AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ವಯಸ್ಸಾದ ತಾಯಿಯನ್ನು ರಸ್ತೆ ಬದಿ ಬಿಟ್ಟು ಮಗಳು, ಅಳಿಯ ಪರಾರಿ; ಮಾನವೀಯತೆ ತೋರಿದ ಗ್ರಾಮಸ್ಥರು

ಪತಿಯೊಂದಿಗೆ ಸೇರಿಕೊಂಡು ತನ್ನ ವಯಸ್ಸಾದ ತಾಯಿಯನ್ನು ಮಗಳು ರಾತ್ರೋರಾತ್ರಿ ರಸ್ತೆ ಬದಿ ಬಿಟ್ಟು ಪರಾರಿಯಾದ ಅಮಾಯನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​​​ ತಾಲೂಕಿನ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 80 ವರ್ಷದ ವೃದ್ಧೆ ಓಬಮ್ಮ ಅವರನ್ನು ಗ್ರಾಮಸ್ಥರು ರಕ್ಷಿಸಿ ಮಾನವೀಯತೆ ತೋರಿದರು.

ಆನೇಕಲ್: ವಯಸ್ಸಾದ ತಾಯಿಯನ್ನು ರಸ್ತೆ ಬದಿ ಬಿಟ್ಟು ಮಗಳು, ಅಳಿಯ ಪರಾರಿ; ಮಾನವೀಯತೆ ತೋರಿದ ಗ್ರಾಮಸ್ಥರು
ವಯಸ್ಸಾದ ತಾಯಿಯನ್ನು ರಸ್ತೆ ಬದಿ ಬಿಟ್ಟು ಮಗಳು, ಅಳಿಯ ಪರಾರಿ, ಮಾನವೀಯತೆ ತೋರಿದ ಗ್ರಾಮಸ್ಥರು
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on: Jan 06, 2024 | 3:26 PM

ಆನೇಕಲ್, ಜ.6: ಪತಿಯೊಂದಿಗೆ ಸೇರಿಕೊಂಡು ತನ್ನ ವಯಸ್ಸಾದ ತಾಯಿಯನ್ನು ಮಗಳು ರಸ್ತೆ ಬದಿ ಬಿಟ್ಟು ಪರಾರಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ (Anekal)​​​ ತಾಲೂಕಿನ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ವೃದ್ಧೆ ತಾಯಿಯನ್ನು ಕಾರಿನಿಂದ ಇಳಿಸಿ ಮಗಳು ಮತ್ತು ಅಳಿಯ ಪರಾರಿಯಾಗಿದ್ದಾರೆ.

ದೊಮ್ಮಸಂದ್ರದಲ್ಲಿ ಮಗಳು ಆಶಾರಾಣಿ, ಅಳಿಯ ಮಂಜುನಾಥ್ ಹಾಗೂ ಮೊಮ್ಮಕ್ಕಳ ಜೊತೆ ವಾಸ ಓಬಮ್ಮ ವಾಸವಾಗಿದ್ದಳು. ಈಕೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಹೆತ್ತವ್ವ ಎನ್ನುವುದನ್ನು ನೋಡದೆ ರಾತ್ರಿ ವೇಳೆ ತನ್ನ ಪತಿಯೊಂದಿಗೆ ಸೇರಿ ಮಗಳು ಆಶಾರಾಣಿ ಆಕೆಯನ್ನು ದೇಗುಲವೊಂದರ ಬಳಿ ಕರೆತಂದು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: Viral Video: ಅಮಾನವೀಯ.. ಮೂಕ ಪ್ರಾಣಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಕೊನೆಗೆ ಏನಾಯ್ತು?

ದೇವಾಲಯದ ಬಳಿ ಚಳಿಯಲ್ಲಿ ಮಲಗಿದ್ದ ವೃದ್ಧೆಯನ್ನು ನೋಡಿದ ಗ್ರಾಮಸ್ಥರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಗಳು ಹಾಗೂ ಅಳಿಯ ತನ್ನನ್ನು ಬಿಟ್ಟು ಹೋಗಿರುವುದಾಗಿ ಹೇಳಿದ್ದಾಳೆ. ಬಳಿಕ ಆಕೆಯನ್ನು ಗ್ರಾಮಸ್ಥರು ರಕ್ಷಿಸಿ ಬನ್ನೇರುಘಟ್ಟದ ಏರ್​​​ಹ್ಯೂಮಟೇರಿಯನ್​​​ ಹೋಮ್ಸ್ ಆಶ್ರಮಕ್ಕೆ ಸೇರಿಸಿ ಮಾನವೀಯತೆ ತೋರಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ರಾತ್ರಿ ವೇಳೆ ದೇಗುಲದ ಬಳಿ ತಾಯಿಯನ್ನು ಕಾರಿನಿಂದ ಇಳಿಸಿ ಮಗಳು ಮತ್ತು ಅಳಿಯ ಹೋಗಿರುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆ​​ ಮೇಲೆ ಹಲ್ಲೆ ನಡೆಸಿರುವ ಗುರುತು ಕೂಡ ಪತ್ತೆಯಾಗಿದ್ದು, ಹಲ್ಲೆಯಿಂದ ಕಾಲು ಮುರಿತ ಹಾಗೂ ಮೈಮೇಲಿನ ಗಾಯಗಳಿಂದ ವೃದ್ಧೆ ನರಳಾಟ ನಡೆಸುತ್ತಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ