AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್: ಮಹಿಳೆಯ ಒಪ್ಪಿಗೆ ಮೇರೆಗೆ ಎಲ್ಲವೂ ನಡೆದಿದ್ಯಾ? ವಿಡಿಯೋ ವೈರಲ್

ನೆಲಮಂಗಲದಲ್ಲಿ ಟೆಲಿಕಾಲರ್​ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಇದೀಗ ಮಹಿಳೆಯ ಒಪ್ಪಿಗೆ ಮೇರೆಗೆ ಅಕ್ರಮ ಸಂಬಂಧ ನಡೆದಿದೆ ಎಂದು ಆರೋಪಿಯ ಪತ್ನಿ ಹೇಳಿಕೆ ನೀಡುವ ಮೂಲಕ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆ. ಜ್ಯೋತಿ ಅನುಮತಿ ಇಲ್ಲದೆ ಏನೂ ನಡೆದಿಲ್ಲವೆಂದು ಎಂದು ಆಕೆ ಹೇಳಿದ್ದಾಳೆ.

ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್: ಮಹಿಳೆಯ ಒಪ್ಪಿಗೆ ಮೇರೆಗೆ ಎಲ್ಲವೂ ನಡೆದಿದ್ಯಾ? ವಿಡಿಯೋ ವೈರಲ್
ಆರೋಪಿ ಶಿವರಾಮ್ ಮತ್ತು ಈತ ಟೆಲಿಕಾಲರ್ ಮಹಿಳೆ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿದ ವಿಡಿಯೋ ತೋರಿಸಿದ ಪತ್ನಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Nov 17, 2023 | 8:57 AM

Share

ನೆಲಮಂಗಲ, ನ.17: ಟೆಲಿಕಾಲರ್​ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ (Sexual harassment) ನೀಡಿದ ಆರೋಪ ಕೇಳಿಬಂದಿತ್ತು. ಇದರ ವಿಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಮಹಿಳೆಯ ಒಪ್ಪಿಗೆ ಮೇರೆಗೆ ಅಕ್ರಮ ಸಂಬಂಧ ನಡೆದಿದೆ ಎಂದು ಆರೋಪಿಯ ಪತ್ನಿ ಹೇಳಿಕೆ ನೀಡುವ ಮೂಲಕ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆ. ಜ್ಯೋತಿ ಅನುಮತಿ ಇಲ್ಲದೆ ಏನೂ ನಡೆದಿಲ್ಲವೆಂದು ಎಂದು ಆಕೆ ಹೇಳಿದ್ದಾಳೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿಯಾಗಿರುವ ಆರೋಪಿ ಶಿವರಾಮನ ಪತ್ನಿ ಕೋಮಲ, ನನ್ನನ್ನು ಮದುವೆಗೂ ಮುಂಚೆಯೇ ಪತಿ ಹಾಗೂ ಟೆಲಿಕಾಲರ್ ಮಹಿಳಾ ಉದ್ಯೋಗಿ ಜ್ಯೋತಿಗೂ ಸಂಬಂಧ ಇದೆ ಎಂದಿದ್ದಾರೆ. ಅಲ್ಲದೆ, ಇತ್ತೀಚೆಗೆ ಇವರ ಸಂಬಂಧ ಬ್ರೇಕ್ ಆಗಿತ್ತು. ಸದ್ಯ ನನ್ನ ಪತಿ ಶಿವರಾಮ್ ನನ್ನೊಂದಿಗೆ ಇದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ

ಜ್ಯೋತಿ ಅನುಮತಿ ಇಲ್ಲದೆ ಏನೂ ನಡೆದಿಲ್ಲವೆಂದು ಹೇಳಿದ ಕೋಮಲ ಅವರು, ಇದಕ್ಕೆ ಸಾಕ್ಷಿ ಇದೆ ಎಂದು ತಿಳಿಸಿದ್ದಾರೆ. ಹೌದು, ಪತಿ ಶಿವರಾಮ್​ಗೆ ವಿಡಿಯೋ ಕಾಲ್ ಕಾಲ್ ಮೂಲಕ​​​ ಜ್ಯೋತಿ ಖಾಸಗಿ ಅಂಗವನ್ನು ತೋರಿಸಿರುವ ವಿಡಿಯೋ ಕೋಮಲಾ ಮೊಬೈಲ್​ನಲ್ಲಿದೆ. ಸದ್ಯ ಜ್ಯೋತಿ ವಿರುದ್ಧ ನೆಲಮಂಗಲ ಠಾಣೆಗೆ ದೂರು ನೀಡಲು ಕೋಮಲ ಮುಂದಾಗಿದ್ದಾರೆ.

ಆದರೆ, ಟೆಲಿಕಾಲರ್ ಮಹಿಳೆ ಜ್ಯೋತಿ ಹೇಳೋದೇ ಬೇರೆ. ತನ್ನ ಗಂಡನನ್ನು ಸಾಯಿಸುವ ಬೆದರಿಕೆ ಹಾಕಿದ್ದರಿಂದ ಒಂದು ಭಾರಿ ವಿಡಿಯೋದಲ್ಲಿ ತೋರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನೇ ಇಟ್ಟುಕೊಂಡು ನನಗೆ ಸಹಕರಿಸಲು ಒತ್ತಾಯ ಮಾಡಿದ್ದಾನೆ. ನನ್ನ ಪತಿಯನ್ನ ಕೊಂದು ನಿನ್ನ ಜೊತೆ ಇರುತ್ತೇನೆ ಅಂತ ಜೀವಭಯ ಹಾಕುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧದ ಹೇಳಿಕೆಗಳು ಟಿವಿ9ಗೆ ಲಭ್ಯವಾಗಿದೆ. ಸದ್ಯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಗಿಸಿದ ನಂತರ ಆರೋಪಿ ಶಿವರಾಮ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಜ್ಯೋತಿ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಶಿವರಾಮ್​ನನ್ನು ಕರೆಸಿ ವಿಚಾರಣೆ ನಡೆಸಿ ಕಳಿಸಿದ್ದರು. ಬಳಿಕ ಆತ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Fri, 17 November 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ