AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ಕ್ರಿಕೆಟ್ ನೋಡಲು ಹೋಗಿದ್ದ ಯುವತಿ ಶವವಾಗಿ ವಾಪಸ್

ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಕ್ರಿಕೆಟ್ ನೋಡಲು ಹೋಗಿದ್ದ ಯುವತಿ ಶವವಾಗಿ ಮನೆಗೆ ಹಿಂದಿರುಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಮ್ಯಾಚ್​ ನೋಡಿಕೊಂಡು ಸ್ನೇಹಿತೆಯ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಮರ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಮತ್ತೊಬ್ಬ ಬೈಕ್​ ಸವಾರನಿಗೂ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ಕ್ರಿಕೆಟ್ ನೋಡಲು ಹೋಗಿದ್ದ ಯುವತಿ ಶವವಾಗಿ ವಾಪಸ್
ಮೃತ ಕೀರ್ತನಾ
ಮಂಜುನಾಥ ಕೆಬಿ
| Updated By: ಪ್ರಸನ್ನ ಹೆಗಡೆ|

Updated on: Oct 06, 2025 | 3:26 PM

Share

ಬೆಂಗಳೂರು, ಅಕ್ಟೋಬರ್​ 06: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬೃಹತ್​ ಗಾತ್ರದ ಅರಳಿಮರ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಸೋಲದೇವನಹಳ್ಳಿ (Soladevanahalli) ಪೋಲಿಸ್ ಠಾಣೆ ಸಮೀಪ ನಡೆದಿದೆ. ಮೃತ ಯುವತಿಯನ್ನ ಹೆಬ್ಬಾಳ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಮತ್ತೋರ್ವ ಬೈಕ್​ ಸವಾರನಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಏನು?

ಕ್ರಿಕೆಟ್​ ಪ್ರಿಯೆ ಆಗಿದ್ದ ಕೀರ್ತನಾ, ಖಾಸಗಿ ‌ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸ್ಯಾಂಡಲ್​ವುಡ್ ಪ್ರೀಮಿಯರ್ ಲೀಗ್​  ಮ್ಯಾಚ್ ನೋಡಿಕೊಂಡು ಸ್ನೇಹಿತೆಯ ಜೊತೆ ಖುಷಿಯಿಂದ ಮನೆ ಕಡೆ ಹೊರಟಿದ್ದಳು. ಇನ್ನೇನು ಸ್ವಲ್ಪ ದೂರ ಪ್ರಯಾಣಿಸಿದ್ದರೆ ಮನೆಯನ್ನೂ ಸೇರುತ್ತಿದ್ದಳು. ಆದ್ರೆ ವಿಧಿಯಾಟ ಬೇರೆಯದ್ದೇ ಇತ್ತು. ಸೋಲದೇವನಹಳ್ಳಿ ಪೋಲಿಸ್ ಠಾಣೆ ಸಮೀಪ ಬರುತ್ತಿದ್ದಂತೆ ಬೃಹತ್​ ಗಾತೃದ ಅರಳಿಮರ ಬಿದ್ದಿದೆ. ಈ ವೇಳೆ ದ್ವಿಚಕ್ರ ವಾಹನದ ಹಿಂಬದಿ ಕೂತಿದ್ದ ಕೀರ್ತನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಮತ್ತೊಂದು ಬೈಕ್​ನಲ್ಲಿದ್ದ ಭಾಸ್ಕರ್ ರಾವ್ ಎಂಬವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಕೀರ್ತನಾ ಭರತನಾಟ್ಯ,ಕಲೆ ಸೇರಿದಂತೆ ಅನೇಕ ಚಟುವಟಿಕೆಗಳಲ್ಲಿ ಆಕ್ಟೀವ್ ಆಗಿದ್ದಳಂತೆ. ಬಿ.ಇ ವ್ಯಾಸಂಗ ಮಾಡುತ್ತಿದ್ದು, ಕ್ಲಾಸ್​ನಲ್ಲಿ ಕೂಡ ಟಾಪರ್ ಆಗಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ ಕೇಸಿನಲ್ಲಿ ಮಹತ್ವದ ಬೆಳವಣಿಗೆ: 440 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಈ ಮರದ ಕೆಳಗೆ ಪ್ರತಿದಿನ ಪೋಲಿಸರು ನಿಲ್ಲುತ್ತಿದ್ದರಂತೆ. ಮರ ಬಿದ್ದ ಶಬ್ದ ಕೇಳಿ ಪೊಲೀಸರು ಓಡೋಡಿ ಬಂದಿದ್ದು, ಸ್ಥಳೀಯರ ಜೊತೆ ಗಾಯಾಳು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ಮರ ಬಿದ್ದ ಪರಿಣಾಮ ಕರೆಂಟ್ ಲೈನ್​ಗಳು ಕಟ್ ಆಗಿದ್ದು, ತಕ್ಷಣ ಬೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್​ ಸಂಪರ್ಕ ಕಡಿತಗೊಳಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೀರ್ತನಾ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ. ಘಟನೆ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ‌ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ