ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ದೂರದ ಆಂಧ್ರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸ್ನಾನಕ್ಕೆ ಹೋದಾಗ ಬಾತ್​ರೂಮ್​ನಲ್ಲೇ ಸಾವನ್ನಪ್ಪಿದ್ದಾರೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು
ಲಕ್ಷ್ಮೀ (25) ಮೃತ ಮಹಿಳೆ.
Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on:Nov 25, 2024 | 5:31 PM

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25) ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಬಾತ್​ರೂಮ್​ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ನಲ್ಲೇನಿದೆ?

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದ್ರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.

ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೂ ಸಹ ಪ್ರಾಥಮಿಕ ತನಿಖೆಯಲ್ಲಿ ಸಾವಿನ ಕಾರಣ ಗೊತ್ತಾಗ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಎಲ್ಲಾ ಗೊತ್ತಾಗಲಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 25 November 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ