AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಅಜಯ್ ಮೂಲಕ ತಾಯ್ನಾಡಿಗೆ ಆಗಮಿಸಿದ 9 ಕನ್ನಡಿಗರು; ಇಸ್ರೇಲ್​ ಪರಿಸ್ಥಿತಿ ಬಗ್ಗೆ ಹೇಳಿದ್ದಿಷ್ಟು

ನಮ್ಮ ಸುಮಾರು‌ ಜನ ಸ್ನೇಹಿತರು ಅಲ್ಲಿನ ಘಟನೆಗಳ ಬಗ್ಗೆ ಹೇಳುತ್ತಿದ್ದರೆ, ತುಂಬಾ ಬೇಸರವಾಗುತ್ತಿತ್ತು. ಆಫೀಸ್​ನಲ್ಲಿ ಬಹಳ ಭಯದಿಂದ ಎಲ್ಲರೂ ಕೆಲಸ ಮಾಡುತ್ತಿದ್ದರು. ತುಂಬಾ ಜನ ನಮ್ಮ ಸ್ನೇಹಿತರು ಗಾಜಾದಲ್ಲಿ ತೊಂದರೆ ಸಿಲುಕಿರುವುದು ಹೇಳುತ್ತಿದ್ದರು. ಇದೆಲ್ಲ ಕೇಳಿದಾಗ ತುಂಬಾ ಬೇಜಾರಾಗುತ್ತಿತ್ತು ಎಂದು ಇಸ್ರೇಲ್​ಯಿಂದ ಕನ್ನಡತಿಯೊಬ್ಬರು ಹೇಳಿದ್ದಾರೆ.

ಆಪರೇಷನ್ ಅಜಯ್ ಮೂಲಕ ತಾಯ್ನಾಡಿಗೆ ಆಗಮಿಸಿದ 9 ಕನ್ನಡಿಗರು; ಇಸ್ರೇಲ್​ ಪರಿಸ್ಥಿತಿ ಬಗ್ಗೆ ಹೇಳಿದ್ದಿಷ್ಟು
ಇಸ್ರೇಲ್​ನಿಂದ ಭಾರತಕ್ಕೆ ಬಂದ ಕನ್ನಡಿಗರು
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 14, 2023 | 3:19 PM

ಬೆಂಗಳೂರು ಗ್ರಾಮಾಂತರ, ಅ.14: ಇಸ್ರೇಲ್(Israel) ಮತ್ತು ಹಮಾಸ್(Hamas)ನಡುವೆ ಸಂಘರ್ಷ‌ ಹಿನ್ನೆಲೆ ಇದೀಗ ಇಸ್ರೇಲ್​ನಲ್ಲಿದ್ದ ಭಾರತೀಯರು(Indians), ಆಪರೇಷನ್ ಅಜಯ್ ಮೂಲಕ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. 2 ನೇ ಬ್ಯಾಚ್​ನ 12:40 ರ‌ ಏರ್ ಇಂಡಿಯಾ ವಿಮಾನದಲ್ಲಿ 6 ಜನ ಪುರುಷರು ಹಾಗೂ 3 ಮಹಿಳೆಯರ ಸೇರಿದಂತೆ ಒಟ್ಟು 9 ಜನ ಕನ್ನಡಿಗರು ಆಗಮಿಸಿದ್ದಾರೆ. ಹೌದು, ದಕ್ಷಿಣ ಮೂರ್ತಿ, ಶಾಂತಮೂರ್ತಿ, ಉತ್ತಾಶ್ ದೇವನೂರು, ಸತೀಶ್ ಚಕ್ರಪಾಣಿ, ಶಿಲ್ಪ ಶ್ರೀ, ಸುಮತಿ, ಸೂರಜ್ ಕೃಷ್ಣ, ಪುಣ್ಯಕೋಟಿ ಮತ್ತು ಅಕ್ಷರ ಅವರು ಇಸ್ರೇಲ್​ನಿಂದ ದೆಹಲಿಗೆ ಬಂದು, ಅಲ್ಲಿಂದ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಂದಿದ್ದಾರೆ. ಇವರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ತವರಿಗೆ ಕಳಿಸಲಿದ್ದಾರೆ.

ಇಸ್ರೇಲ್​ನ ಉತ್ತರ ಭಾಗದಲ್ಲಿ ಯಾವುದೇ ತೊಂದರೆ ಇರಲಿಲ್ಲ

ಕೆಂಪೇಗೌಡ ಏರ್ಪೊರ್ಟ್​ಗೆ ಇಸ್ರೇಲ್​ನಿಂದ ಆಗಮಿಸಿದವರಲ್ಲಿ ಒಬ್ಬರಾದ ಪುಣ್ಯಕೋಟಿ ಎಂಬುವವರು ಮಾತನಾಡಿ, ‘ಇಸ್ರೇಲ್​ನ ಉತ್ತರ ಭಾಗದಲ್ಲಿ ಯಾವುದೇ ತೊಂದರೆ ಇರಲಿಲ್ಲ. ಆದರೆ, ನಮ್ಮ ಸುಮಾರು‌ ಜನ ಸ್ನೇಹಿತರು ಅಲ್ಲಿನ ಘಟನೆಗಳ ಬಗ್ಗೆ ಹೇಳುತ್ತಿದ್ದರೆ, ತುಂಬಾ ಬೇಸರವಾಗುತ್ತಿತ್ತು. ಆಫೀಸ್​ನಲ್ಲಿ ಬಹಳ ಭಯದಿಂದ ಎಲ್ಲರೂ ಕೆಲಸ ಮಾಡುತ್ತಿದ್ದರು. ತುಂಬಾ ಜನ ನಮ್ಮ ಸ್ನೇಹಿತರು ಗಾಜಾದಲ್ಲಿ ತೊಂದರೆ ಸಿಲುಕಿರುವುದು ಹೇಳುತ್ತಿದ್ದರು. ಇದೆಲ್ಲ ಕೇಳಿದಾಗ ತುಂಬಾ ಬೇಜಾರಾಗುತ್ತಿತ್ತು. ಎಲ್ಲವೂ ಸರಿ ಹೋದ ನಂತರ ನಾವು ಮತ್ತೆ ವಾಪಸ್ ತೆರಳುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ:Israel Hamas Conflict Explained: ಇಸ್ರೇಲ್-ಹಮಾಸ್ ಯುದ್ಧದಲ್ಲಿ ರಣರಂಗವಾಗಿರುವ ಗಾಜಾ ಪಟ್ಟಿ ಯಾವುದು? ಏನಿದರ ಇತಿಹಾಸ?

ನಿನ್ನೆ ಬೆಂಗಳೂರಿಗೆ ಬಂದಿದ್ದ ಓರ್ವ ಕನ್ನಡಿಗ

ಹೌದು, ಇಸ್ರೇಲ್​ನಲ್ಲಿ ಯುದ್ದ ಪರಿಸ್ಥಿತಿ ಇರುವುದರಿಂದ ಅಲ್ಲಿರುವ ಭಾರತೀಯರನ್ನು ಆಪರೇಷನ್ ಅಜಯ್ ಮೂಲಕ ತವರು ದೇಶಕ್ಕೆ ಕರೆದುಕೊಂಡು ಬರುವ ಕೆಲಸ ನಡೆಯುತ್ತಿದೆ. ಅದರಂತೆ ನಿನ್ನೆ(ಅ.13) ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿತ್ತು. ಅದರಲ್ಲಿ ವಿಜಯಪುರ ಮೂಲದ ಈರಣ್ಣ ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿ, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ