ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ

ಇತ್ತೀಚೆಗೆ ಲೈಗಿಂಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕಾಮುಕರ ಕಾಟ ಹೆಚ್ಚಾಗಿದೆ. ಇದೀಗ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ
ಪರಾರಿಯಾದ ಆರೊಪಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 5:53 PM

ಬೆಂಗಳೂರು, ಸೆ.11: ರಾಜ್ಯ ರಾಜಧಾನಿ ಬೆಂಗಳೂರಿನ ಮಾದನಾಯಕನಹಳ್ಳಿ(Madanayakahalli) ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬಟ್ಟೆ ಒಣಗಿ ಹಾಕುವ ಸಲುವಾಗಿ ಮಹಡಿ ಮೇಲೆ ತೆರಳಿದ್ದ ವೇಳೆ ಪೋಷಕರು ಇಲ್ಲದನ್ನು ಗಮನಿಸಿ ಮಹಡಿ ಮೇಲೆ ಹೋಗಿದ್ದ ದುರುಳ, ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಕೃತ್ಯ ಎಸಗಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಇನ್ನು ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಾವು

ಮೈಸೂರು: ನಗರದ ಗಣಪತಿ ಸಚ್ಚಿದಾನಂದ ಆಶ್ರಮ ಬಳಿ ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಯ್ಯದ್ ನೌಮಾನ್(27) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಸು ಅಡ್ಡ ಬಂದಿದ್ದಕ್ಕೆ ಕೆಳಗೆ ಬಿದ್ದಿದ್ದ ಸವಾರ ಸಯ್ಯದ್ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ದುರ್ಘಟನೆ ನಡೆದಿದೆ. ಈ ಕುರಿತು ಕೆ.ಆರ್.ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ತುಮಕೂರು: ತಂದೆಯಿಂದಲೇ ನಿರಂತರ ಅತ್ಯಾಚಾರ, 3 ತಿಂಗಳ ಗರ್ಭಿಣಿಯಾದ 14 ವರ್ಷದ ಮಗಳು

ಟಿಪ್ಪರ್ ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಸವಾರ ಕೊನೆಯುಸಿರೆಳೆದಿದ್ದಾನೆ. ಟಿ.ಬೇಗೂರಿನ ಅರಸೇಗೌಡ(45) ಮೃತ ರ್ದುದೈವಿ. ಅಪಘಾತದ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಇನ್ನು ಅಪಘಾತದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us