AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಭ್ರಮೆ, ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾವಿನ ನಂತರ ಸ್ವರ್ಗ ಅಥವಾ ನರಕವು ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ, ಅದು ವ್ಯಕ್ತಿಯ ಕಾರ್ಯಗಳನ್ನು ಆಧರಿಸಿರುತ್ತದೆ. ಇನ್ನು ಇಂತಹ ದಿನ ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಅಂತೆಲ್ಲಾ ಹೇಳಲಾಗುತ್ತಿದೆ. ಅದರಂತೆ ಹಬ್ಬದ ಇದನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲೇ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಭ್ರಮೆ, ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಕೃಷ್ಣಮೂರ್ತಿ(40) ಮೃತ ದುರ್ದೈವಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 03, 2024 | 6:18 PM

Share

ಬೆಂಗಳೂರು, (ನವೆಂಬರ್ 03): ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಭೂಸಂದ್ರದ ಕೃಷ್ಣಮೂರ್ತಿ(40) ಮೃತ ದುರ್ದೈವಿ. ನಿನ್ನೆ(ನವೆಂಬರ್ 02) ದೀಪಾವಳಿ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚೆ ನಡೆಸಿದ್ದಾನೆ. ಬಳಿಕ ನೇಣುಬಿಗಿದ್ದುಕೊಂಡು ಸಾವಿಗೆ ಶರಣಾಗಿದ್ದಾನೆ.

ಮೃತ ಕೃಷ್ಣಮೂರ್ತಿ 22/11/2022ರಂದು ತನ್ನ ಪತ್ನಿಯನ್ನ ಕೊಂದು ಜೈಲು ಸೇರಿದ್ದ. ಎರಡು ವರ್ಷ ಜೈಲಿನಲ್ಲಿ ಇದ್ದು ಕಳೆದ 6 ತಿಂಗಳ ಹಿಂದೆ ಬಿಡುಗಡೆಯಾಗಿ ಆಚೆ ಬಂದಿದ್ದ. ಆದರೆ ತಲೆಯಲ್ಲಿ ಅದೇಗೆ ಯೋಚನೆ ಬಂತೋ ಏನೋ ನಿನ್ನೆ ಸ್ನೇಹಿತರೊಂದಿಗೆ ಹಬ್ಬ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚಿಸಿ ಬಳಿಕ ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಹೋರಿ ತಿವಿದು ಯುವಕ ದುರ್ಮರಣ

ಕಾರವಾರ: ಹೋರಿ ತಿವಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿರುವ ಕಲ್ಮೇಶ್ವರ ಮಠ ಬಳಿ ನಡೆದಿದೆ. ಚಿಗಳ್ಳಿಯ ಪರಮೇಶ್ ಸಿದ್ದಪ್ಪ ಹರಿಜನ(21) ಮೃತಪಟ್ಟ ಯುವಕ. ಪರಮೇಶ್ ಸಿದ್ದಪ್ಪ ಕಲ್ಮೇಶ್ವರ ಮಠದ ಬಳಿ ಹೋರಿ ಹಬ್ಬ ನೋಡಲು ಹೋಗಿದ್ದ. ಆ ವೇಳೆ ಏಕಾಏಕಿ ಹೋರಿ ಯುವಕನ ಮೇಲೆ ದಾಳಿ ಮಾಡಿ ತಿವಿದಿದೆ. ಕೂಡಲೇ ಪರಮೇಶ್ ಸಿದ್ದಪ್ಪನನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ, ತೀವ್ರ ರಕ್ತಸ್ರಾವದಿಂದ ಪರಮೇಶ್ ಸಿದ್ದಪ್ಪ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ