AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ, ಆಧಾರ ಸ್ತಂಭವನ್ನು ಕಳೆದುಕೊಂಡು ಕುಟುಂಬ ಕಂಗಾಲು

ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಕ್ಕೆ ಆಧಾರವಾಗಿದ್ದ ಬಾಲಾಜಿಯನ್ನು ಕಳೆದುಕೊಂಡು ಕುಟುಂಬ ಕಂಗಾಲಾಗಿದೆ.

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ, ಆಧಾರ ಸ್ತಂಭವನ್ನು ಕಳೆದುಕೊಂಡು ಕುಟುಂಬ ಕಂಗಾಲು
ನವೀನ್ ಕುಮಾರ್ ಟಿ
| Edited By: |

Updated on: May 14, 2024 | 3:12 PM

Share

ದೊಡ್ಡಬಳ್ಳಾಪುರ, (ಮೇ 14): ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapur) ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಕನಕಪುರ ಮೂಲದ ಯುವತಿಯೋರ್ವಳು ಪರಿಚಯವಾಗಿದ್ದಳು. ಇಬ್ಬರ ಆತ್ಮೀಯತೆ, ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಹಿನ್ನೆಲೆಯಲ್ಲಿ ಮನನೊಂದು ಬಾಲಾಜಿ ಕಾಳುಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಬ್ಬಳ್ಳಿ: ಮಗು ಆಗುತ್ತಿದ್ದಂತೆ ಪತ್ನಿ ಬಿಟ್ಟು ಪರಾರಿಯಾದ ಪತಿ; ಅನೇಕ ಹೆಣ್ಮಕ್ಕಳಿಗೆ ಮೋಸ ಮಾಡಿರುವ ಆರೋಪ

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ , ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್