AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಆತ್ಮಹತ್ಯೆಗೆ ಯತ್ನಿಸುವಾಗ ಪಂಚೆ ಹರಿದು ಮರದ ಮೇಲಿಂದ ಬಿದ್ದು ಯುವಕ ಸಾವು

ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಮರದ ಮೇಲಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದ ಬಳಿ ನಡೆದಿದೆ.

ದೇವನಹಳ್ಳಿ: ಆತ್ಮಹತ್ಯೆಗೆ ಯತ್ನಿಸುವಾಗ ಪಂಚೆ ಹರಿದು ಮರದ ಮೇಲಿಂದ ಬಿದ್ದು ಯುವಕ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 17, 2023 | 12:38 PM

Share

ದೊಡ್ಡಬಳ್ಳಾಪುರ: ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಮರದ ಮೇಲಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rurel) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕು ಕಚೇರಿ ವೃತ್ತದ ಬಳಿ ನಡೆದಿದೆ. ನಗರದ ಕರೇನಹಳ್ಳಿ ನಿವಾಸಿ ನಾಗೇಂದ್ರ ಪ್ರಸಾದ್ (27) ಮೃತ ದುರ್ದೈವಿ. ಯುವಕ ನಾಗೇಂದ್ರ ಪ್ರಸಾದ್ ಮಗ್ಗದ ಕೆಲಸ ಮಾಡಿಕೊಂಡಿದ್ದನು. ಯುವಕ ಮನೆಯಲ್ಲಿದ್ದ ಹಣ ತೆಗೆದುಕೊಂಡು ಹೋಗಿ ಮೋಜು ಮಸ್ತಿ ಮಾಡುತ್ತಿದ್ದನು. ಇದರಿಂದ ಬೇಸತ್ತ ಕುಟಂಬಸ್ಥರು, ಈ ಬಗ್ಗೆ ಹಲವು ಭಾರಿ ಬೈದು ಬುದ್ದಿವಾದ ಹೇಳುವುದರ ಜೊತೆಗೆ, ಹಣ ಸಿಗದಂತೆ ಮಾಡಿದ್ದರು.

ಇದರಿಂದ ಮನನೊಂದ ಯುವಕ ನಾಗೇಂದ್ರ ಪ್ರಸಾದ್ ತಾಲೂಕು ಕಚೇರಿ ವೃತ್ತದ ಬಳಿ ಇರುವ ಮರ ಹತ್ತಿ ಪಂಚೆಯಿಂದ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪಂಚೆ ಹರಿದು ಮರದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ದೊಡ್ಡಬಳ್ಳಾಪುರ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು

ಕೆರೆಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದ ಕೆರೆಯಲ್ಲಿ ಭಾಗ್ಯ ಎಂಬ ಗೃಹಿಣಿ ಶವ ಪತ್ತೆಯಾಗಿದೆ. ಪತಿ ಶಂಕರ್, ಅತ್ತೆ ಸಿದ್ದಮ್ಮ, ಅತ್ತಿಗೆ ನೀಲ, ಅತ್ತಿಗೆ ಗಂಡ ಸಿದ್ದಪ್ಪ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೃತ ಭಾಗ್ಯ ಪೋಷಕರು ತಲಕಾಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

15 ವರ್ಷದ ಹಿಂದೆ ಶಂಕರ್ ಜೊತೆ ಭಾಗ್ಯ ವಿವಾಹವಾಗಿತ್ತು. ಮದುವೆಯಾದ ದಿನದಿಂದ ಭಾಗ್ಯಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ರಾಜಿ ಪಂಚಾಯತಿ ಮಾಡಲಾಗಿತ್ತು. ಆದರೂ ಭಾಗ್ಯಳಿಗೆ ಮಾನಸಿಕ ದೈಹಿಕ ಕಿರುಕುಳ‌ ನೀಡಿದ್ದಾರಂತೆ. ಸದ್ಯ ಎಲ್ಲಾ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ನವಲಗುಂದ ತಾಲೂಕಿನಲ್ಲಿ ರಸ್ತೆ ಅಪಘಾತ, ಇಬ್ಬರು ಸಾವು

ಧಾರವಾಡ: ಬೊಲೆರೋ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನವಲಗುಂದ ತಾಲೂಕಿನ ಬೆಳವಟಗಿ ಕ್ರಾಸ್​ನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Tue, 17 January 23

Follow Us
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು