AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​: ನಿಧಿಗಾಗಿ ತಂದೆಯಿಂದಲೇ ಹಣ ವಸೂಲಿ ಆರೋಪ; ಮಗಳು ನೀಡಿದ ಸ್ಪಷ್ಟನೆ ಇಲ್ಲಿದೆ

ನಿಧಿಗಾಗಿ ತಂದೆಯಿಂದಲೇ ಹಣ ವಸೂಲಿ ಆರೋಪಕ್ಕೆ ಸಮಬಂಧಿಸಿದಂತೆ ‘ಈ ಬಗ್ಗೆ ಪ್ರತ್ಯಾರೋಪ ಮಾಡಿರುವ ತಿಮ್ಮರಾಯಪ್ಪನ ಪುತ್ರಿ ಮಂಜುಳ, ನಾವು ಯಾವುದೇ ನಿಧಿಗಾಗಿ ಮೋಸ ಮಾಡಿಲ್ಲ. ಜಮೀನಿನಲ್ಲಿ ಭಾಗ ಕೇಳುತ್ತಿದ್ದಂತೆ ತಂದೆ ಹಾಗೂ ಸಹೋದರ ಇಲ್ಲಸಲ್ಲದ ಆರೋಪವನ್ನ ಮಾಡುತ್ತಿದ್ದಾರೆ ಎಂದು ಮಗಳು ಪ್ರತ್ಯಾರೋಪ ಮಾಡಿದ್ದಾರೆ.

ಆನೇಕಲ್​: ನಿಧಿಗಾಗಿ ತಂದೆಯಿಂದಲೇ ಹಣ ವಸೂಲಿ ಆರೋಪ; ಮಗಳು ನೀಡಿದ ಸ್ಪಷ್ಟನೆ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Sep 08, 2023 | 7:43 PM

Share

ಆನೇಕಲ್​, ಸೆ.08: ನಿಧಿಗಾಗಿ ತಂದೆಯಿಂದಲೇ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಜಮೀನಿನಲ್ಲಿ ಭಾಗ ಕೇಳಿದ್ದಕ್ಕೆ ಈ ರೀತಿ ಆರೋಪ ಮಾಡಿದ್ದಾರೆ ಎಂದು ಮಗಳು ಮಂಜುಳಾ ಪ್ರತ್ಯಾರೋಪ ಮಾಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಬಂಡಾಪುರ ಗ್ರಾಮದ ನಿವಾಸಿ ತಿಮ್ಮರಾಯಪ್ಪ ಎಂಬುವವರಿಗೆ ನಿಧಿ ಆಸೆ ತೋರಿಸಿ ಪುತ್ರಿ ಮಂಜುಳ ಹಾಗೂ ಅಳಿಯ ಮಂಜುನಾಥ್ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ತಿಮ್ಮರಾಯಪ್ಪ ಹಾಗೂ ಪುತ್ರ ಪ್ರದೀಪ್ ಕುಮಾರ್ ಆರೋಪ ಮಾಡಿದ್ದರು. ಈ ಬಗ್ಗೆ ಪ್ರತ್ಯಾರೋಪ ಮಾಡಿರುವ ತಿಮ್ಮರಾಯಪ್ಪನ ಪುತ್ರಿ ಮಂಜುಳ, ನಾವು ಯಾವುದೇ ನಿಧಿಗಾಗಿ ಮೋಸ ಮಾಡಿಲ್ಲ. ಜಮೀನಿನಲ್ಲಿ ಭಾಗ ಕೇಳುತ್ತಿದ್ದಂತೆ ತಂದೆ ಹಾಗೂ ಸಹೋದರ ಇಲ್ಲಸಲ್ಲದ ಆರೋಪವನ್ನ ಮಾಡುತ್ತಿದ್ದಾರೆ ಎಂದಿದ್ದಾರೆ.

ನಾವು ನಿಧಿಯ ಆಸೆಯನ್ನು ತೋರಿಸಿಲ್ಲ ಅವರ ಬಳಿ ಹಣವನ್ನು ಸಹ ಪಡೆದಿಲ್ಲ. ಇದ್ದರೆ ಈ ಬಗ್ಗೆ ದಾಖಲೆಗಳನ್ನ ತೋರಿಸಲಿ ಸುಖಾಸುಮ್ಮನೆ ನಮ್ಮ ಹೆಸರನ್ನ ಹಾಳು ಮಾಡಿದ್ದಾರೆ. ನಮಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ, ಈ ಬಗ್ಗೆ ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ. ಬಳಿಕ ಮಾತನಾಡಿದ ತಿಮ್ಮರಾಯಪ್ಪನ ಅಳಿಯ ಮಂಜುನಾಥ್, ಜಮೀನಿನಲ್ಲಿ ಭಾಗ ಕೇಳಿದ್ದಕ್ಕೆ ನಮ್ಮ ಮಾವ ಈ ರೀತಿಯಾಗಿ ಆರೋಪ ಮಾಡಿದ್ದು, ನಾನು ಯಾವುದೇ ಹಣಕ್ಕೆ ಬೇಡಿಕೆ ಇಟ್ಟಿಲ್ಲ ಅವರ ಬಳಿಯೂ ಹಣವನ್ನ ಪಡೆದಿಲ್ಲ. ನಮ್ಮ ಮೇಲೆ ಮಾಡಿರುವ ಆರೋಪದ ವಿರುದ್ದ ಕಾನೂನ ಹೋರಾಟ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ:ನಟಿಯ ತಾಯಿ ಬಳಿ ಹೋಂಗಾರ್ಡ್ ಹಣ ವಸೂಲಿ ಮಾಡಿದ ಪ್ರಕರಣ, ಹೊರಬಿತ್ತು ತಾಯಿಯ ಮಸಾಜ್ ಪಾರ್ಲರ್​​ನ ಚಿನ್ನದ ಕಥೆ!

ಘಟನೆ ವಿವರ

ನಿಧಿ ಆಸೆ ತೋರಿಸಿ ಮಕ್ಕಳಿಂದಲೇ ತಂದೆ ಹಾಗೂ ಸಹೋದರನಿಗೆ ಭಾರಿ ವಂಚನೆ ಎಸಗಲಾಗಿದೆ ಎಂಬ ಆರೋಪ ಸೆ.5 ರಂದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬಂಡಾಪುರ ಗ್ರಾಮದಲ್ಲಿ ಕೇಳಿ ಬಂದಿತ್ತು. ನಿಧಿ ಆಸೆ ತೋರಿಸಿ ಮಗಳು ಅಳಿಯನಿಂದಲೇ ತಂದೆಗೆ 50 ಲಕ್ಷ ಪಂಗನಾಮ ಹಾಕಿರುವ ಪ್ರಕರಣ ವರದಿಯಾಗಿತ್ತು. ಮನೆಯಲ್ಲಿ ನಿಧಿಯಿದೆ ನಂಬಿಸಿ ತಮಿಳುನಾಡು ಮೂಲದ ಪೂಜಾರಿಯನ್ನು ಕರೆಸಿ ವೃದ್ಧ ದಂಪತಿಗಳಿಗೆ ಹೆದರಿಸಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿತ್ತು. ಇದೀಗ ಮಗಳು ಘಟನೆ ಕುರಿತು ಸ್ಪಷ್ಟ ಪಡಿಸಿದ್ದಾರೆ. ಜೊತೆಗೆ ನಾವು ಕೂಡ ಅವರ ಮೇಲೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ