AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿಗಾಗಿ ಬೈಕ್​ ಕದಿಯುತ್ತಿದ್ದವರು ಅಂದರ್, ಆರೋಪಿಗಳಿಂದ 10 ಲಕ್ಷ ರೂ, ಮೌಲ್ಯದ 9 ಬೈಕ್, 12 ಮೊಬೈಲ್ ವಶ

ಅವರದೆಲ್ಲಾ ಕಷ್ಟಾಪಟ್ಟು ಮೈ ಬಗ್ಗಿಸಿ ದುಡಿದು ತಿನ್ನಬೇಕಾದ ವಯಸ್ಸು. ಆದ್ರೆ, ಈ ವಯಸ್ಸಿನಲ್ಲೆ ಸುಲಭವಾಗಿ ಹಣ ಮಾಡಿ ಶೋಕಿ ಮಾಡೋಕ್ಕೆಂದು ಅಡ್ಡದಾರಿ ಹಿಡಿದಿದ್ರು. ಅಲ್ಲದೆ ಮನೆ ಮುಂದಿನ ಬೈಕ್ ಮತ್ತು ಒಂಟಿ ಜನರ ಬಳಿ ಮೊಬೈಲ್ ಎಗರಿಸಿ ಹಣ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದು, ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಶೋಕಿಗಾಗಿ ಬೈಕ್​ ಕದಿಯುತ್ತಿದ್ದವರು ಅಂದರ್, ಆರೋಪಿಗಳಿಂದ 10 ಲಕ್ಷ  ರೂ, ಮೌಲ್ಯದ 9 ಬೈಕ್, 12 ಮೊಬೈಲ್ ವಶ
ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್​
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 26, 2023 | 8:39 AM

Share

ಬೆಂಗಳೂರು ಗ್ರಾಮಾಂತರ, ಜು.26: ಜಿಲ್ಲೆಯ ಹೊಸಕೋಟೆ(Hoskote) ನಗರದ ವಿವಿಧೆಡೆ ನಿಲ್ಲಿಸಿದ್ದ ಬೈಕ್(Bike Theft)​ಗಳನ್ನ ಕದ್ದು ಕ್ಷಣ ಮಾತ್ರದಲ್ಲೆ ಎಸ್ಕೇಫ್ ಆಗುತ್ತಿದ್ದರು. ಈ ಕುರಿತು ಹಲವು ಪ್ರಕರಣಗಳು ಹೊಸಕೋಟೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ಹೊಸಕೋಟೆ ಪೊಲೀಸರು ಇದೀಗ ಶೋಕಿಗೋಸ್ಕರ ಹೊಸಕೋಟೆ ಸುತ್ತಾಮುತ್ತ ಬೈಕ್​ಗಳನ್ನ ಕದ್ದು, ಮಾರಾಟ ಮಾಡಿ ಮೋಜು ಮಸ್ತಿ ಮಾಡುತ್ತಿದ್ದ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನ ಬಂದಿಸಿದ್ದಾರೆ. ಇನ್ನು ಈ ಆರೋಪಿಗಳಿಂದ ರಾಯಲ್ ಎನ್ ಫಿಲ್ಡ್ ಪಲ್ಸರ್ ಸ್ಕೂಟಿ ಸೇರಿದಂತೆ 9 ಬೈಕ್​ಗಳನ್ನ ವಶಪಡಿಸಿಕೊಂಡಿದ್ದಾರೆ.

ಬೈಕ್ ಸಿಗದಿದ್ದಾಗ ಮೊಬೈಲ್ ಕಳ್ಳತನ

ಹೊಸಕೋಟೆಯ ಹಲವೆಡೆ ಮನೆ ಹಾಗೂ ಬಡಾವಣೆಗಳಲ್ಲಿ ರೌಂಡ್ಸ್ ಹಾಕುತ್ತಿದ್ದ ಇವರು, ನಂತರ ಮನೆ ಮುಂದೆ ಹಾಗೂ ಪ್ಲೈ ಒವರ್ ಕೆಳಗಡೆ ನಿಲ್ಲಿಸಿ ಹೋಗುತ್ತಿದ್ದ ಬೈಕ್​ಗಳನ್ನ ಕಳ್ಳತನ ಮಾಡಿಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು. ಜೊತೆಗೆ ಬೈಕ್​ಗಳು ಖದೀಯಲು ಸಾದ್ಯವಾಗದಿದ್ದಾಗ ಬಸ್ಟ್ಯಾಂಡ್​ನಲ್ಲಿ ಹಾಗೂ ಒಂಟಿಯಾಗಿ ಓಡಾಡುವ ಜನರ ಬಳಿ ಮೊಬೈಲ್​ಗಳನ್ನ ಕಸಿದು ಎಸ್ಕೇಪ್ ಆಗುತ್ತಿದ್ದರು. ಇನ್ನೂ ಇದೇ ರೀತಿ ಕಳೆದ ಹಲವು ತಿಂಗಳುಗಳಿಂದ ಕಳ್ಳತನ ಮಾಡಿದ್ದ 10 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 9 ದ್ವಿಚಕ್ರವಾಹನಗಳು 12 ಮೊಬೈಲ್​ಗಳನ್ನ ಹೊಸಕೋಟೆ ಪೊಲೀಸರು ವಶಪಡಿಸಿಕೊಂಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಟೊಮೆಟೊ ತುಂಬಿದ್ದ ವಾಹನ ಕಳ್ಳತನ ಪ್ರಕರಣ; ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಬಂಧನ

ಒಟ್ಟಾರೆ ಕಷ್ಟಾಪಟ್ಟು ದುಡಿದು ತಿನ್ನುವುದನ್ನ ಬಿಟ್ಟು ಸುಲಭವಾಗಿ ಬಿರಿಯಾನಿ ತಿಂದು ಮಜಾ ಮಾಡೋಣವೆಂದು ಕಳ್ಳತನದ ಹಾದಿ ಹಿಡಿದಿದ್ದ ಖದೀಮರು ಇದೀಗ ಮುದ್ದೆ ಮುರಿಯಲು ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು