AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿಗಾಗಿ ಬೈಕ್​ ಕದಿಯುತ್ತಿದ್ದವರು ಅಂದರ್, ಆರೋಪಿಗಳಿಂದ 10 ಲಕ್ಷ ರೂ, ಮೌಲ್ಯದ 9 ಬೈಕ್, 12 ಮೊಬೈಲ್ ವಶ

ಅವರದೆಲ್ಲಾ ಕಷ್ಟಾಪಟ್ಟು ಮೈ ಬಗ್ಗಿಸಿ ದುಡಿದು ತಿನ್ನಬೇಕಾದ ವಯಸ್ಸು. ಆದ್ರೆ, ಈ ವಯಸ್ಸಿನಲ್ಲೆ ಸುಲಭವಾಗಿ ಹಣ ಮಾಡಿ ಶೋಕಿ ಮಾಡೋಕ್ಕೆಂದು ಅಡ್ಡದಾರಿ ಹಿಡಿದಿದ್ರು. ಅಲ್ಲದೆ ಮನೆ ಮುಂದಿನ ಬೈಕ್ ಮತ್ತು ಒಂಟಿ ಜನರ ಬಳಿ ಮೊಬೈಲ್ ಎಗರಿಸಿ ಹಣ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದು, ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಶೋಕಿಗಾಗಿ ಬೈಕ್​ ಕದಿಯುತ್ತಿದ್ದವರು ಅಂದರ್, ಆರೋಪಿಗಳಿಂದ 10 ಲಕ್ಷ  ರೂ, ಮೌಲ್ಯದ 9 ಬೈಕ್, 12 ಮೊಬೈಲ್ ವಶ
ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್​
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 26, 2023 | 8:39 AM

Share

ಬೆಂಗಳೂರು ಗ್ರಾಮಾಂತರ, ಜು.26: ಜಿಲ್ಲೆಯ ಹೊಸಕೋಟೆ(Hoskote) ನಗರದ ವಿವಿಧೆಡೆ ನಿಲ್ಲಿಸಿದ್ದ ಬೈಕ್(Bike Theft)​ಗಳನ್ನ ಕದ್ದು ಕ್ಷಣ ಮಾತ್ರದಲ್ಲೆ ಎಸ್ಕೇಫ್ ಆಗುತ್ತಿದ್ದರು. ಈ ಕುರಿತು ಹಲವು ಪ್ರಕರಣಗಳು ಹೊಸಕೋಟೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ಹೊಸಕೋಟೆ ಪೊಲೀಸರು ಇದೀಗ ಶೋಕಿಗೋಸ್ಕರ ಹೊಸಕೋಟೆ ಸುತ್ತಾಮುತ್ತ ಬೈಕ್​ಗಳನ್ನ ಕದ್ದು, ಮಾರಾಟ ಮಾಡಿ ಮೋಜು ಮಸ್ತಿ ಮಾಡುತ್ತಿದ್ದ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನ ಬಂದಿಸಿದ್ದಾರೆ. ಇನ್ನು ಈ ಆರೋಪಿಗಳಿಂದ ರಾಯಲ್ ಎನ್ ಫಿಲ್ಡ್ ಪಲ್ಸರ್ ಸ್ಕೂಟಿ ಸೇರಿದಂತೆ 9 ಬೈಕ್​ಗಳನ್ನ ವಶಪಡಿಸಿಕೊಂಡಿದ್ದಾರೆ.

ಬೈಕ್ ಸಿಗದಿದ್ದಾಗ ಮೊಬೈಲ್ ಕಳ್ಳತನ

ಹೊಸಕೋಟೆಯ ಹಲವೆಡೆ ಮನೆ ಹಾಗೂ ಬಡಾವಣೆಗಳಲ್ಲಿ ರೌಂಡ್ಸ್ ಹಾಕುತ್ತಿದ್ದ ಇವರು, ನಂತರ ಮನೆ ಮುಂದೆ ಹಾಗೂ ಪ್ಲೈ ಒವರ್ ಕೆಳಗಡೆ ನಿಲ್ಲಿಸಿ ಹೋಗುತ್ತಿದ್ದ ಬೈಕ್​ಗಳನ್ನ ಕಳ್ಳತನ ಮಾಡಿಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು. ಜೊತೆಗೆ ಬೈಕ್​ಗಳು ಖದೀಯಲು ಸಾದ್ಯವಾಗದಿದ್ದಾಗ ಬಸ್ಟ್ಯಾಂಡ್​ನಲ್ಲಿ ಹಾಗೂ ಒಂಟಿಯಾಗಿ ಓಡಾಡುವ ಜನರ ಬಳಿ ಮೊಬೈಲ್​ಗಳನ್ನ ಕಸಿದು ಎಸ್ಕೇಪ್ ಆಗುತ್ತಿದ್ದರು. ಇನ್ನೂ ಇದೇ ರೀತಿ ಕಳೆದ ಹಲವು ತಿಂಗಳುಗಳಿಂದ ಕಳ್ಳತನ ಮಾಡಿದ್ದ 10 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 9 ದ್ವಿಚಕ್ರವಾಹನಗಳು 12 ಮೊಬೈಲ್​ಗಳನ್ನ ಹೊಸಕೋಟೆ ಪೊಲೀಸರು ವಶಪಡಿಸಿಕೊಂಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಟೊಮೆಟೊ ತುಂಬಿದ್ದ ವಾಹನ ಕಳ್ಳತನ ಪ್ರಕರಣ; ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಬಂಧನ

ಒಟ್ಟಾರೆ ಕಷ್ಟಾಪಟ್ಟು ದುಡಿದು ತಿನ್ನುವುದನ್ನ ಬಿಟ್ಟು ಸುಲಭವಾಗಿ ಬಿರಿಯಾನಿ ತಿಂದು ಮಜಾ ಮಾಡೋಣವೆಂದು ಕಳ್ಳತನದ ಹಾದಿ ಹಿಡಿದಿದ್ದ ಖದೀಮರು ಇದೀಗ ಮುದ್ದೆ ಮುರಿಯಲು ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ