ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ, ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿ ಚಾಲಕನ ನರಳಾಟ

ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿ ಕಂಟೇನರ್ ಪಲ್ಟಿಯಾಗಿದ್ದು ಕಂಟೇನರ್ ಅಡಿ ಸಿಲುಕಿ ಚಾಲಕ‌ ನರಳಾಡಿದ್ದಾನೆ. ಹೈವೆಯಿಂದ ಸರ್ವಿಸ್ ರಸ್ತೆಗೆ ಕಂಟೇನರ್ ಉರುಳಿದ್ದು ಸ್ಥಳೀಯರು, ಪೊಲೀಸರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ, ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿ ಚಾಲಕನ ನರಳಾಟ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ
Edited By: ಆಯೇಷಾ ಬಾನು

Updated on: Sep 15, 2023 | 10:13 AM

ರಾಮನಗರ, ಸೆ.15: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ(Bengaluru Mysuru Expressway) ಆರಂಭವಾದ ದಿನದಿಂದಲೂ ಒಂದಲ್ಲಾವೊಂದು ವಿಷಯಕ್ಕೆ ಚರ್ಚೆಯಾಗುತ್ತಲೇ ಬಂದಿದೆ. ಮಾರ್ಚ್ ನಲ್ಲಿ ಲೋಕಾರ್ಪಣೆಗೊಂಡ ಈ ರಸ್ತೆಯಲ್ಲಿ ಹೆಚ್ಚು ಅಪಾಘತಗಳು ಸಂಭವಿಸಿವೆ(Accident). ಈಗ ಮತ್ತೊಂದು ಅವಘಡವಾಗಿದೆ. ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಟೈರ್ ಸ್ಪೋಟಗೊಂಡು ಸಿಮೆಂಟ್ ತುಂಬಿದ ಕಂಟೇನರ್ ಪಲ್ಟಿಯಾಗಿದೆ. ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿ ಕಂಟೇನರ್ ಪಲ್ಟಿಯಾಗಿದ್ದು ಕಂಟೇನರ್ ಅಡಿ ಸಿಲುಕಿ ಚಾಲಕ‌ ನರಳಾಡಿದ್ದಾನೆ.

ಹೈವೆಯಿಂದ ಸರ್ವಿಸ್ ರಸ್ತೆಗೆ ಕಂಟೇನರ್ ಉರುಳಿದ್ದು ಸ್ಥಳೀಯರು, ಪೊಲೀಸರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ. ಸದ್ಯ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿ ಚಾಲಕನನ್ನು ರಕ್ಷಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಸಿಮೆಂಟ್ ಲೋಡ್ ತುಂಬಿಕೊಂಡು ಕಂಟೇನರ್ ಹೋಗ್ತಿತ್ತು. ಈ ವೇಳೆ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಕಂಟೇನರ್ ಹೈವೆಯಿಂದ ಸರ್ವಿಸ್ ರಸ್ತೆಗೆ ಉರುಳಿದೆ. ಈ ಪರಿಣಾಮ ಲಾರಿ ಇಂಜಿನ್ ಮತ್ತು ಕಂಟೇನರ್ ಇಬ್ಬಾಗವಾಗಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ, ಬೈಕ್​ ಮುಖಾಮುಖಿ; ಓರ್ವ ಸಾವು

ಮೈಸೂರು: ಲಿಂಗದೇವರು ಕೊಪ್ಪಲಿನಲ್ಲಿ ಆಟೋ, ಬೈಕ್​ ಮುಖಾಮುಖಿ ಡಿಕ್ಕಿಯಾಗಿ ಸ್ವಾಮಿ(30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಂಜು, ಕುಮಾರ್​ ಎಂಬುವರಿಗೆ ಗಾಯಗಳಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಬಳಿಕ ಆಟೋ ಚಾಲಕ ಪರಾರಿಯಾಗಿದ್ದಾನೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us