AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕೊಡದಿದ್ದಕ್ಕೆ ಪತಿಯಿಂದ ಹಲ್ಲೆ: ಕೋಮಾಗೆ ಜಾರಿದ್ದ ಮಹಿಳೆ ಸಾವು

ಕುಡಿಯಲು ನೀರು ಕೊಟ್ಟಿಲ್ಲ ಎಂಬ ಕಾರಣಕ್ಕೆ ಪತಿ ನಡೆಸಿದ ಹಲ್ಲೆಯಿಂದ ಕೋಮಾಗೆ ಜಾರಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮನೆಗೆ ಕುಡಿದು ಬಂದಿದ್ದ ಪತಿ ಪತ್ನಿ ಮೇಲೆ ಸಿಟ್ಟಾಗಿ ಲಟ್ಟಣಿಗೆಯಿಂದ ಹಲ್ಲೆ ನಡೆಸಿದ ಕಾರಣ ಮಹಿಳೆಯ ತಲೆಗೆ ಗಂಭೀರಾಗಿ ಪೆಟ್ಟಾಗಿತ್ತು.

ನೀರು ಕೊಡದಿದ್ದಕ್ಕೆ ಪತಿಯಿಂದ ಹಲ್ಲೆ: ಕೋಮಾಗೆ ಜಾರಿದ್ದ ಮಹಿಳೆ ಸಾವು
ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಪ್ರಸನ್ನ ಹೆಗಡೆ|

Updated on: Oct 06, 2025 | 11:41 AM

Share

ಬೆಂಗಳೂರು ಅಕ್ಟೋಬರ್​ 06: ಪತಿ ನಡೆಸಿದ ಹಲ್ಲೆಯಿಂದಾಗಿ ಕೋಮಾಗೆ ಜಾರಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರೀತಿ ಸಿಂಗ್​ (26) ಮೃತ ಮಹಿಳೆಯಾಗಿದ್ದು, ಆರೋಪಿ ಛೋಟೆಲಾಲ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್​ 24ರಂದು ಮನೆಗೆ ಬಂದ ಛೋಟೆಲಾಲ್ ಹೆಂಡತಿ ಬಳಿ ಕುಡಿಯಲು ನೀರು ಕೇಳಿದ್ದ. ಈ ವೇಳೆ ನಾನು ಕೆಲಸಕ್ಕೆ ಹೋಗಬೇಕು. ಹಾಗಾಗಿ ನೀನೇ ನೀರು ತೆಗೆದುಕೊಂಡು ಕುಡಿ ಎಂದು ಆಕೆ ಹೇಳಿದ್ದಾಳೆ. ಅದಾಗಲೇ ಮದ್ಯ ಸೇವಿಸಿ ಬಂದಿದ್ದ ಛೋಟೆಲಾಲ್ ಹೆಂಡತಿಯ ಈ ಮಾತುಗಳನ್ನ ಕೇಳಿ ಸಿಟ್ಟಾಗಿದ್ದು, ಲಟ್ಟಣಿಗೆಯಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ತಲೆಗೆ ಗಂಭೀರವಾಗಿ ಪೆಟ್ಟಾದ ಹಿನ್ನಲೆ ಪ್ರೀತಿ ಅಲ್ಲೇ ಕೋಮಾಗೆ ಜಾರಿದ್ದಳು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಅದು ಫಲಿಸದೆ ಆಕೆ ಉಸಿರು ಚೆಲ್ಲಿದ್ದಾಳೆ. ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಛೋಟೆಲಾಲ್ ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಅರೆಬೆಂದ ಶವ ಪತ್ತೆ

ಅಸ್ಸಾಂ ಮೂಲದ ವ್ಯಕ್ತಿ ಮೇಲೆ ಹಲ್ಲೆ

ಅಸ್ಸಾಂ ಮೂಲದ ವ್ಯಕ್ತಿ ಮೇಲೆ ಹಲ್ಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್​ ಆಗಿರುವ ಘಟನೆ ನೆಲಮಂಗಲ ಬಸ್ ನಿಲ್ದಾಣದ ಮಂಜುನಾಥ ಹೋಟೆಲ್ ಬಳಿ ನಡೆದಿದೆ. ಗಾಯಾಳುವನ್ನು ರಾಜು (35) ಎಂದು ಗುರುತಿಸಲಾಗಿದೆ. ಹೋಟೆಲ್​ ಓಪನ್​ ಮಾಡಲು ಬಂದ ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನ ಕಂಡು ಶಾಕ್​ ಆಗಿದ್ದಾರೆ. ಕೂಡಲೇ ನೆಲಮಂಗಲ ಟೌನ್​ ಪೊಲೀಸರಿಗೆ ಕರೆ ಮಾಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ