AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿ, ಮಳೆಯಿಂದ ಮನೆ ಮೇಲ್ಚಾವಣಿ ಶೀಟ್ ಬಿದ್ದು 9 ತಿಂಗಳ ಮಗು ಸಾವು; 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಮೃತ ಮಗುವಿನ ಮನೆಗೆ ಭೇಟಿ ನೀಡಿದ್ದ ಅಧಿಕಾರಿಗಳು ಮಗುವಿನ ತಂದೆ- ತಾಯಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಪಕ್ಕದ ಮನೆ ಮೇಲ್ಚಾವಣಿ ಮೇಲೆ ಇಟ್ಟಿದ್ದ ಇಟ್ಟಿಗೆ ಜನಾರ್ದನ್ ಮನೆ ಶೀಟ್ ಮೇಲೆ ಬಿದ್ದಿತ್ತು.

ಗಾಳಿ, ಮಳೆಯಿಂದ ಮನೆ ಮೇಲ್ಚಾವಣಿ ಶೀಟ್ ಬಿದ್ದು 9 ತಿಂಗಳ ಮಗು ಸಾವು; 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ
ಮಗು ಕಳೆದುಕೊಂಡ ಶ್ವೇತಾ, ಜನಾರ್ದನ್
TV9 Web
| Edited By: sandhya thejappa|

Updated on:Jun 05, 2022 | 1:12 PM

Share

ದೇವನಹಳ್ಳಿ: ನಿನ್ನೆ (ಜೂನ್ 4) ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ (Rain) ಮನೆ ಮೇಲ್ಚಾವಣಿ ಶೀಟ್ ಬಿದ್ದು ಮಗು (Baby) ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ನೀರುಗುಂಟೆಪಾಳ್ಯದಲ್ಲಿ ನಡೆದಿದೆ. ಶ್ವೇತಾ, ಜನಾರ್ದನ್ ಎಂಬ ದಂಪತಿ ಮಗು ಮೃತಪಟ್ಟಿದೆ. ತಲೆ ಮೇಲೆ ಶೀಟ್ ಬಿದ್ದಿದ್ದರಿಂದ ಮಗುವಿಗೆ ತೀವ್ರ ರಕ್ತಸಾವ್ರವಾಗಿ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ. ಸಾವನ್ನಪಿದ ಮಗುವಿನ ಮನೆಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಶಾಸಕ ನಿಸರ್ಗ ನಾರಾಯಣಸ್ವಾಮಿ ಭೇಟಿ ನೀಡಿ, ಮನೆಯಲ್ಲಿ ಮುರಿದು ಬಿದ್ದ ಶೀಟ್ ಪರಿಶೀಲನೆ ಮಾಡಿದರು.

ಮೃತ ಮಗುವಿನ ಮನೆಗೆ ಭೇಟಿ ನೀಡಿದ್ದ ಅಧಿಕಾರಿಗಳು ಮಗುವಿನ ತಂದೆ- ತಾಯಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಪಕ್ಕದ ಮನೆ ಮೇಲ್ಚಾವಣಿ ಮೇಲೆ ಇಟ್ಟಿದ್ದ ಇಟ್ಟಿಗೆ ಜನಾರ್ದನ್ ಮನೆ ಶೀಟ್ ಮೇಲೆ ಬಿದ್ದಿತ್ತು. ಹೀಗಾಗಿ ಮನೆಯಲ್ಲಿದ್ದ 9 ತಿಂಗಳ ಮಗು ತಲೆ ಮೇಲೆ ಬಿದ್ದು ದುರ್ಘಟನೆ ನಡೆದಿದೆ. ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

ಇದನ್ನೂ ಓದಿ
Image
Hyderabad Gangrape: ಹೈದರಾಬಾದ್ ಗ್ಯಾಂಗ್​ರೇಪ್ ಪ್ರಕರಣ: ನಾಲ್ಕನೇ ಆರೋಪಿಯ ಬಂಧನ
Image
Krishna Pandey: 6,6,6,6,6,6: 15 ವರ್ಷದ ಬಾಲಕ ಕೃಷ್ಣ ಪಾಂಡೆಯಿಂದ 6 ಎಸೆತಕ್ಕೆ 6 ಸಿಕ್ಸರ್: ವಿಡಿಯೋ
Image
ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ
Image
ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ

ಮನೆಗಳ ಮೇಲೆ ಬಿದ್ದ ಬೃಹತ್ ಮರ: ಮಳೆಗೆ ಬೃಹತ್ ಮರ ಬಿದ್ದು ಬೆಂಗಳೂರು ಮಾರತ್ತಹಳ್ಳಿಯ ಸಂಜಯ್ ನಗರದ 10ನೇ ಕ್ರಾಸ್​ನಲ್ಲಿ ಮನೆಗಳಿಗೆ ಹಾನಿಯಾಗಿದೆ. ಮನೆಗಳ ಮೇಲೆ ಮರ ಬಿದ್ದ ಹಿನ್ನೆಲೆ ನಿವಾಸಿಗಳು ರಾತ್ರಿಯೆಲ್ಲಾ ಅಕ್ಕಪಕ್ಕದ‌ ಮನೆಯಲ್ಲಿ‌ ಕಾಲ ಕಳೆದಿದ್ದಾರೆ.  ಘಟನೆ ನಡೆದು ಇಲ್ಲಿಯವರೆಗೂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಬಿಬಿಎಂಪಿ ಕಂಟ್ರೋಲ್​ ರೂಮ್​ಗೆ ಕರೆ ಮಾಡಿದರೆ ಸ್ಪೀಕರಿಸುತ್ತಿಲ್ಲ. ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ಇದೀಗ ಬೆಸ್ಕಾಂ ಅಧಿಕಾರಿಗಳು ಬಂದು ಮರಗಳನ್ನ‌ ತೆರವುಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sun, 5 June 22

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ