AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬದುಕಿನಲ್ಲಿ ಹೊಕ್ಕಿದ ಅನುಮಾನದ ಭೂತ, ಪತ್ನಿ ದುರಂತ ಸಾವು

ಅನುಮಾನ ಎನ್ನುವ ಭೂತ ತಲೆಯೊಳಗೆ ಹೊಕ್ಕಿಬಿಟ್ಟರೆ ಅದೆಂತಹ ಸಂಬಂಧಕ್ಕೂ ಅಲ್ಲಿ ಬೆಲೆ ಇರುವುದಿಲ್ಲ. ಅನುಮಾನ ಎನ್ನುವುದು ಎಂತಹ ಪ್ರೀತಿಯನ್ನು ಬೇಕಾದರೂ ಕೊಂದುಬಿಡುತ್ತೆ ಎಂಬುವುದಕ್ಕೆ ಇದೇ ಸಾಕ್ಷಿ. 9 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ, ಇಷ್ಟಪಟ್ಟು ಪ್ರೀತಿಸಿ ಮದುವೆಯಾಗಿದ್ದ ಜೋಡಿ ಸಂಸಾರದಲ್ಲಿ ಅನುಮಾನದ ಭೂತ ಹೊಕ್ಕಿದ್ದು, ಈ ಅನುಮಾನದ ಭೂತಕ್ಕೆ ಪತ್ನಿ ಬಲಿಯಾಗಿದ್ದಾಳೆ.

ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬದುಕಿನಲ್ಲಿ ಹೊಕ್ಕಿದ ಅನುಮಾನದ ಭೂತ, ಪತ್ನಿ ದುರಂತ ಸಾವು
ಐಶ್ವರ್ಯಾ(26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 21, 2024 | 6:18 PM

Share

ಬೆಂಗಳೂರು, (ಡಿಸೆಂಬರ್ 21): ಪತಿ ಮೇಲಿನ ಅನುಮಾನದ ಪೀಡೆಯನ್ನು ನೆತ್ತಿಗೇರಿಸಿಕೊಂಡು ಪತ್ನಿ ತನ್ನ ಜೀವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಬೇರೆ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ಪತ್ನಿ ನೇಣಿಗೆ ಕೊರಳೊಡ್ಡಿದ್ದಾಳೆ. ಐಶ್ವರ್ಯಾ(26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಾಗಲಗುಂಟೆಯ ಎಸ್​ಕೆವೈ ಸಲೂನ್ ನಡೆಸುತ್ತಿದ್ದ ಐಶ್ವರ್ಯಾಗೆ ಗಂಡನ ಮೇಲಿ ಅನುಮಾನಪಟ್ಟ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ನವೀನ್ ಹಾಗೂ ಐಶ್ವರ್ಯಾ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಸಂಸಾರ ಚೆನ್ನಾಗಿ ಇತ್ತು. ಐಶ್ವರ್ಯಾ ಬಾಗಲಗುಂಟೆಯಲ್ಲಿ ಎಸ್​ಕೆವೈ ಸಲೂನ್ ನಡೆಸುತ್ತ ರೀಲ್ಸ್ ಮಾಡಿಕೊಂಡು ಖುಷಿ ಖುಷಿಯಾಗಿದ್ದಳು. ಆದ್ರೆ, ಇತ್ತೀಚೆಗೆ ಐಶ್ವರ್ಯಾಗೆ ಗಂಡನ ಮೇಲೆ ಅನುಮಾನ ಶುರುವಾಗಿತ್ತು. ತನ್ನ ಪತಿ ನವೀನ್ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂಬ ಅನುಮಾನ ಐಶ್ವರ್ಯಗೆ ಇತ್ತು. ಇದೇ ವಿಚಾರಕ್ಕೆ ನವೀನ್ ಹಾಗೂ ಐಶ್ವರ್ಯಾ ಮಧ್ಯ ಕಳೆದ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು.

ಇದನ್ನೂ ಓದಿ: ನೆಲಮಂಗಲ: ಕೆಜಿಗಟ್ಟಲೆ ಚಿನ್ನ ಕೊಂಡೊಯ್ದು ಆಭರಣ ಅಂಗಡಿ ಮಾಲೀಕರಿಗೇ ಧಮ್ಕಿ ಹಾಕಿದ ಮಹಿಳೆ!

ಇದರ ಮಧ್ಯ ನವೀನ್, ಪತ್ನಿ ಐಶ್ವರ್ಯಗೆ ಹೇಳದೇ ಧರ್ಮಸ್ಥಳಕ್ಕೆ ಟ್ರಿಪ್​ಗೆ ಹೋಗಿದ್ದಾನೆ. ಇದರಿಂದ ಐಶ್ವರ್ಯ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ನಂತರ ಧರ್ಮಸ್ಥಳದಿಂದ ಮನೆಗೆ ಬಂದಾಗ ಐಶ್ವರ್ಯ, ನವೀನ್ ಜೊತೆ ಗಲಾಟೆ ಮಾಡಿದ್ದಾಳೆ. ನಂತರ ವಿಶ್ರಾಂತಿಗೆಂದು ನವೀನ್​ ರೂಮ್​ಗೆ ಹೋಗಿದ್ದಾನೆ. ಆದ್ರೆ, ಇತ್ತ ಐಶ್ವರ್ಯ ಅದೇ ಕೋಪದಲ್ಲಿ ಮತ್ತೊಂದು ರೂಮ್​ಗೆ ತೆರಳಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇನ್ನು ಈ ಬಗ್ಗೆ ಪತಿ ನವೀನ್ ಪ್ರತಿಕ್ರಿಯಿಸಿದ್ದು, ನನ್ನ ಮೇಲಿನ ಅನುಮಾನಕ್ಕೆ ವಾರದಿಂದ ಗಲಾಟೆ ನಡೆಯುತ್ತಿತ್ತು. ಅದೇ ಕೋಪದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಎಂದಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!