AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ

ಬೆಂಗಳೂರಿನ ದಾಸರಹಳ್ಳಿಯಲ್ಲಿ ಓರ್ವ ಮಲ ತಂದೆ ತನ್ನ 9 ಮತ್ತು 6 ವರ್ಷದ ಮಕ್ಕಳಿಗೆ ಬಿಸಿನೀರಿನ ಹೀಟರ್‌ನಿಂದ ಬರೆ ಎಳೆದಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳು ತೀಟೆ ಮಾಡುತ್ತಾರೆ ಎಂದು ಆರೋಪಿಸಿ ಈ ಕೃತ್ಯ ಎಸಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಕ್ಕಳನ್ನು ರಕ್ಷಿಸಿ ತಾಯಿಗೆ ತಿಳಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Jan 26, 2025 | 6:14 PM

Share

ನೆಲಮಂಗಲ, ಜನವರಿ 26: ಬೆಳಗಾವಿಯಲ್ಲಿ ಇತ್ತೀಚೆಗೆ ತನ್ನ 4 ವರ್ಷದ ಮಗಳಿಗೆ ಮಲತಾಯಿ ಚಿತ್ರಹಿಂಸೆ ನೀಡಿದ್ದ ಘಟನೆ ನಡೆದಿತ್ತು. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಆದರೆ ಇಲ್ಲಿ ಮಲ ತಂದೆ (Father) ತನ್ನ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಸದ್ಯ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ. ರಾಕ್ಷಸ ಅಪ್ಪನ ಕ್ರೂರತನವನ್ನು ಎಳೆಎಳೆಯಾಗಿ ಮಕ್ಕಳು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದ ನಿವಾಸಿಯಾಗಿರುವ ಸಂತೋಷ್‌ನಿಂದ ಕೃತ್ಯವೆಸಗಲಾಗಿದೆ. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ತನ್ನ 9 ವರ್ಷದ ಹೆಣ್ಣು ಮಗು ಮತ್ತು 6 ವರ್ಷದ ಗಂಡು ಮಗುವಿಗೆ ನೀರು ಬಿಸಿ ಮಾಡುವ ಹೀಟರ್‌ನಿಂದ ಬರೆ ಎಳೆದಿದ್ದಾರೆ. ಹೀಟರ್‌ನಿಂದ ಬರೆ ಹಾಕಿದ್ದರಿಂದ ಪುಟ್ಟ ಮಕ್ಕಳು ಗಾಯಗೊಂಡಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಬೆಳ್ಳಿ ಅಂಗಡಿಗೆ ಬರ್ತಿದ್ದ ವ್ಯಾಪಾರಿಯಿಂದ ಕಳ್ಳತನ: ಇಬ್ಬರ ಬಂಧನ, 12 ಕೆಜಿ ಬೆಳ್ಳಿ ವಶಕ್ಕೆ

ಮಧುಗಿರಿ ಮೂಲದ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯ ಮೊಬೈಲ್‌ ಟವರ್‌ ಮೆಕ್ಯಾನಿಕ್‌ ಆಗಿದ್ದಾರೆ. ಯಶವಂತಪುರದ ಮೊಬೈಲ್ ಶಾಪ್‌ನಲ್ಲಿ ಪತ್ನಿ ಅಂಜಲಿ ಕೂಡ ಕೆಲಸ ಮಾಡುತ್ತಾರೆ. ದಿನ ನಿತ್ಯ ಮಕ್ಕಳನ್ನು ಶಾಲೆಗೆ ಕಳಿಸದೆ ಮನೆಯಲ್ಲಿ ತಂದೆ ಸಂತೋಷ್‌ ಕೂಡಿ ಹಾಕುತ್ತಿದ್ದರು.

ಮಕ್ಕಳ ಕಿರುಚಾಟ ಕೇಳಿ ಪೊಲೀಸರಿಗೆ ಸ್ಥಳೀಯರಿಂದ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳು ರಕ್ಷಣೆ ಮಾಡಿದ್ದರೆ. ಬಳಿಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲನೇ ಪತಿಗೆ ಡಿವೋರ್ಸ್ ನೀಡಿದ್ದ ಅಂಜಲಿ

ಅಂಜಲಿಗೆ 10 ವರ್ಷಗಳ ಹಿಂದೆ ಬಿಎಂಟಿಸಿ ಚಾಲಕ ಮುರಳಿ ಜೊತೆಗೆ ವಿವಾಹವಾಗಿತ್ತು. ಬಳಿಕ ಪತಿಯ ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಡಿವೋರ್ಸ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಮೂರ್ನಾಲ್ಕು ತಿಂಗಳಿಂದ ಅಂಜಲಿ ಸಂತೋಷ್ ಜೊತೆಗೆ ಊರಿನಲ್ಲಿದ್ದರು. ಈ ನಡುವೆ ಮಕ್ಕಳು ತೀಟೆ ಮಾಡುತ್ತಾರೆ, ಹೇಳಿದ ಮಾತು ಕೇಳಲ್ಲ ಅಂತ ಸಂತೋಷ್ ಘೋರ ಶಿಕ್ಷೆ ನೀಡಿದ್ದಾರೆ.

ನೆಲಮಂಗಲದ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಕಳ್ಳತನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ 600 ಕೆಜಿ ಪಂಚಲೋಹದ ವಿವಿಧ ದೇವರ ಆಭರಣವನ್ನು ಖದೀಮರು ಕಳವು ಮಾಡಿರುವಂತಹ ಘಟನೆ ನಡೆದಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಜೆಡಿಎಸ್ ಶಾಸಕಿ ಮನೆಗೆ ನುಗ್ಗಿದ್ದ ಅಪರಿಚಿತರ ಗ್ಯಾಂಗ್​​: ಕ್ರಮಕ್ಕೆ ಪೊಲೀಸರಿಗೆ ಸೂಚನೆ

ವಿಷಯ ತಿಳಿದು ಸ್ಥಳಕ್ಕೆ ಬಂದ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಾಲಯದ ಕಮಿಟಿ ಸದಸ್ಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರಿಂದ ಸಿಸಿ ಕ್ಯಾಮರಾ ಪರಿಶೀಲನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:58 pm, Sun, 26 January 25

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!