AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಒಂದು ತಿಂಗಳ ಒಳಗೆ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಕೊಲೆಯಾಯಿತು. ಇದು ಮಾಸುವ ಮುನ್ನ ಕೊಡಗಿನಲ್ಲಿ ಬಾಲಕಿ ಕೊಲೆ, ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಗುರುವಾರ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ, ಆನೇಕಲ್​ನಲ್ಲಿ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ
ವಿದ್ಯಾರ್ಥಿನಿ ಹರ್ಷಿತಾ
ರಾಮು, ಆನೇಕಲ್​
| Edited By: |

Updated on:May 17, 2024 | 1:53 PM

Share

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ (Neha Hiremath), ಅಂಜಲಿ ಅಂಬಿಗೇರ (Anjali Ambiger), ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಮೃತದೇಹ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ(18) ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು.

ಪಕ್ಕದ ಕೋಣೆಯಲ್ಲಿದ್ದ ಪ್ರಗತಿ ಎಂಬ ವಿದ್ಯಾರ್ಥಿನಿ ಹರ್ಷಿತಾ ಇದ್ದ ಕೋಣೆಯ ಬಾಗಲಿನ್ನು ಸಾಕಷ್ಟು ಸಾರಿ ಬಡೆಯುತ್ತಾಳೆ. ಆದರೆ ಹರ್ಷಿತಾ ಬಾಗಿಲು ತೆಗೆಯುವುದಿಲ್ಲ. ಅನುಮಾನಗೊಂಡ ಪ್ರಗತಿ ಸ್ಟೂಲ್​ ಮೇಲೆ ಹತ್ತಿ, ಕಿಟಕಿಯಿಂದ ಇಣುಕಿ ನೋಡಿದಾಗ ಹರ್ಷಿತಾಳ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದ್ದಾಳೆ. ಕೂಡಲೆ ಪ್ರಗತಿ ಅಕ್ಕ-ಪಕ್ಕದ ಕೋಣೆಯಲ್ಲಿದ್ದ ಸಹಪಾಠಿಗಳಿಗೆ ವಿಷಯ ತಿಳಿಸುತ್ತಾಳೆ. ಬಳಿಕ ಎಲ್ಲರೂ ಸೇರಿ ಬಾಗಿಲು ಮುರಿದು ಹರ್ಷಿತಾ ಕೋಣೆಯೊಳಗಡೆ ಹೋಗಿ, ಆಕೆಯನ್ನು ನೇಣು ಕುಣಿಕೆಯಿಂದ ಕೆಳಗೆ ಇಳಿಸಿ ಆಸ್ಪತ್ರೆಗೆ ಕರೆದೆಯ್ಯೊಲು ಮುಂದಾಗುತ್ತಾರೆ. ಆದರೆ ಅಷ್ಟೊತ್ತಿಗಾಗಲೆ ಹರ್ಷಿತಾ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಇದನ್ನೂ ಓದಿ: ಅಂಜಲಿಯನ್ನು ಹತ್ಯೆಗೈದು, ರೈಲಿನಲ್ಲಿ ಮಹಿಳೆಗೂ ಚಾಕುವಿನಿಂದ ಚುಚ್ಚಿದ್ದ ಆರೋಪಿ ವಿಶ್ವ

ಹರ್ಷಿತಾ ನೇಣು ಹಾಕಿಕೊಂಡಿದ್ದ ವಿಚಾರವನ್ನು ವಿದ್ಯಾರ್ಥಿನಿಯರು ಕಾಲೇಜು ಪ್ರಾಧ್ಯಾಪಕಿ ಭಾರತಿ ತಿಳಿಸುತ್ತಾರೆ. ಆಗ ಪ್ರಾಧ್ಯಾಪಕಿ ಭಾರತಿ, “ಬಾಗಿಲು ಯಾಕೆ ತೆರೆದೆ” ಎಂದು ವಿದ್ಯಾರ್ಥಿನಿ ಪ್ರಗತಿಯನ್ನು ಪ್ರಶ್ನೆ ಮಾಡುತ್ತಾರೆ. ಅಲ್ಲದೆ ಬೇಜವಾಬ್ದಾರಿಯಾಗಿ ಮಾತನಾಡುತ್ತಾರೆ. ಪ್ರಾಧ್ಯಾಪಕಿ ಭಾರತಿ ವರ್ತನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು (ಮೇ 17) ಕಾಲೇಜು ಎದುರು ಪ್ರತಿಭಟನೆ ಮಾಡಿದರು.

ಹರ್ಷಿತಾ ಮೃತಪಟ್ಟಾಗ ರಕ್ಷಣೆಗೆ ವಸತಿ ನಿಲಯದಲ್ಲಿ ಯಾರು ಇರಲಿಲ್ಲ. ಕುಡಿಯುವ ನೀರು, ವಾರ್ಡನ್, ಆಯಾ ಯಾರು ಹಾಸ್ಟೆಲ್​ನಲ್ಲಿ ಇರಲಿಲ್ಲ. ಹಾಸ್ಟೆಲ್ ಆಡಳಿತ ವ್ಯವಸ್ಥೆ ಸರಿಯಿಲ್ಲ. ಹಾಸ್ಟಲ್​ನಲ್ಲಿ ವಾರ್ಡನ್ ಇಲ್ಲ. ಆಯರನ್ನೇ ವಾರ್ಡನ್​ ಅಂತ ಹೇಳುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿದ್ದಾರೆ.

ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಶಂಕೆ

ಕಾಲೇಜು ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಹರ್ಷಿತಾಳಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ವಿದ್ಯಾರ್ಥಿನಿ ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹರ್ಷಿತಾ ಸಹಪಾಠಿಗಳು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Fri, 17 May 24

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ