AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯಲ್ಲಿ ಬಾರ್ ಎದುರು ಪುಂಡರ ರೌಡಿಸಂ; ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದ ಆರೋಪಿಗಳು

ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದು ಬೆನ್ನಿಗೆ ಇರಿದಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿಯಲ್ಲಿ ಬಾರ್ ಎದುರು ಪುಂಡರ ರೌಡಿಸಂ; ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದ ಆರೋಪಿಗಳು
ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: sandhya thejappa|

Updated on:Nov 30, 2021 | 12:33 PM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಬಾರ್ ಎದುರು ಪುಂಡರ ಗ್ಯಾಂಗ್ ರೌಡಿಸಂ ಮಾಡಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಜೊತೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಯುವಕನ ತಲೆಗೆ ಬಿಯರ್ ಬಾಟಲ್‌ನಿಂದ ಹೊಡೆದು ಬೆನ್ನಿಗೆ ಇರಿದಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 26ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಗುಡಿಯ ಆನಂದ್‌(23) ಎಂಬ ಯುವಕ ಹಲ್ಲೆಗೊಳಗಾಗಿದ್ದಾನೆ. ರೋಹನ್, ಮಧು, ಚಂದನ್ ಸೇರಿ ಐವರ ವಿರುದ್ಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇನ್ನು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೈಕ್ ಸವಾರ ಸಾವು ಪಲ್ಟಿಯಾಗಿದ್ದ ಆಟೋಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೊಸ ಅಗ್ರಹಾರದ ಬಳಿ ಅಪಘಾತ ಸಂಭವಿಸಿದೆ. 35 ವರ್ಷದ ಸತೀಶ್ ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಪಾರ್ವತಿ, ಮಗಳು ಖುಷಿ, ಮಗ ಜೀವನ್ಗೆ ಗಾಯಗಳಾಗಿವೆ. ಸದ್ಯ ಈ ಪ್ರಕರಣ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

8 ಜನರ ವಿರುದ್ಧ ಎಫ್​​ಐಆರ್​ ದಾಖಲು ನಂಜನಗೂಡು ಪೊಲೀಸರ ಕಸ್ಟಡಿಯಲ್ಲಿದ್ದ ‌ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಬ್ಯಾಳಾರುಹುಂಡಿ ನಿವಾಸಿ ಸಿದ್ದರಾಜು(31) ಮೃತಪಟ್ಟಿದ್ದ. ಮಹಿಳೆ ವಿಚಾರಕ್ಕೆ ಪಾನಮತ್ತನಾಗಿ ಸಿದ್ದರಾಜು ಗಲಾಟೆ ಮಾಡಿದ್ದ. ಈ ವೇಳೆ ಸಿದ್ದರಾಜು ಮೇಲೆ ಹಲ್ಲೆ ನಡೆಸಲಾಗಿತ್ತು. ಸಿದ್ದರಾಜು ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಮೃತಪಟ್ಟಿದ್ದ.

ಇದನ್ನೂ ಓದಿ

ಪಡಿತರ ಅಕ್ಕಿಯಲ್ಲಿ ಪ್ಲ್ಯಾಸ್ಟಿಕ್ ಅಕ್ಕಿ ಸೇರಿರುವ ಆರೋಪ, ಕರಡಕಲ್‌ನ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೆಲವು ಶಾಲೆಯಲ್ಲಿ ಕನ್ನಡ ತರಗತಿಯನ್ನು ಇಂಗ್ಲಿಷ್​ನಲ್ಲಿ ಡೆಮೊ ಕೊಡಿ ಎನ್ನುವುದೂ ಇದೆ; ಹೀಗಾದರೆ ಕನ್ನಡ ಕಲಿಕೆ ಹೇಗೆ ಸಾಧ್ಯ?

Published On - 9:42 am, Tue, 30 November 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!