AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​​​ಗೆ ಲಾರಿ ಡಿಕ್ಕಿ; 3 ವರ್ಷದ ಮಗು ಸಾವು, ತಂದೆ-ತಾಯಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ (Accident) ವಾಗಿದ್ದು, ತಂದೆ ಆಂಜಿನೇಯ-ತಾಯಿ ಮಮತಾಗೆ ಗಂಭೀರ ಗಾಯವಾದರೆ, ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಬೈಕ್​​​ಗೆ ಲಾರಿ ಡಿಕ್ಕಿ; 3 ವರ್ಷದ ಮಗು ಸಾವು, ತಂದೆ-ತಾಯಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ 3 ವರ್ಷದ ಮಗು ಸಾವು, ತಂದೆ-ತಾಯಿಗೆ ಗಂಭೀರ ಗಾಯ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 21, 2024 | 3:46 PM

Share

ಬೆಂಗಳೂರು ಗ್ರಾಮಾಂತರ, ಜೂ.21: ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ (Accident) ವಾಗಿದ್ದು, ತಂದೆ ಆಂಜಿನೇಯ-ತಾಯಿ ಮಮತಾ ಎಂಬುವವರಿಗೆ ಗಂಭೀರ ಗಾಯವಾದರೆ, ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ. ಧನ್ವಿತ್(3) ಮೃತ ಮಗು. ಅಪಘಾತ ಮಾಡಿ ಲಾರಿಯನ್ನು ಚಾಲಕ ಒಂದು ಕಿ.ಮೀ ದೂರ ಚಲಿಸಿಕೊಂಡು ಹೋಗಿದ್ದಾನೆ. ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫುಟ್ ಪಾತ್ ಏರಿ ಅಂಗಡಿಗೆ ನುಗ್ಗಿದ ಪಿಕಪ್ ವಾಹನ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣ ತಪ್ಪಿ ಪಿಕಪ್ ವಾಹನ ಅಪಘಾತವಾದ ಘಟನೆ ನಿನ್ನೆ ಮಧ್ಯಾಹ್ನ 2.30 ಕ್ಕೆ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಫುಟ್ ಪಾತ್ ಏರಿ ಅಂಗಡಿಗೆ ನುಗ್ಗಿದ್ದು, ಓರ್ವ ವ್ಯಕ್ತಿಯ ಕಾಲು ಮುರಿದಿದೆ. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಸವಾರ ಅದೃಷ್ಟವಶಾತ್​ ಪಾರಾಗಿದ್ದಾನೆ. ಗಾಯಾಳು ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ

ರೈಲಿಗೆ ಸಿಲುಕಿ ಇಂಜಿನಿಯರಿಂಗ್​​ ವಿದ್ಯಾರ್ಥಿನಿಗೆ ಗಾಯ

ಮಂಡ್ಯ: ರೈಲಿಗೆ ಸಿಲುಕಿ ಮಂಡ್ಯದ ಪಿಇಎಸ್ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ನಗರದ ಕನಕ ಭವನ ಹಿಂಭಾಗದ ರೈಲೆ ಟ್ರ್ಯಾಕ್​ನಲ್ಲಿ ನಡೆದಿದೆ. ಲಾವಣ್ಯ(18) ರೈಲಿಗೆ‌ ಸಿಲುಕಿ ಗಾಯಗೊಂಡ ವಿದ್ಯಾರ್ಥಿನಿ. ಇನ್ನು ಮೇಲ್ನೋಟಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇಂದು (ಜೂ.21) ಬೆಳಿಗ್ಗೆ ಕಾಲೇಜಿಗೆ ಬಂದಿದ್ದರು. ಮಧ್ಯಾಹ್ನದ ವೇಳೆ ರೈಲಿಗೆ ಸಿಲುಕಿ ಗಂಭೀರ ಗಾಯವಾಗಿದೆ. ಕೂಡಲೇ ರೈಲ್ವೆ ಪೊಲೀಸರು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಧ್ಯ ವಿದ್ಯಾರ್ಥಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು