Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬದುಕಿನಲ್ಲಿ ಹೊಕ್ಕಿದ ಅನುಮಾನದ ಭೂತ, ಪತ್ನಿ ದುರಂತ ಸಾವು

ಅನುಮಾನ ಎನ್ನುವ ಭೂತ ತಲೆಯೊಳಗೆ ಹೊಕ್ಕಿಬಿಟ್ಟರೆ ಅದೆಂತಹ ಸಂಬಂಧಕ್ಕೂ ಅಲ್ಲಿ ಬೆಲೆ ಇರುವುದಿಲ್ಲ. ಅನುಮಾನ ಎನ್ನುವುದು ಎಂತಹ ಪ್ರೀತಿಯನ್ನು ಬೇಕಾದರೂ ಕೊಂದುಬಿಡುತ್ತೆ ಎಂಬುವುದಕ್ಕೆ ಇದೇ ಸಾಕ್ಷಿ. 9 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ, ಇಷ್ಟಪಟ್ಟು ಪ್ರೀತಿಸಿ ಮದುವೆಯಾಗಿದ್ದ ಜೋಡಿ ಸಂಸಾರದಲ್ಲಿ ಅನುಮಾನದ ಭೂತ ಹೊಕ್ಕಿದ್ದು, ಈ ಅನುಮಾನದ ಭೂತಕ್ಕೆ ಪತ್ನಿ ಬಲಿಯಾಗಿದ್ದಾಳೆ.

ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬದುಕಿನಲ್ಲಿ ಹೊಕ್ಕಿದ ಅನುಮಾನದ ಭೂತ, ಪತ್ನಿ ದುರಂತ ಸಾವು
ಐಶ್ವರ್ಯಾ(26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on: Dec 21, 2024 | 6:18 PM

ಬೆಂಗಳೂರು, (ಡಿಸೆಂಬರ್ 21): ಪತಿ ಮೇಲಿನ ಅನುಮಾನದ ಪೀಡೆಯನ್ನು ನೆತ್ತಿಗೇರಿಸಿಕೊಂಡು ಪತ್ನಿ ತನ್ನ ಜೀವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಬೇರೆ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ಪತ್ನಿ ನೇಣಿಗೆ ಕೊರಳೊಡ್ಡಿದ್ದಾಳೆ. ಐಶ್ವರ್ಯಾ(26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಾಗಲಗುಂಟೆಯ ಎಸ್​ಕೆವೈ ಸಲೂನ್ ನಡೆಸುತ್ತಿದ್ದ ಐಶ್ವರ್ಯಾಗೆ ಗಂಡನ ಮೇಲಿ ಅನುಮಾನಪಟ್ಟ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ನವೀನ್ ಹಾಗೂ ಐಶ್ವರ್ಯಾ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಸಂಸಾರ ಚೆನ್ನಾಗಿ ಇತ್ತು. ಐಶ್ವರ್ಯಾ ಬಾಗಲಗುಂಟೆಯಲ್ಲಿ ಎಸ್​ಕೆವೈ ಸಲೂನ್ ನಡೆಸುತ್ತ ರೀಲ್ಸ್ ಮಾಡಿಕೊಂಡು ಖುಷಿ ಖುಷಿಯಾಗಿದ್ದಳು. ಆದ್ರೆ, ಇತ್ತೀಚೆಗೆ ಐಶ್ವರ್ಯಾಗೆ ಗಂಡನ ಮೇಲೆ ಅನುಮಾನ ಶುರುವಾಗಿತ್ತು. ತನ್ನ ಪತಿ ನವೀನ್ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂಬ ಅನುಮಾನ ಐಶ್ವರ್ಯಗೆ ಇತ್ತು. ಇದೇ ವಿಚಾರಕ್ಕೆ ನವೀನ್ ಹಾಗೂ ಐಶ್ವರ್ಯಾ ಮಧ್ಯ ಕಳೆದ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು.

ಇದನ್ನೂ ಓದಿ: ನೆಲಮಂಗಲ: ಕೆಜಿಗಟ್ಟಲೆ ಚಿನ್ನ ಕೊಂಡೊಯ್ದು ಆಭರಣ ಅಂಗಡಿ ಮಾಲೀಕರಿಗೇ ಧಮ್ಕಿ ಹಾಕಿದ ಮಹಿಳೆ!

ಇದರ ಮಧ್ಯ ನವೀನ್, ಪತ್ನಿ ಐಶ್ವರ್ಯಗೆ ಹೇಳದೇ ಧರ್ಮಸ್ಥಳಕ್ಕೆ ಟ್ರಿಪ್​ಗೆ ಹೋಗಿದ್ದಾನೆ. ಇದರಿಂದ ಐಶ್ವರ್ಯ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ನಂತರ ಧರ್ಮಸ್ಥಳದಿಂದ ಮನೆಗೆ ಬಂದಾಗ ಐಶ್ವರ್ಯ, ನವೀನ್ ಜೊತೆ ಗಲಾಟೆ ಮಾಡಿದ್ದಾಳೆ. ನಂತರ ವಿಶ್ರಾಂತಿಗೆಂದು ನವೀನ್​ ರೂಮ್​ಗೆ ಹೋಗಿದ್ದಾನೆ. ಆದ್ರೆ, ಇತ್ತ ಐಶ್ವರ್ಯ ಅದೇ ಕೋಪದಲ್ಲಿ ಮತ್ತೊಂದು ರೂಮ್​ಗೆ ತೆರಳಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇನ್ನು ಈ ಬಗ್ಗೆ ಪತಿ ನವೀನ್ ಪ್ರತಿಕ್ರಿಯಿಸಿದ್ದು, ನನ್ನ ಮೇಲಿನ ಅನುಮಾನಕ್ಕೆ ವಾರದಿಂದ ಗಲಾಟೆ ನಡೆಯುತ್ತಿತ್ತು. ಅದೇ ಕೋಪದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಎಂದಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ