ದೇಶಕ್ಕೆ ಮಾದರಿಯಾದ ಬೆಂಗಳೂರಿನ ಅದೊಂದು ಗ್ರಾಮ: ಬೋರ್‌ವೆಲ್​ಗೂ ಸಿಕ್ತು ಸೋಲಾರ್ ಪವರ್

ಬೆಂಗಳೂರಿನ ಹೊರವಲಯದ ಗ್ರಾಮವೊಂದರಲ್ಲಿ ಸೌರಶಕ್ತಿಯನ್ನು ಬಳಸಿ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ. ಅಕ್ವಾ ಶೈನ್ ಟೆಕ್ನಾಲಜಿ ಸಂಸ್ಥೆ ಅಂತರ್ಜಲವನ್ನು ಸೌರಶಕ್ತಿಯಿಂದ ಮೇಲಕ್ಕೆತ್ತಿ 24 ಗಂಟೆಗಳ ಕಾಲ ನೀರು ಪೂರೈಸುತ್ತಿದೆ. ಇದು ಕಡಿಮೆ ವೆಚ್ಚ ಮತ್ತು ಪರಿಸರ ಸ್ನೇಹಿ ಆಗಿದೆ. ಸದ್ಯ ಈ ಗ್ರಾಮ ಗ್ರಾಮೀಣ ಪ್ರದೇಶಗಳಿಗೆ ಮಾದರಿಯಾಗಿದೆ.

ದೇಶಕ್ಕೆ ಮಾದರಿಯಾದ ಬೆಂಗಳೂರಿನ ಅದೊಂದು ಗ್ರಾಮ: ಬೋರ್‌ವೆಲ್​ಗೂ ಸಿಕ್ತು ಸೋಲಾರ್ ಪವರ್
ಸೋಲಾರ್ ಪವರ್​ ಟ್ಯಾಂಕ್
Edited By:

Updated on: Apr 13, 2025 | 2:13 PM

ದೇವನಹಳ್ಳಿ, ಏಪ್ರಿಲ್​ 13: ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆ (summer) ಶುರುವಾಗಿದೆ. ಹಾಗಾಗಿ ಸಾಕಷ್ಟು ಕಡೆ ಕರೆಂಟ್ ಸೇರಿದಂತೆ ನೀರಿಗೂ ಹಾಹಾಕಾರ ಶುರುವಾಗುತ್ತಿದ್ದು, ಜನ ಪರದಾಡುತ್ತಿದ್ದಾರೆ. ಇಂತಹ ಪರದಾಟದ ನಡುವೆಯೂ ಸಿಲಿಕಾನ್ ಸಿಟಿಯ (bangaluru) ಇಲ್ಲೊಂದು ಹಳ್ಳಿಯಲ್ಲಿ ಮಾತ್ರ ಇದಕ್ಕೆಲ್ಲಾ ಬ್ರೇಕ್ ಬಿದ್ದಿದ್ದು, ಕರೆಂಟ್​ನ ಅವಶ್ಯಕತೆ ಇಲ್ಲದೆ ಬಿರು ಬೇಸಿಗೆಯಲ್ಲೂ ಗ್ರಾಮದ ಜನರಿಗೆ ದಿನದ 24 ಗಂಟೆಯೂ ನೀರು ಸರಾಗವಾಗಿ ಹರಿದು ಬರುತ್ತಿದೆ. ಅದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಬೆಂಗಳೂರಿನ ಹೊರವಲಯದ ಯಲಹಂಕ ತಾಲೂಕಿನ ಸುರದೇನಪುರ ಗ್ರಾಮದಲ್ಲಿ ಸದ್ಯ ನೀರಿನ ಕೊರತೆ ಇಲ್ಲ. ಗ್ರಾಮಗಳಲ್ಲಿ ನಿತ್ಯ ಓವರ್ ಹೆಡ್ ಟ್ಯಾಂಕ್​ಗೆ ನೀರು ಹರಿಯಲು ಕರೆಂಟ್​ನ ಅವಶ್ಯಕತೆಯಿದ್ದು, ಕರೆಂಟ್ ಕಟ್ ಆದರೆ ನೀರು ಹರಿಸುವುದು ಅಸಾಧ್ಯವಾಗ್ತಿತ್ತು. ಹೀಗಾಗಿ ದೇಶದಲ್ಲೇ ಮೊದಲ ಬಾರಿಗೆ ಅಕ್ವಾ ಶೈನ್ ಟೆಕ್ನಾಲಜಿ ಸಂಸ್ಥೆ ವಿದೇಶಿ ತಂತ್ರಜ್ಞಾನ ಬಳಸಿಕೊಂಡು ಸಿಎಸ್ಆರ್ ನಿಧಿಯಲ್ಲಿ ನೂರಾರು ಅಡಿ ಆಳದಲ್ಲಿರುವ ಅಂತರ್ಜಲವನ್ನ ಸೋಲಾರ್ ಪವರ್ ಮೂಲಕ ಮೇಲಕ್ಕೆತ್ತಿ ಓವರ್ ಹೆಡ್ ಟ್ಯಾಂಕ್​ಗೆ ಹರಿಸುತ್ತಿದ್ದಾರೆ. ಜೊತೆಗೆ ನಿತ್ಯ ಕರೆಂಟ್​​ ಅವಶ್ಯಕತೆಯಿಲ್ಲದೆ ಸೋಲಾರ್ ಪವರ್​ನಿಂದ ಟ್ಯಾಂಕ್​ಗೆ ನೀರು ಹರಿಯುತ್ತಿದ್ದು, ಬಿರು ಬೇಸಿಗೆಯಲ್ಲೂ ಕರೆಂಟ್​ನ ಅವಶ್ಯಕತೆಯಿಲ್ಲದೆ ಗ್ರಾಮದ ಜನರಿಗೆ ದಿನದ 24 ಗಂಟೆ ನೀರು ಸರಾಗವಾಗಿ ಹರಿದು ಬರುತ್ತಿದೆ.

ಇದನ್ನೂ ಓದಿ: ಬೆಂಗಳೂರು 2ನೇ ಏರ್​ಪೋರ್ಟ್: ಬಿಡದಿ ಔಟ್, ಈ ಎರಡು ಸ್ಥಳಗಳ ಬಗ್ಗೆ ಚರ್ಚೆ, ಜಟಾಪಟಿ!

ಇದನ್ನೂ ಓದಿ
ಬೆಂಗಳೂರಿನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ
ಬೆಂಗಳೂರು ಕರಗ ಶಕ್ತ್ಯೋತ್ಸವ ವೇಳೆ ಗಲಾಟೆ: ಯುವಕರಿಗೆ ಥಳಿತ​
ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ ಮಾಡಿದ ED
ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ಅಧಿಕಾರಿಗಳ ದಾಳಿ

ಬೋರ್‌ವೆಲ್​ನಿಂದ ನೀರು ಮೇಲಕ್ಕೆತ್ತುವುದು ಮಾತ್ರವಲ್ಲದೆ ಅತ್ಯಾಧುನಿಕ ತಂತ್ರಜ್ಞಾನದಿಂದ ಓವರ್ ಹೆಡ್ ಟ್ಯಾಂಕ್​ನಲ್ಲಿ ಎಷ್ಟು ಸಾಮರ್ಥ್ಯದ ನೀರಿದೆ, ಎಷ್ಟು ನೀರು ಟ್ಯಾಂಕ್​ಗೆ ಬರುತ್ತಿದೆ, ಎಷ್ಟು ನೀರು ಟ್ಯಾಂಕ್ ನಿಂದ ಹೊರಗಡೆ ಹೋಗುತ್ತಿದೆ ಎಲ್ಲವನ್ನು ಡಿಸ್‌ಪ್ಲೇ ಮೂಲಕ ತೋರಿಸುತ್ತಿದೆ. ಅಲ್ಲದೆ ಗ್ರಾಮಗಳಲ್ಲಿ ವಾಟರ್ ಮ್ಯಾನ್​​ಗಳು ಟ್ಯಾಂಕ್​ ಬಳಿಗೆ ಬಂದು ನೀರು ಆನ್-ಆಪ್ ಮಾಡುವುದು ಮತ್ತು ಟ್ಯಾಂಕ್ ತುಂಬಿದರೆ ನೀರು ಪೋಲಾಗುತ್ತದೆ ಅನ್ನೂ ಆತಂಕವಿಲ್ಲದೆ, ಇದ್ದ ಕಡೆಯಿಂದಲೇ ಮೊಬೈಲ್ ಆ್ಯಪ್​ ಮೂಲಕ ಸೋಲಾರ್ ಪವರ್ ಆನ್ ಆ್ಯಂಡ್ ಆಪ್ ಸಹ ಮಾಡುವ ತಂತ್ರಜ್ಞಾನ ಹೊಂದಿದೆ.

 

ಇದರಿಂದ ಗ್ರಾಮಕ್ಕೆ ವಾಟರ್ ಮ್ಯಾನ್ ಬಂದಿಲ್ಲ, ನೀರು ಪೋಲಾಗುತ್ತಿದೆ ಅನ್ನೂ ಆತಂಕವಿಲ್ಲದೆ ಕೆಲಸ ಮಾಡುಬಹುದಾಗಿದೆ. ಇನ್ನೂ ವಿಶೇಷವಾಗಿ ಈ ಸೋಲಾರ್ ಪ್ಯಾನೆಲ್​ಗಳು ಮಳೆಗಾಲದ ಸಂದರ್ಭದಲ್ಲೂ ಅಲ್ಪ ಸ್ವಲ್ಪ ಬೆಳಕಿನಿಂದಸೋಲಾರ್ ಪವರ್ ಜನರೇಟರ್ ಮಾಡುವ ವಿಶೇಷತೆಯನ್ನ ಹೊಂದಿದ್ದು, ಸೋಲಾರ್​ನಿಂದ ಪ್ರತಿ ತಿಂಗಳು ಬರ್ತಿದ್ದ 8 ಸಾವಿರ ರೂ ಕರೆಂಟ್ ಬಿಲ್​ ಹೊರೆ ಕಡಿತವಾಗಿದೆ. ಅಲ್ಲದೆ ವಿದ್ಯುತ್​ನಿಂದ 08 ಗಂಟೆ ಕಾಲ ತುಂಬುತ್ತಿದ್ದ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್, ಸೋಲಾರ್ ಪವರ್​ನಿಂದ 3 ರಿಂದ 4 ಗಂಟೆಯಲ್ಲೇ ತುಂಬುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಬೆಲೆ ಏರಿಕೆಯ ಪರ್ವಕಾಲ: ಏಕಾಏಕಿ ಮಕ್ಕಳ ಶಾಲಾ ಫೀಸ್​ನಲ್ಲಿ ಶೇ 50 ರಷ್ಟು ಏರಿಕೆ

ಒಟ್ಟಾರೆ ಬಿರು ಬೇಸಿಗೆ ಬಂತ್ತು ಅಂದರೆ ಕರೆಂಟ್ ಇಲ್ಲ, ಸಮಯಕ್ಕೆ ನೀರು ಬರಲ್ಲ ಅಂತ ಪರದಾಡುವ ಗ್ರಾಮಗಳ ನಡುವೆ ಸೋಲಾರ್ ಪವರ್​ನಿಂದ ನಮ್ಮ ಸಿಲಿಕಾನ್ ಸಿಟಿ ಹೊರ ವಲಯದ ಗ್ರಾಮದ ದೇಶಕ್ಕೆ ಮಾದರಿಯಾಗಿರುವುದು ನಿಜಕ್ಕೂ ನಮ್ಮ ಹೆಮ್ಮೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us