AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ ಟೊಮ್ಯಾಟೊ ಲಾರಿ ಹೈಜಾಕ್​ ಆಗಿತ್ತು, ಇಂದು 12 ಲಕ್ಷ ಮೌಲ್ಯದ ವಸ್ತುಗಳಿದ್ದ ಲಾರಿ ಹೈಜಾಕ್​ ಮಾಡಿದ ಚಾಲಕ! ಎಲ್ಲಿ?

lorry hijack: ಸ್ಮಾರ್ಟ್ ಎಕ್ಸ್‌ಪ್ರೆಸ್‌ ಗೆ ಸೇರಿದ 18 ಲಕ್ಷ ಬೆಲೆಬಾಳುವ ಸಾಮಾಗ್ರಿಗಳು ಲಾರಿಯಲ್ಲಿದ್ದವು. ಕೇರಳದ ಕೊಚ್ಚಿಗೆ ಡೆಲಿವರಿ ಕೊಡಬೆಕಿತ್ತು. ಸೇಲಂ ರಸ್ತೆ ಬಳಿ ಕಂಟೇನರ್ ನಿಲ್ಲಿಸಿ, ಕಳ್ಳತನ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಮೊನ್ನೆ ಟೊಮ್ಯಾಟೊ ಲಾರಿ ಹೈಜಾಕ್​ ಆಗಿತ್ತು, ಇಂದು 12 ಲಕ್ಷ ಮೌಲ್ಯದ ವಸ್ತುಗಳಿದ್ದ ಲಾರಿ ಹೈಜಾಕ್​ ಮಾಡಿದ ಚಾಲಕ! ಎಲ್ಲಿ?
12 ಲಕ್ಷ ಮೌಲ್ಯದ ವಸ್ತುಗಳಿದ್ದ ಲಾರಿ ಹೈಜಾಕ್​ ಮಾಡಿದ ಚಾಲಕ!
ಬಿ ಮೂರ್ತಿ, ನೆಲಮಂಗಲ
| Edited By: ಸಾಧು ಶ್ರೀನಾಥ್​|

Updated on: Aug 10, 2023 | 1:07 PM

Share

ನೆಲಮಂಗಲ, ಆಗಸ್ಟ್​ 10: ಚಾಲಕನೊಬ್ಬ ತಾನು ಚಲಾಯಿಸುತ್ತಿದ್ದ ಲಾರಿಯನ್ನೇ ಹೈಜಾಕ್ ಮಾಡಿಕೊಂಡು ಹೋಗಿದ್ದಾನೆ. ಯಾಕಪ್ಪಾ ಹೀಗೆ? ಎಂದು ನೋಡಿದಾಗ ಲಾರಿಯಲ್ಲಿ 12 ಲಕ್ಷ ರೂಪಾಯಿ ಬೆಲೆಬಾಳುವ ವಸ್ತುಗಳು ಇದ್ದವು. ಅದರೊಂದಿಗೆ ಚಾಲಕ ಲಾರಿ (lorry driver) ಕದ್ದು ಪರಾರಿಯಾಗಿದ್ದಾನೆ (escape). ಬೆಂಗಳೂರು ಉತ್ತರ ತಾಲೂಕಿನ (Nelamangala) ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚಾಲಕ ಪ್ರಭು ಸೇರಿದಂತೆ ಮೊವರಿಗೆ ಪೊಲೀಸರು ಈಗ ತಲಾಷ್ ನಡೆಸುತ್ತಿದ್ದಾರೆ.

ಸ್ಮಾರ್ಟ್ ಎಕ್ಸ್‌ಪ್ರೆಸ್‌ ಗೆ ಸೇರಿದ 18 ಲಕ್ಷ ಬೆಲೆಬಾಳುವ ಸಾಮಾಗ್ರಿಗಳು ಲಾರಿಯಲ್ಲಿದ್ದವು. ಕೇರಳದ ಕೊಚ್ಚಿಗೆ ಡೆಲಿವರಿ ಕೊಡಬೆಕಿತ್ತು. ಸೇಲಂ ರಸ್ತೆ ಬಳಿ ಕಂಟೇನರ್ ನಿಲ್ಲಿಸಿ, ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಲಾರಿ ಚಾಲಕ 18 ಲಕ್ಷ ವಸ್ತುಗಳಲ್ಲಿ 12 ಲಕ್ಷ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾನೆ ಎಂದು ಆರೋಪಿಸಲಾಗಿದೆ.

ನಿಗದಿತ ಸಮಯಕ್ಕೆ ಸಾಮಾಗ್ರಿಗಳು ತಲುಪದ ಕಾರಣ ಲಾರಿ ಮಾಲೀಕ ಚೌಡರೆಡ್ಡಿ ಚಾಲಕನಿಗೆ ಮೊಬೈಲ್​ನಲ್ಲಿ ಕರೆ ಮಾಡಿದ್ದಾನೆ. ಚಾಲಕ ಪ್ರಭು ಎಂಬಾತ ಅಡ್ರೆಸ್ ಮಿಸ್ ಆಗಿದೆಯೆಂದು ಕಥೆ ಕಟ್ಟಿದ್ದ. ಡೌಟ್ ಬಂದು ಜಿಪಿಎಸ್ ಪರಿಶೀಲನೆ ನಡೆಸಿದಾಗ ಕುಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೆಆರ್ ಆಸ್ ಜಲಾಶಯದಿಂದ ವಿಸಿ ಮತ್ತು ಆಣೆಕಟ್ಟು ನಾಲೆಗಳಿಗೆ ಷರತ್ತಿನ ಮೇಲೆ ನೀರು ಹರಿಸುವ ಆದೇಶ ಹೊರಡಿಸಿದ ಕೃಷಿ ಇಲಾಖೆ

ಮಾರ್ಗ ಮಧ್ಯೆಯ ಕೆಲ ಸಿಸಿಟಿವಿ ವಿಡಿಯೋ ಪಡೆದು ತಲೆಮರೆಸಿಕೊಂಡಿರುವ ಅರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದ ಟೊಮ್ಯಾಟೊ ಲಾರಿಯೂ ಹೀಗೆಯೇ ನಾಪತ್ತೆಯಾಗಿತ್ತು!

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮ್ಯಾಟೊ ತುಂಬಿದ್ದ ಲಾರಿ ನಾಪತ್ತೆಯಾಗಿತ್ತು. ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮ್ಯಾಟೊ ತುಂಬಿದ್ದ ಲಾರಿ ನಾಪತ್ತೆಯಾಗಿತ್ತು. ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿದ್ದು ಇದರಲ್ಲಿ ಎ.ಜಿ. ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವರಿಗೆ ಸೇರಿದ 21 ಲಕ್ಷ ಮೌಲ್ಯದ ಟೊಮೆಟೊಗಳಿದ್ದವು. ಲಾರಿ ಚಾಲಕ ಮೊಬೈಕ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನೆಲಮಂಗಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ