AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ದೂರದ ಆಂಧ್ರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸ್ನಾನಕ್ಕೆ ಹೋದಾಗ ಬಾತ್​ರೂಮ್​ನಲ್ಲೇ ಸಾವನ್ನಪ್ಪಿದ್ದಾರೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು
ಲಕ್ಷ್ಮೀ (25) ಮೃತ ಮಹಿಳೆ.
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 25, 2024 | 5:31 PM

Share

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25) ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಬಾತ್​ರೂಮ್​ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ನಲ್ಲೇನಿದೆ?

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದ್ರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.

ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೂ ಸಹ ಪ್ರಾಥಮಿಕ ತನಿಖೆಯಲ್ಲಿ ಸಾವಿನ ಕಾರಣ ಗೊತ್ತಾಗ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಎಲ್ಲಾ ಗೊತ್ತಾಗಲಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 25 November 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ