AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಡ್ರಗ್ಸ್ ಸಪ್ಲೈ ಮಾಡುವುದರ ಬಗ್ಗೆ ಮಾಹಿತಿ ಬಾಯ್ಬಿಟ್ಟ ಆರೋಪಿ ಗಂಗಾಧರ್, ಕೆಲ ಸಜಾ ಬಂಧಿ ಕೈದಿಗಳು ವಶಕ್ಕೆ

ಪರಪ್ಪನ ಅಗ್ರಹಾರ ಸಿಬ್ಬಂದಿ ಗಂಗಾಧರ್, ತಾನು ಯಾವ ರೀತಿ ಕೈದಿಗಳಿಗೆ ಡ್ರಗ್ಸ್ ನೀಡುತ್ತಿದ್ದೆ ಎಂಬುದರ ಬಗ್ಗೆ ಮಾಹಿತಿ ಬಾಯ್ಬಿಟ್ಟಿದ್ದಾನೆ. ಗಂಗಾಧರ್ ಮಾತ್ರೆ ನೀಡುವ ನೆಪದಲ್ಲಿ ಕೈದಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಕೆಲ ಸಜಾ ಬಂಧಿ ಕೈದಿಗಳಿಗೆ ಡ್ರಗ್ಸ್ ಸಪ್ಲೈ ಆಗ್ತಿತ್ತು. ಶರ್ಟ್ ಜೇಬಿನಲ್ಲಿ ಮಾತ್ರೆಗಳ ಶೀಟನ್ನ ಇಟ್ಟುಕೊಂಡು, ಒಳು ಉಡುಪಿನಲ್ಲಿ ಡ್ರಗ್ಸ್ ಬಚ್ಟಿಟ್ಟುಕೊಂಡು ಕೈದಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ.

ಪರಪ್ಪನ ಅಗ್ರಹಾರದಲ್ಲಿ ಡ್ರಗ್ಸ್ ಸಪ್ಲೈ ಮಾಡುವುದರ ಬಗ್ಗೆ ಮಾಹಿತಿ ಬಾಯ್ಬಿಟ್ಟ ಆರೋಪಿ ಗಂಗಾಧರ್, ಕೆಲ ಸಜಾ ಬಂಧಿ ಕೈದಿಗಳು ವಶಕ್ಕೆ
ಸೆಂಟ್ರಲ್ ಜೈಲು
TV9 Web
| Edited By: |

Updated on:Feb 16, 2022 | 9:41 AM

Share

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಅನೇಕ ಅಕ್ರಮ ಚಟುವಟಿಕೆಗಳ ಆಗರವಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮಾದಕ ಸಪ್ಲೈ(Drugs) ಮಾಡಲು ಹೋಗಿ ಗಂಗಾಧರ್ ಎಂಬ ಸಿಬ್ಬಂದಿ ಅರೆಸ್ಟ್ ಆಗಿದ್ದರು. ಸದ್ಯ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸರು ಆರೋಪಿ ಗಂಗಾಧರ್ನನ್ನು 14 ದಿನಗಳ ಕಾಲ ಕಸ್ಟಡಿಗೆ ಪಡೆದು ಸುದೀರ್ಘ ವಿಚಾರಣೆ ನಡೆಸಿದ್ದು ಅನೇಕ ಮಾಹಿತಿಗಳು ಹೊರ ಬಿದ್ದಿವೆ. ಡ್ರಗ್ಸ್ ಸರಬರಾಜು ಜೈಲಿನಲ್ಲಿ ಹೇಗೆಲ್ಲಾ ಆಗ್ತಿತ್ತು ಅನ್ನೋದನ್ನ ಆರೋಪಿ ಬಾಯ್ಬಿಟ್ಟಿದ್ದಾನೆ.

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಹಿನ್ನಲೆ ಈಗಾಗ್ಲೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ಮಧ್ಯೆ ಸಿಬ್ಬಂದಿಯಿಂದಲೇ ಡ್ರಗ್ಸ್ ಸರಬರಾಜು ಆಗುತ್ತಿರುವ ವಿಚಾರವನ್ನ ಪೊಲೀಸ್ರು ಗಂಭೀರವಾಗಿ ಪರಿಗಣಿಸಿದ್ದಾರೆ. ಸದ್ಯ ಕೈದಿಗಳಿಗೆ ಡ್ರಗ್ಸ್ ಸಪ್ಲೈ ಮಾಡಲು ಹೋಗಿ ಸಿಕ್ಕಿಬಿದ್ದ ಆರೋಪಿ ಗಂಗಾಧರ್ನನ್ನು ವಿಚಾರಣೆ ನಡೆಸಿದ್ದು ಅನೇಕ ಮಾಹಿತಿಗಳು ಬಯಲಾಗಿವೆ.

ಪರಪ್ಪನ ಅಗ್ರಹಾರ ಸಿಬ್ಬಂದಿ ಗಂಗಾಧರ್, ತಾನು ಯಾವ ರೀತಿ ಕೈದಿಗಳಿಗೆ ಡ್ರಗ್ಸ್ ನೀಡುತ್ತಿದ್ದೆ ಎಂಬುದರ ಬಗ್ಗೆ ಮಾಹಿತಿ ಬಾಯ್ಬಿಟ್ಟಿದ್ದಾನೆ. ಗಂಗಾಧರ್ ಮಾತ್ರೆ ನೀಡುವ ನೆಪದಲ್ಲಿ ಕೈದಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಕೆಲ ಸಜಾ ಬಂಧಿ ಕೈದಿಗಳಿಗೆ ಡ್ರಗ್ಸ್ ಸಪ್ಲೈ ಆಗ್ತಿತ್ತು. ಶರ್ಟ್ ಜೇಬಿನಲ್ಲಿ ಮಾತ್ರೆಗಳ ಶೀಟನ್ನ ಇಟ್ಟುಕೊಂಡು, ಒಳು ಉಡುಪಿನಲ್ಲಿ ಡ್ರಗ್ಸ್ ಬಚ್ಟಿಟ್ಟುಕೊಂಡು ಕೈದಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ. ತಪಾಸಣೆ ವೇಳೆ ಮಾತ್ರೆಯ ಶೀಟ್ ತೆಗೆದು ಸಜಾ ಬಂಧಿ ಕೈದಿಗಳಿಗೆ ಅಂತೇಳಿ ಒಳ ಹೋಗ್ತಿದ್ದ. ನಾಲ್ಕೈದು ಬಾರಿ ಇದೇ ರೀತಿ ಜೈಲಿನ ಒಳಗೆ ಡ್ರಗ್ಸ್ ತೆಗೆದುಕೊಂಡು ಹೋಗಿರೋದು ಬೆಳಕಿಗೆ ಬಂದಿದೆ. ಜೈಲಿನ ಒಳಗಿದ್ದ ಓರ್ವ ಸಜಾ ಬಂಧಿ ಕೈದಿಯ ಸ್ನೇಹಿತನಿಂದ ಗಂಗಾಧರ್ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಜೈಲಿನೊಳಗೆ ಒಂದು ಬಾರಿ ಡ್ರಗ್ಸ್ ನೀಡುವುದಕ್ಕೆ ₹5,000 ಪಡೆಯುತ್ತಿದ್ದ. ಗಂಗಾಧರ್ ಸಜಾ ಬಂಧಿ ಕೈದಿಗೆ ನೀಡುತ್ತಿದ್ದ ಡ್ರಗ್ಸ್ನ ಸಜಾ ಬಂಧಿ ಕೈದಿಗಳು ಚಿಕ್ಕ ಚಿಕ್ಕ ಪ್ಯಾಕೇಟ್ಗಳನ್ನಾಗಿ ಮಾಡಿ ರೌಡಿಶೀಟರ್ಗಳಿಗೆ ಮತ್ತು ಕೆಲ ಕೈದಿಗಳಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು.

ಇದನ್ನೇ ಕೆಲ ಸಜಾ ಬಂಧಿ ಕೈದಿಗಳು ವಾರಕ್ಕೊಮ್ಮೆ ಜೈಲಿನಲ್ಲಿ ಬ್ಯುಸಿನಸ್ ಮಾಡಿಕೊಂಡಿದ್ದರು. ಸದ್ಯ ಪೊಲೀಸರು ನಾಲ್ಕೈದು ಮಂದಿ ಸಜಾ ಬಂಧಿ ಕೈದಿಗಳನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಂದ ಸಜಾ ಬಂಧಿ ಕೈದಿಗಳ ವಿಚಾರಣೆ ನಡೆಯುತ್ತಿದೆ. ಜೈಲಿನಲ್ಲಿ ಡ್ರಗ್ ಮಾರಾಟದ ಬಗ್ಗೆ ಕೈದಿಗಳು ಬಾಯ್ಬಿಟ್ಟಿದ್ದಾರೆ. ಡ್ರಗ್ಸ್ ಮತ್ತು ಗಾಂಜಾ ಡೀಲ್ ಮಾಡ್ತಿದ್ದ ಓರ್ವ ಸಜಾ ಬಂಧಿ ಕೈದಿಯನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: Parappana Agrahara Jail: ಜಯಲಲಿಲಾ ಆಪ್ತೆ ಶಶಿಕಲಾಗೆ ನೆರವು ನೀಡಿದ ಪರಪ್ಪನ ಅಗ್ರಹಾರ ಜೈಲು ಪೊಲೀಸರಿಗೆ ಸಂಕಷ್ಟ

Published On - 9:40 am, Wed, 16 February 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್