AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ದೂರದ ಆಂಧ್ರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸ್ನಾನಕ್ಕೆ ಹೋದಾಗ ಬಾತ್​ರೂಮ್​ನಲ್ಲೇ ಸಾವನ್ನಪ್ಪಿದ್ದಾರೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು
ಲಕ್ಷ್ಮೀ (25) ಮೃತ ಮಹಿಳೆ.
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 25, 2024 | 5:31 PM

Share

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25) ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಬಾತ್​ರೂಮ್​ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ನಲ್ಲೇನಿದೆ?

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದ್ರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.

ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೂ ಸಹ ಪ್ರಾಥಮಿಕ ತನಿಖೆಯಲ್ಲಿ ಸಾವಿನ ಕಾರಣ ಗೊತ್ತಾಗ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಎಲ್ಲಾ ಗೊತ್ತಾಗಲಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 25 November 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ