Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಎಂದು ಅಟ್ಯಾಕ್ ಮಾಡಿ ಪ್ರೀತಿಸಿ ಮದುವೆಯಾಗಿದ್ದ ವಧುವನ್ನು ಕಿಡ್ನಾಪ್ ಮಾಡಿದ ಪೋಷಕರು

ಗಂಗಾಧರ್ ಹಾಗೂ ಜಲಜಾ ಮೇ 25ರಂದು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮೇ 30ಕ್ಕೆ ವಿವಾಹ ನೊಂದಣಾಧಿಕಾರಿಗಳ ಕಚೇರಿಯಲ್ಲಿ ನೊಂದಣಿ ಮಾಡಿಸಿಕೊಂಡಿದ್ದರು.

ಪೊಲೀಸರು ಎಂದು ಅಟ್ಯಾಕ್ ಮಾಡಿ ಪ್ರೀತಿಸಿ ಮದುವೆಯಾಗಿದ್ದ ವಧುವನ್ನು ಕಿಡ್ನಾಪ್ ಮಾಡಿದ ಪೋಷಕರು
ಪ್ರೀತಿಸಿ ಮದುವೆಯಾಗಿದ್ದ ಗಂಗಾಧರ್ ಮತ್ತು ಜಲಜ
Follow us
TV9 Web
| Updated By: sandhya thejappa

Updated on:Jun 01, 2022 | 11:11 AM

ನೆಲಮಂಗಲ: ಪ್ರೀತಿಸಿ (Love) ಮದುವೆಯಾದ ವಧುವನ್ನ ಪೋಷಕರೇ ಕಿಡ್ನಾಪ್ (Kidnap) ಮಾಡಿರುವ ಘಟನೆ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿ ನಡೆದಿದೆ. ಪೋಷಕರ ವಿರೋಧದ ನಡುವೆ ನೆಲಮಂಗಲ ತಾಲೂಕಿನ ವೀರಸಾಗರ ನಿವಾಸಿಗಳಾದ ಗಂಗಾಧರ್ ಮತ್ತು ಜಲಜ ವಿವಾಹವಾಗಿದ್ದರು. ಮದುವೆಯಾದ ನಂತರ ವರನ ಅಕ್ಕನ ಮನೆಯಲ್ಲಿ ನವಜೋಡಿ ಇದ್ದರು. ಈ ವೇಳೆ 20 ಜನರ ಗುಂಪೊಂದು ಬಂದು ವಧುವನ್ನು ಅಪಹರಿಸಿದ್ದಾರೆ. ಮನೆಯವರಿಗೆಲ್ಲ ಥಳಿಸಿ ಹುಡುಗಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಗಂಗಾಧರ್ ಹಾಗೂ ಜಲಜಾ ಮೇ 25ರಂದು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮೇ 30ಕ್ಕೆ ವಿವಾಹ ನೊಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ವರನ ಅಕ್ಕ ಸಾಕಮ್ಮ ಎಂಬುವವರ ಮನೆಗೆ ವಧು ತಂದೆ ದೇವರಾಜು, ಸಂಬಂಧಿ ಮಹೇಶ್ ಸೇರಿ ಸುಮಾರು 20ಕ್ಕೂ ಹೆಚ್ಚು ಜನರು ಬಂದಿದ್ದಾರೆ. ಬ್ಯಾಡರಹಳ್ಳಿ ಪೊಲೀಸರು ಎಂದು ಅಟ್ಯಾಕ್ ಮಾಡಿದ್ದ ಗುಂಪು, ಮನೆಯಲ್ಲಿ ಇದ್ದವರಿಗೆಲ್ಲ ಥಳಿಸಿ ಹುಡುಗಿ ಜಲಜಾಳನ್ನ ಅಪಹರಿಸಿದ್ದಾರೆ.

ಇದನ್ನೂ ಓದಿ: Eye Care: ಬೇಸಿಗೆಯಲ್ಲಿ ನಿಮ್ಮ ಕಣ್ಣುಗಳನ್ನು ಜೋಪಾನ ಮಾಡುವುದು ಹೇಗೆ?

ಇದನ್ನೂ ಓದಿ
Image
Global Running Day 2022: ಎದ್ರೀ ಯವ್ವಾ, ನಾವು ಎದ್ವೀ ನೋಡ್ರಿವಾ ಈಗ…
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
ದೃಷ್ಟಿದೋಷವಿರುವ ದೆಹಲಿ ಶಾಲಾ ಶಿಕ್ಷಕಿಯ ಮೇರು ಸಾಧನೆ: 5ನೇ ಪ್ರಯತ್ನದಲ್ಲಿ ಯುಪಿಎಸ್​ಸಿ​ ಪಾಸ್, 48ನೇ ರ‍್ಯಾಂಕ್
Image
ಸುವರ್ಣಾಸೌಧದ ಮುಖ್ಯ ದ್ವಾರದ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ

ಪ್ರಕರಣ ಬಗ್ಗೆ ಮಾಹಿತಿ ನೀಡಿದ ವರ ಗಂಗಾಧರ್, ಜಲಜ ನನ್ನ ಮಾವನ ಮಗಳು. ಎರಡು ವರ್ಷದಿಂದ ಪ್ರೀತಿಸುತ್ತಿದ್ದೇವೆ. ಪ್ರೀತಿ ಬಗ್ಗೆ ನಿಮ್ಮ ಮನೆಯಲ್ಲಿ ಮಾತನಾಡು ಅಂತ ಆಕೆಗೆ ಹೇಳಿದ್ದೆ. ಅವಳು ನನ್ನ ತುಂಬಾ ಇಷ್ಟಪಡುತ್ತಿದ್ದಾಳೆ. ನಾವು ಮೇ 25ಕ್ಕೆ ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ಆ ನಂತರ ಅವರ ಮನೆಯವರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು ಎಂದು ಹೇಳಿದರು.

ಇನ್ನು ವರನ ಅಕ್ಕ ಸಾಕಮ್ಮ ಮಾತನಾಡಿ, ನಾವು ಮನೆಯಲ್ಲಿ ನಾಲ್ಕು ಜನ ಇದ್ದೆವು. ಆಗ ಸುರೇಶ್ ಎಂಬುವವನು ಏಕಾಏಕಿ ಮನೆಗೆ ನುಗ್ಗಿದ. ನಮಗೆ ಹೊಡೆದು ಜಲಜನ ಎಳೆದುಕೊಂಡು ಹೋದ. ಅವರು ಸುಮಾರು 20 ಜನ ಇದ್ದರು. ನಮ್ಮಿಂದ ಅವಳನ್ನ ರಕ್ಷಿಸಕ್ಕೆ ಆಗಲಿಲ್ಲ ಅಂತ ಕ್ಯಾಮೆರಾ ಮುಂದೆ ಕಣ್ಣೀರು ಹಾಕಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 am, Wed, 1 June 22

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ