AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ದೂರದ ಆಂಧ್ರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸ್ನಾನಕ್ಕೆ ಹೋದಾಗ ಬಾತ್​ರೂಮ್​ನಲ್ಲೇ ಸಾವನ್ನಪ್ಪಿದ್ದಾರೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು
ಲಕ್ಷ್ಮೀ (25) ಮೃತ ಮಹಿಳೆ.
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ|

Updated on:Nov 25, 2024 | 5:31 PM

Share

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25) ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಬಾತ್​ರೂಮ್​ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ನಲ್ಲೇನಿದೆ?

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದ್ರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.

ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೂ ಸಹ ಪ್ರಾಥಮಿಕ ತನಿಖೆಯಲ್ಲಿ ಸಾವಿನ ಕಾರಣ ಗೊತ್ತಾಗ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಎಲ್ಲಾ ಗೊತ್ತಾಗಲಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 25 November 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ