AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಬೈಕ್ ಸಾಗಿಸ್ತಿದ್ದ ಕಂಟೈನರ್​ಗೆ ಬೆಂಕಿ; 40 ಬೈಕ್​ಗಳ ಪೈಕಿ 20 ಬೆಂಕಿಗಾಹುತಿ

ರಾಜ್ಯ ಗಡಿಭಾಗ ತಮಿಳುನಾಡಿನ ಥಳಿರಸ್ತೆಯ ಉಳಿವೀರಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ಬೈಕ್ ಸಾಗಿಸುತ್ತಿದ್ದ ಕಂಟೈನರ್​ಗೆ ಬೆಂಕಿ ತಗುಲಿ ಕಂಟೈನರ್ ಜೊತೆಗೆ 20 ಎಲೆಕ್ಟ್ರಾನಿಕ್ ಬೈಕ್​ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ವಾಹನದಲ್ಲಿದ್ದ 40 ಎಲೆಕ್ಟ್ರಾನಿಕ್ ಬೈಕ್​ಗಳ ಪೈಕಿ 20 ಬೈಕ್​ಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಲೆಕ್ಟ್ರಾನಿಕ್ ಬೈಕ್ ಸಾಗಿಸ್ತಿದ್ದ ಕಂಟೈನರ್​ಗೆ ಬೆಂಕಿ; 40 ಬೈಕ್​ಗಳ ಪೈಕಿ 20 ಬೆಂಕಿಗಾಹುತಿ
ಎಲೆಕ್ಟ್ರಾನಿಕ್ ಬೈಕ್ ಸಾಗಿಸ್ತಿದ್ದ ಕಂಟೈನರ್​ಗೆ ಬೆಂಕಿ
ರಾಮು, ಆನೇಕಲ್​
| Edited By: |

Updated on: Mar 01, 2024 | 8:35 PM

Share

ಬೆಂಗಳೂರು ಗ್ರಾಮಾಂತರ, ಮಾ.01: ಎಲೆಕ್ಟ್ರಾನಿಕ್ ಬೈಕ್(Electric Bike)ಸಾಗಿಸುತ್ತಿದ್ದ ಕಂಟೈನರ್​ಗೆ ಬೆಂಕಿ ತಗುಲಿ ಕಂಟೈನರ್ ಜೊತೆಗೆ 20 ಎಲೆಕ್ಟ್ರಾನಿಕ್ ಬೈಕ್​ಗಳು ಬೆಂಕಿಗಾಹುತಿಯಾದ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಥಳಿರಸ್ತೆಯ ಉಳಿವೀರಹಳ್ಳಿಯಲ್ಲಿ ನಡೆದಿದೆ. ಕಂಪನಿಯಿಂದ 40 ಎಲೆಕ್ಟ್ರಾನಿಕ್ ಬೈಕ್​ಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನ, ಬೆಂಗಳೂರಿನ ಜಯನಗರ ಶೋ ರೂಮ್​ಗೆ ಬರಬೇಕಿತ್ತು. ಆದರೆ, ಮಾರ್ಗ ಮಧ್ಯೆ ರಸ್ತೆಯಲ್ಲಿಯೇ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತಗುಲಿದ ಕೂಡಲೇ ಕಂಟೈನರ್ ಧಗದಧಗನೆ ಹೊತ್ತಿ ಉರಿದಿದ್ದು. ವಾಹನದಲ್ಲಿದ್ದ 40 ಎಲೆಕ್ಟ್ರಾನಿಕ್ ಬೈಕ್​ಗಳ ಪೈಕಿ 20 ಬೈಕ್​ಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಮತ್ತಿಗೆರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿ; ಮೂವರಿಗೆ ಗಂಭೀರ ಗಾಯ

ಚಾಮರಾಜನಗರ: ತಾಲೂಕಿನ ಬದನಗುಪ್ಪೆ ಕೈಗಾರಿಕಾ ವಲಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾದ ಘಟನೆ ನಡೆದಿದ್ದು, ಬಸ್​​ನಲ್ಲಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಮೂವರು ಗಂಭೀರ ಗಾಯವಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ಗಾಯಾಳುಗಳಿಗೆ ಸಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್ ಪ್ಯಾಕ್ಟರಿಯಿಂದ ಬರುವ ವೇಳೆ ಈ ದುರ್ಘಟನೆ ನಡೆದಿದ್ದು, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ: 30 ರಿಂದ 40 ವಾಹನಗಳು ಬೆಂಕಿಗಾಹುತಿ

ಬ್ರೆಕ್‌ ಫೇಲಾಗಿ ಆಟೋ, ಸ್ಕೂಟಿಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್

ಗದಗ: ನಗರದ ಹಳೆ ಬಸ್​ ನಿಲ್ದಾಣದ ಬಳಿ ಕೆಎಸ್​ಆರ್​ಟಿಸಿ ಬಸ್​ವೊಂದು ಬ್ರೇಕ್​​ ಫೇಲಾಗಿ ಆಟೋ ಹಾಗೂ ಸ್ಕೂಟಿಗೆ ಡಿಕ್ಕಿಯಾಗಿ ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಬಸ್​​ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದು, ಆಟೋದಲ್ಲಿದ್ದ ಓರ್ವ ಯುವಕ, ವಿದ್ಯಾರ್ಥಿನಿಗೆ ಗಾಯವಾಗಿದೆ. ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಈ ಬಸ್ ಗದಗ ನಗರದ ಬಸ್​ ನಿಲ್ದಾಣದಿಂದ ಹಾತಲಗೇರಿ ಗ್ರಾಮಕ್ಕೆ ಹೊರಟಿತ್ತು​. ಈ ಕುರಿತು ಗದಗ ಶಹರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!