚಾಟ್ ಜಿಪಿಟಿಯಲ್ಲಿ ನಿಮ್ಮ ಫೋಟೊವನ್ನು ರೆಟ್ರೋ ಲುಕ್‌ಗೆ ಹೀಗೆ ಬದಲಾಯಿಸಿ

ಇನ್ನು ಘಟನೆಯಿಂದ ಕಂಗಾಲಾದ ವಿನೋದ್​​ ತಕ್ಷಣ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುವ ಇಂತಹ ವಿಷಯಗಳ ಬೆನ್ನತ್ತಿ, ಅಪರಿಚಿತ ಹಾಗೂ ನಕಲಿ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವ ಮುನ್ನ ಸಾರ್ವಜನಿಕರು ಎಚ್ಚರವಹಿಸುವುದು ಒಳ್ಳೆಯದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Fri, 18 September 26

Follow Us
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ