ಇಟ್ಟಿಗೆ ಕದ್ದಿದ್ದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು! ಎಸ್​ಪಿ ಬಳಿ ತೆರಳುವಂತೆ ಕಚೇರಿ ಸೂಚನೆ

ಇಟ್ಟಿಗೆ ಕಳ್ಳತನವಾದಾಗ ವೆಂಕಟೇಗೌಡ ದೊಡ್ಡವೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ದೂರು ನೀಡಿದ್ದಾರೆ.

ಇಟ್ಟಿಗೆ ಕದ್ದಿದ್ದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು! ಎಸ್​ಪಿ ಬಳಿ ತೆರಳುವಂತೆ ಕಚೇರಿ ಸೂಚನೆ
ಗೃಹ ಸಚಿವ ಆರಗ ಜ್ಞಾನೇಂದ್ರ
Edited By: sandhya thejappa

Updated on: Jun 04, 2022 | 1:22 PM

ಬೆಂಗಳೂರು: ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ತಿಪ್ಪೂರು ಗ್ರಾಮದ ವೆಂಕಟೇಗೌಡ ಎಂಬ ವ್ಯಕ್ತಿ 30 ಸಿಮೆಂಟ್ ಇಟ್ಟಿಗೆ (Bricks) ಕಳ್ಳತನವಾಗಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ಇಟ್ಟಿಗೆ ಕಳ್ಳತನವಾದಾಗ ವೆಂಕಟೇಗೌಡ ದೊಡ್ಡವೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಮನೆಯ ಆವರಣದಿಂದ ಪಕ್ಕದ ಮನೆಯ ವ್ಯಕ್ತಿ ಇಟ್ಟಿಗೆ ಕದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರು ಸ್ವೀಕರಿಸಿದ ಗೃಹ ಸಚಿವರ ಕಚೇರಿ ಬೆಂಗಳೂರು ಗ್ರಾಮಾಂತರ ಎಸ್​ಪಿ ಬಳಿ ತೆರಳುವಂತೆ  ದೂರುದಾರ ವೆಂಕಟೇಗೌಡ ಸೂಚನೆ ನೀಡಿದೆ.

ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು:

ಇದನ್ನೂ ಓದಿ
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
EPF Non Refundable Advance: ಮರುಪಾವತಿಸುವ ಅಗತ್ಯ ಇಲ್ಲದ ಇಪಿಎಫ್​ ಮುಂಗಡ ಪಡೆಯುವುದು ಹೇಗೆ?
ಪೀರ್​ಪಾಷಾ ದರ್ಗಾ ವಿವಾದ: ಪ್ರಮೋದ್ ಮುತಾಲಿಕ್​ಗೆ ಬೀದರ್ ಜಿಲ್ಲೆ ಪ್ರವೇಶ ನಿರ್ಬಂಧ
Best Smartphone: ಇಲ್ಲಿದೆ ನೋಡಿ 20,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​​ಫೋನ್​ಗಳು

ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆ ಪರೀಕ್ಷಾ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ. ಕೆ.ಎಸ್.ಲಿಂಗೇಶ್, ಪಿ.ರಾಜೀವ್, ಸುನಿಲ್ ನಾಯ್ಕ್, ರಘುಪತಿ ಭಟ್, ರಾಜಕುಮಾರ್ ತೇಲ್ಕೂರ್, ಹರೀಶ್ ಪೂಂಜಾ, ಲಾಲಾಜಿ ಮೆಂಡನ್, ಜೆಎನ್​ ಗಣೇಶ್, ರಾಘವೇಂದ್ರ ಹಿಟ್ನಾಳ್ ಗೃಹ ಸಚಿವರಿಗೆ ಪತ್ರ ಬರೆದಿರುವ ಶಾಸಕರು. ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಪರೀಕ್ಷೆ ರದ್ದುಪಡಿಸಲಾಗಿದೆ.  ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಪತ್ರದಲ್ಲಿ ಶಾಸಕರು ತಿಳಿಸಿದ್ದಾರೆ.

ಇದನ್ನೂ ಓದಿ: ಪೀರ್​ಪಾಷಾ ದರ್ಗಾ ವಿವಾದ: ಪ್ರಮೋದ್ ಮುತಾಲಿಕ್​ಗೆ ಬೀದರ್ ಜಿಲ್ಲೆ ಪ್ರವೇಶ ನಿರ್ಬಂಧ

ಪಿಎಸ್​ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು. ಜೊತಗೆ ಬಡಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತನಿಖೆ ಪೂರ್ಣವಾಗುವ ಮೊದಲೇ ಪಿಎಸ್​ಐ ಪರೀಕ್ಷೆ ರದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕು ಎಂದು ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Sat, 4 June 22

Web contact

TV9 Kannada

Read More
Follow Us