AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಟಿವಿಯಲ್ಲಿ ದಾಖಲು: ಮನೆಯಲ್ಲಿ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಸಿಬಿ ದಾಳಿ, ಆನೇಕಲ್ ಪುರಸಭೆ ಅಧಿಕಾರಿ ಸೇರಿ ಮೂವರ ಸೆರೆ

ಕಂದಾಯ ಸರಿಯಾಗಿ ಕಟ್ಟಿಲ್ಲ. 25 ಲಕ್ಷ ರೂ ಬಾಕಿ ಇದೆ ಎಂದು ಸದರಿ ಪುರಸಭಾ ಸಿಬ್ಬಂದಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. 25 ಲಕ್ಷ ರೂಪಾಯಿ ಬದಲು 5 ಲಕ್ಷ ಲಂಚ ಕೊಡುವಂತೆ ಕೈಯೊಡ್ಡಿದ್ದರು. ಆನೇಕಲ್ ಪುರಸಭೆಯ ಆರ್.ಐ. ನಾಗರಾಜ್, ಸಹಾಯಕ ಪ್ಯಾರಜಾನ್ ಸೇರಿದಂತೆ ಒಟ್ಟು ಮೂರು ಮಂದಿ ಬಂಧನವಾಗಿದೆ.

ಸಿಸಿಟಿವಿಯಲ್ಲಿ ದಾಖಲು: ಮನೆಯಲ್ಲಿ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಸಿಬಿ ದಾಳಿ, ಆನೇಕಲ್ ಪುರಸಭೆ ಅಧಿಕಾರಿ ಸೇರಿ ಮೂವರ ಸೆರೆ
ಸಿಸಿಟಿವಿಯಲ್ಲಿ ದಾಖಲು: ಮನೆಯಲ್ಲಿ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಸಿಬಿ ದಾಳಿ, ಆನೇಕಲ್ ಪುರಸಭೆ ಅಧಿಕಾರಿ ಸೇರಿ ಮೂವರ ಸೆರೆ
TV9 Web
| Edited By: |

Updated on:Jan 20, 2022 | 12:19 PM

Share

ಆನೇಕಲ್: ಮನೆಯೊಂದರಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ ತಂಡ (ಎಸಿಬಿ) ದಾಳಿ ನಡೆಸಿದ್ದು, ಆನೇಕಲ್ ಪುರಸಭೆ ಕಂದಾಯ ನಿರೀಕ್ಷಕ (ಆರ್‌ಐ) ನಾಗರಾಜ್ ಸೇರಿ ಮೂವರನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಬಾರಂದೂರು ರಸ್ತೆಯ ಮನೆಯೊಂದರಲ್ಲಿ ಅರೆಸ್ಟ್ ಮಾಡಲಾಗಿದೆ. ಆರ್‌ಐ ನಾಗರಾಜ್ ಕಂದಾಯ ಸರಿಯಾಗಿ ಕಟ್ಟಿಲ್ಲವೆಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಖಚಿತ‌ ಮಾಹಿತಿಯ ಮೇರೆಗೆ ನಿನ್ನೆ ಬುಧವಾರ ಸಂಜೆ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಆನೇಕಲ್ ಪುರಸಭೆಯ ಆರ್.ಐ. ನಾಗರಾಜ್, ಸಹಾಯಕ ಪ್ಯಾರಜಾನ್ ಸೇರಿದಂತೆ ಒಟ್ಟು ಮೂರು ಮಂದಿ ಬಂಧನವಾಗಿದೆ.

ಕಂದಾಯ ಸರಿಯಾಗಿ ಕಟ್ಟಿಲ್ಲ. 25 ಲಕ್ಷ ರೂ ಬಾಕಿ ಇದೆ ಎಂದು ಸದರಿ ಪುರಸಭಾ ಸಿಬ್ಬಂದಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. 25 ಲಕ್ಷ ರೂಪಾಯಿ ಬದಲು 5 ಲಕ್ಷ ಲಂಚ ಕೊಡುವಂತೆ ಕೈಯೊಡ್ಡಿದ್ದರು. ಅದರಂತೆ ಇಂದು 1.20 ಲಕ್ಷ ರೂ ಲಂಚ ಪಡೆಯುವಾಗ ಎಸಿಬಿ ನೇರ ದಾಳಿ ನಡೆಸಿತ್ತು. ತಿಮ್ಮಣ್ಣನವರ ಹೆಸರಿನಲ್ಲಿದ್ದ ಆಸ್ತಿ ವಿಚಾರ ಇದಾಗಿದೆ. ಕಂದಾಯ ಕಡಿಮೆ ಕಟ್ಟಿದ್ದೀರಿ. 25 ಲಕ್ಷ ರೂಪಾಯಿ ಬ್ಯಾಲೆನ್ಸ್ ಇದೆ ಎಂದು ಅಧಿಕಾರಿಗಳು ಹೇಳಿದ್ದರು. ಇದರಿಂದ ತಿಮ್ಮಣ್ಣ ಅವರ ಮಗ ಗೋಪಿ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಲಂಚ ಪಡೆಯುತ್ತಿದ್ದಾಗ ದಾಳಿ ನಡೆದಿದೆ. ಪುರಸಭಾ ಸಿಬ್ಬಂದಿ ಲಂಚ‌‌ ಸ್ವಿಕರಿಸಲು ಮನೆ ಬಳಿ ಬಂದಿದ್ದ‌ ಸಿಸಿಟಿವಿ ದೃಶ್ಯಾವಳಿಯೂ ಲಭ್ಯವಾಗಿದೆ.

Village Accountant ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಬೆಂಗಳೂರು: ಗ್ರಾಮ ಲೆಕ್ಕಿಗ (Village Accountant) ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಈರಣ್ಣನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪೀಕುತ್ತಿದ್ದ ವಂಚನ ಅರೆಸ್ಟ್ ಆಗಿದ್ದಾನೆ.

ಆರೋಪಿ ಈರಣ್ಣ ತುಮಕೂರು ಜಿಲ್ಲೆಯ ಕಂಪನಹಳ್ಳಿ ನಿವಾಸಿ. ಕೇವಲ ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಈರಣ್ಣ ಟಾರ್ಗೆಟ್ ಮಾಡಿ ವಂಚಿಸ್ತಿದ್ದ. ತಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಅಂತ ಪರಿಚಯ ಮಾಡಿಕೊಳ್ತಿದ್ದ ಈರಣ್ಣ ವಿಧಾನಸೌಧದ ಬಳಿಯೇ ಕೂತು ಅಭ್ಯರ್ಥಿಗಳನ್ನ ಖೆಡ್ಡಕ್ಕೆ ಕೆಡವುತ್ತಿದ್ದ. ಗ್ರಾಮಲೆಕ್ಕಿಗನ ಕೆಲಸ ಕೊಡಿಸ್ತೀನಿ, ಅದಕ್ಕಾಗಿ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿರಬೇಕು. ಹೀಗಾಗಿ ನಕಲಿ ಅಂಕಪಟ್ಟಿ ಸಿದ್ಧಪಡಿಸಿಕೊಳ್ಳಿ ಎಂದು ನಂಬಿಸುತ್ತಿದ್ದ. ಆರೋಪಿ ಈರಣ್ಣನ ಮಾತು ಕೇಳಿ ಅನೇಕರು ನಕಲಿ ಅಂಕಪಟ್ಟಿ ತಯಾರಿಸಿದ್ದರು.

Also Read:

Village Accountant ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು

Published On - 12:16 pm, Thu, 20 January 22

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!