AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕೆ ಮಾದರಿಯಾದ ಬೆಂಗಳೂರಿನ ಅದೊಂದು ಗ್ರಾಮ: ಬೋರ್‌ವೆಲ್​ಗೂ ಸಿಕ್ತು ಸೋಲಾರ್ ಪವರ್

ಬೆಂಗಳೂರಿನ ಹೊರವಲಯದ ಗ್ರಾಮವೊಂದರಲ್ಲಿ ಸೌರಶಕ್ತಿಯನ್ನು ಬಳಸಿ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ. ಅಕ್ವಾ ಶೈನ್ ಟೆಕ್ನಾಲಜಿ ಸಂಸ್ಥೆ ಅಂತರ್ಜಲವನ್ನು ಸೌರಶಕ್ತಿಯಿಂದ ಮೇಲಕ್ಕೆತ್ತಿ 24 ಗಂಟೆಗಳ ಕಾಲ ನೀರು ಪೂರೈಸುತ್ತಿದೆ. ಇದು ಕಡಿಮೆ ವೆಚ್ಚ ಮತ್ತು ಪರಿಸರ ಸ್ನೇಹಿ ಆಗಿದೆ. ಸದ್ಯ ಈ ಗ್ರಾಮ ಗ್ರಾಮೀಣ ಪ್ರದೇಶಗಳಿಗೆ ಮಾದರಿಯಾಗಿದೆ.

ದೇಶಕ್ಕೆ ಮಾದರಿಯಾದ ಬೆಂಗಳೂರಿನ ಅದೊಂದು ಗ್ರಾಮ: ಬೋರ್‌ವೆಲ್​ಗೂ ಸಿಕ್ತು ಸೋಲಾರ್ ಪವರ್
ಸೋಲಾರ್ ಪವರ್​ ಟ್ಯಾಂಕ್
ನವೀನ್ ಕುಮಾರ್ ಟಿ
| Edited By: |

Updated on: Apr 13, 2025 | 2:13 PM

Share

ದೇವನಹಳ್ಳಿ, ಏಪ್ರಿಲ್​ 13: ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆ (summer) ಶುರುವಾಗಿದೆ. ಹಾಗಾಗಿ ಸಾಕಷ್ಟು ಕಡೆ ಕರೆಂಟ್ ಸೇರಿದಂತೆ ನೀರಿಗೂ ಹಾಹಾಕಾರ ಶುರುವಾಗುತ್ತಿದ್ದು, ಜನ ಪರದಾಡುತ್ತಿದ್ದಾರೆ. ಇಂತಹ ಪರದಾಟದ ನಡುವೆಯೂ ಸಿಲಿಕಾನ್ ಸಿಟಿಯ (bangaluru) ಇಲ್ಲೊಂದು ಹಳ್ಳಿಯಲ್ಲಿ ಮಾತ್ರ ಇದಕ್ಕೆಲ್ಲಾ ಬ್ರೇಕ್ ಬಿದ್ದಿದ್ದು, ಕರೆಂಟ್​ನ ಅವಶ್ಯಕತೆ ಇಲ್ಲದೆ ಬಿರು ಬೇಸಿಗೆಯಲ್ಲೂ ಗ್ರಾಮದ ಜನರಿಗೆ ದಿನದ 24 ಗಂಟೆಯೂ ನೀರು ಸರಾಗವಾಗಿ ಹರಿದು ಬರುತ್ತಿದೆ. ಅದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಬೆಂಗಳೂರಿನ ಹೊರವಲಯದ ಯಲಹಂಕ ತಾಲೂಕಿನ ಸುರದೇನಪುರ ಗ್ರಾಮದಲ್ಲಿ ಸದ್ಯ ನೀರಿನ ಕೊರತೆ ಇಲ್ಲ. ಗ್ರಾಮಗಳಲ್ಲಿ ನಿತ್ಯ ಓವರ್ ಹೆಡ್ ಟ್ಯಾಂಕ್​ಗೆ ನೀರು ಹರಿಯಲು ಕರೆಂಟ್​ನ ಅವಶ್ಯಕತೆಯಿದ್ದು, ಕರೆಂಟ್ ಕಟ್ ಆದರೆ ನೀರು ಹರಿಸುವುದು ಅಸಾಧ್ಯವಾಗ್ತಿತ್ತು. ಹೀಗಾಗಿ ದೇಶದಲ್ಲೇ ಮೊದಲ ಬಾರಿಗೆ ಅಕ್ವಾ ಶೈನ್ ಟೆಕ್ನಾಲಜಿ ಸಂಸ್ಥೆ ವಿದೇಶಿ ತಂತ್ರಜ್ಞಾನ ಬಳಸಿಕೊಂಡು ಸಿಎಸ್ಆರ್ ನಿಧಿಯಲ್ಲಿ ನೂರಾರು ಅಡಿ ಆಳದಲ್ಲಿರುವ ಅಂತರ್ಜಲವನ್ನ ಸೋಲಾರ್ ಪವರ್ ಮೂಲಕ ಮೇಲಕ್ಕೆತ್ತಿ ಓವರ್ ಹೆಡ್ ಟ್ಯಾಂಕ್​ಗೆ ಹರಿಸುತ್ತಿದ್ದಾರೆ. ಜೊತೆಗೆ ನಿತ್ಯ ಕರೆಂಟ್​​ ಅವಶ್ಯಕತೆಯಿಲ್ಲದೆ ಸೋಲಾರ್ ಪವರ್​ನಿಂದ ಟ್ಯಾಂಕ್​ಗೆ ನೀರು ಹರಿಯುತ್ತಿದ್ದು, ಬಿರು ಬೇಸಿಗೆಯಲ್ಲೂ ಕರೆಂಟ್​ನ ಅವಶ್ಯಕತೆಯಿಲ್ಲದೆ ಗ್ರಾಮದ ಜನರಿಗೆ ದಿನದ 24 ಗಂಟೆ ನೀರು ಸರಾಗವಾಗಿ ಹರಿದು ಬರುತ್ತಿದೆ.

ಇದನ್ನೂ ಓದಿ: ಬೆಂಗಳೂರು 2ನೇ ಏರ್​ಪೋರ್ಟ್: ಬಿಡದಿ ಔಟ್, ಈ ಎರಡು ಸ್ಥಳಗಳ ಬಗ್ಗೆ ಚರ್ಚೆ, ಜಟಾಪಟಿ!

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ
Image
ಬೆಂಗಳೂರು ಕರಗ ಶಕ್ತ್ಯೋತ್ಸವ ವೇಳೆ ಗಲಾಟೆ: ಯುವಕರಿಗೆ ಥಳಿತ​
Image
ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ ಮಾಡಿದ ED
Image
ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ಅಧಿಕಾರಿಗಳ ದಾಳಿ

ಬೋರ್‌ವೆಲ್​ನಿಂದ ನೀರು ಮೇಲಕ್ಕೆತ್ತುವುದು ಮಾತ್ರವಲ್ಲದೆ ಅತ್ಯಾಧುನಿಕ ತಂತ್ರಜ್ಞಾನದಿಂದ ಓವರ್ ಹೆಡ್ ಟ್ಯಾಂಕ್​ನಲ್ಲಿ ಎಷ್ಟು ಸಾಮರ್ಥ್ಯದ ನೀರಿದೆ, ಎಷ್ಟು ನೀರು ಟ್ಯಾಂಕ್​ಗೆ ಬರುತ್ತಿದೆ, ಎಷ್ಟು ನೀರು ಟ್ಯಾಂಕ್ ನಿಂದ ಹೊರಗಡೆ ಹೋಗುತ್ತಿದೆ ಎಲ್ಲವನ್ನು ಡಿಸ್‌ಪ್ಲೇ ಮೂಲಕ ತೋರಿಸುತ್ತಿದೆ. ಅಲ್ಲದೆ ಗ್ರಾಮಗಳಲ್ಲಿ ವಾಟರ್ ಮ್ಯಾನ್​​ಗಳು ಟ್ಯಾಂಕ್​ ಬಳಿಗೆ ಬಂದು ನೀರು ಆನ್-ಆಪ್ ಮಾಡುವುದು ಮತ್ತು ಟ್ಯಾಂಕ್ ತುಂಬಿದರೆ ನೀರು ಪೋಲಾಗುತ್ತದೆ ಅನ್ನೂ ಆತಂಕವಿಲ್ಲದೆ, ಇದ್ದ ಕಡೆಯಿಂದಲೇ ಮೊಬೈಲ್ ಆ್ಯಪ್​ ಮೂಲಕ ಸೋಲಾರ್ ಪವರ್ ಆನ್ ಆ್ಯಂಡ್ ಆಪ್ ಸಹ ಮಾಡುವ ತಂತ್ರಜ್ಞಾನ ಹೊಂದಿದೆ.

Solar

 

ಇದರಿಂದ ಗ್ರಾಮಕ್ಕೆ ವಾಟರ್ ಮ್ಯಾನ್ ಬಂದಿಲ್ಲ, ನೀರು ಪೋಲಾಗುತ್ತಿದೆ ಅನ್ನೂ ಆತಂಕವಿಲ್ಲದೆ ಕೆಲಸ ಮಾಡುಬಹುದಾಗಿದೆ. ಇನ್ನೂ ವಿಶೇಷವಾಗಿ ಈ ಸೋಲಾರ್ ಪ್ಯಾನೆಲ್​ಗಳು ಮಳೆಗಾಲದ ಸಂದರ್ಭದಲ್ಲೂ ಅಲ್ಪ ಸ್ವಲ್ಪ ಬೆಳಕಿನಿಂದಸೋಲಾರ್ ಪವರ್ ಜನರೇಟರ್ ಮಾಡುವ ವಿಶೇಷತೆಯನ್ನ ಹೊಂದಿದ್ದು, ಸೋಲಾರ್​ನಿಂದ ಪ್ರತಿ ತಿಂಗಳು ಬರ್ತಿದ್ದ 8 ಸಾವಿರ ರೂ ಕರೆಂಟ್ ಬಿಲ್​ ಹೊರೆ ಕಡಿತವಾಗಿದೆ. ಅಲ್ಲದೆ ವಿದ್ಯುತ್​ನಿಂದ 08 ಗಂಟೆ ಕಾಲ ತುಂಬುತ್ತಿದ್ದ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್, ಸೋಲಾರ್ ಪವರ್​ನಿಂದ 3 ರಿಂದ 4 ಗಂಟೆಯಲ್ಲೇ ತುಂಬುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಬೆಲೆ ಏರಿಕೆಯ ಪರ್ವಕಾಲ: ಏಕಾಏಕಿ ಮಕ್ಕಳ ಶಾಲಾ ಫೀಸ್​ನಲ್ಲಿ ಶೇ 50 ರಷ್ಟು ಏರಿಕೆ

ಒಟ್ಟಾರೆ ಬಿರು ಬೇಸಿಗೆ ಬಂತ್ತು ಅಂದರೆ ಕರೆಂಟ್ ಇಲ್ಲ, ಸಮಯಕ್ಕೆ ನೀರು ಬರಲ್ಲ ಅಂತ ಪರದಾಡುವ ಗ್ರಾಮಗಳ ನಡುವೆ ಸೋಲಾರ್ ಪವರ್​ನಿಂದ ನಮ್ಮ ಸಿಲಿಕಾನ್ ಸಿಟಿ ಹೊರ ವಲಯದ ಗ್ರಾಮದ ದೇಶಕ್ಕೆ ಮಾದರಿಯಾಗಿರುವುದು ನಿಜಕ್ಕೂ ನಮ್ಮ ಹೆಮ್ಮೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು