AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ

ಬೆಂಗಳೂರಿನ ದಾಸರಹಳ್ಳಿಯಲ್ಲಿ ಓರ್ವ ಮಲ ತಂದೆ ತನ್ನ 9 ಮತ್ತು 6 ವರ್ಷದ ಮಕ್ಕಳಿಗೆ ಬಿಸಿನೀರಿನ ಹೀಟರ್‌ನಿಂದ ಬರೆ ಎಳೆದಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳು ತೀಟೆ ಮಾಡುತ್ತಾರೆ ಎಂದು ಆರೋಪಿಸಿ ಈ ಕೃತ್ಯ ಎಸಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಕ್ಕಳನ್ನು ರಕ್ಷಿಸಿ ತಾಯಿಗೆ ತಿಳಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Jan 26, 2025 | 6:14 PM

Share

ನೆಲಮಂಗಲ, ಜನವರಿ 26: ಬೆಳಗಾವಿಯಲ್ಲಿ ಇತ್ತೀಚೆಗೆ ತನ್ನ 4 ವರ್ಷದ ಮಗಳಿಗೆ ಮಲತಾಯಿ ಚಿತ್ರಹಿಂಸೆ ನೀಡಿದ್ದ ಘಟನೆ ನಡೆದಿತ್ತು. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಆದರೆ ಇಲ್ಲಿ ಮಲ ತಂದೆ (Father) ತನ್ನ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಸದ್ಯ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ. ರಾಕ್ಷಸ ಅಪ್ಪನ ಕ್ರೂರತನವನ್ನು ಎಳೆಎಳೆಯಾಗಿ ಮಕ್ಕಳು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದ ನಿವಾಸಿಯಾಗಿರುವ ಸಂತೋಷ್‌ನಿಂದ ಕೃತ್ಯವೆಸಗಲಾಗಿದೆ. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ತನ್ನ 9 ವರ್ಷದ ಹೆಣ್ಣು ಮಗು ಮತ್ತು 6 ವರ್ಷದ ಗಂಡು ಮಗುವಿಗೆ ನೀರು ಬಿಸಿ ಮಾಡುವ ಹೀಟರ್‌ನಿಂದ ಬರೆ ಎಳೆದಿದ್ದಾರೆ. ಹೀಟರ್‌ನಿಂದ ಬರೆ ಹಾಕಿದ್ದರಿಂದ ಪುಟ್ಟ ಮಕ್ಕಳು ಗಾಯಗೊಂಡಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಬೆಳ್ಳಿ ಅಂಗಡಿಗೆ ಬರ್ತಿದ್ದ ವ್ಯಾಪಾರಿಯಿಂದ ಕಳ್ಳತನ: ಇಬ್ಬರ ಬಂಧನ, 12 ಕೆಜಿ ಬೆಳ್ಳಿ ವಶಕ್ಕೆ

ಮಧುಗಿರಿ ಮೂಲದ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯ ಮೊಬೈಲ್‌ ಟವರ್‌ ಮೆಕ್ಯಾನಿಕ್‌ ಆಗಿದ್ದಾರೆ. ಯಶವಂತಪುರದ ಮೊಬೈಲ್ ಶಾಪ್‌ನಲ್ಲಿ ಪತ್ನಿ ಅಂಜಲಿ ಕೂಡ ಕೆಲಸ ಮಾಡುತ್ತಾರೆ. ದಿನ ನಿತ್ಯ ಮಕ್ಕಳನ್ನು ಶಾಲೆಗೆ ಕಳಿಸದೆ ಮನೆಯಲ್ಲಿ ತಂದೆ ಸಂತೋಷ್‌ ಕೂಡಿ ಹಾಕುತ್ತಿದ್ದರು.

ಮಕ್ಕಳ ಕಿರುಚಾಟ ಕೇಳಿ ಪೊಲೀಸರಿಗೆ ಸ್ಥಳೀಯರಿಂದ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳು ರಕ್ಷಣೆ ಮಾಡಿದ್ದರೆ. ಬಳಿಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲನೇ ಪತಿಗೆ ಡಿವೋರ್ಸ್ ನೀಡಿದ್ದ ಅಂಜಲಿ

ಅಂಜಲಿಗೆ 10 ವರ್ಷಗಳ ಹಿಂದೆ ಬಿಎಂಟಿಸಿ ಚಾಲಕ ಮುರಳಿ ಜೊತೆಗೆ ವಿವಾಹವಾಗಿತ್ತು. ಬಳಿಕ ಪತಿಯ ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಡಿವೋರ್ಸ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಮೂರ್ನಾಲ್ಕು ತಿಂಗಳಿಂದ ಅಂಜಲಿ ಸಂತೋಷ್ ಜೊತೆಗೆ ಊರಿನಲ್ಲಿದ್ದರು. ಈ ನಡುವೆ ಮಕ್ಕಳು ತೀಟೆ ಮಾಡುತ್ತಾರೆ, ಹೇಳಿದ ಮಾತು ಕೇಳಲ್ಲ ಅಂತ ಸಂತೋಷ್ ಘೋರ ಶಿಕ್ಷೆ ನೀಡಿದ್ದಾರೆ.

ನೆಲಮಂಗಲದ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಕಳ್ಳತನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ 600 ಕೆಜಿ ಪಂಚಲೋಹದ ವಿವಿಧ ದೇವರ ಆಭರಣವನ್ನು ಖದೀಮರು ಕಳವು ಮಾಡಿರುವಂತಹ ಘಟನೆ ನಡೆದಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಜೆಡಿಎಸ್ ಶಾಸಕಿ ಮನೆಗೆ ನುಗ್ಗಿದ್ದ ಅಪರಿಚಿತರ ಗ್ಯಾಂಗ್​​: ಕ್ರಮಕ್ಕೆ ಪೊಲೀಸರಿಗೆ ಸೂಚನೆ

ವಿಷಯ ತಿಳಿದು ಸ್ಥಳಕ್ಕೆ ಬಂದ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಾಲಯದ ಕಮಿಟಿ ಸದಸ್ಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರಿಂದ ಸಿಸಿ ಕ್ಯಾಮರಾ ಪರಿಶೀಲನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:58 pm, Sun, 26 January 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ