AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​: 4 ವರ್ಷದ ಬಾಲಕಿ ಮೇಲೆ ಮಲತಂದೆ ಕ್ರೌರ್ಯ; ಸಿಗರೇಟ್​ನಿಂದ ಸುಟ್ಟು ವಿಕೃತಿ

ಬೆಂಗಳೂರಿನ ಗಿರಿನಗರದಲ್ಲಿ ತಾಯಿ ಮತ್ತು ಪ್ರಿಯಕರ ಸೇರಿ ಮಗುವಿನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಮಾಸುವ ಮುನ್ನವೇ ಆನೇಕಲ್​ನಲ್ಲಿಯೇ ಮತ್ತೊಂದು ಅಂತಹುದೇ ಘಟನೆ ನಡೆದಿದೆ. ನಾಲ್ಕು ವರ್ಷದ ಬಾಲಕಿ ಮೇಲೆ ಮಗುವಿನ ಮಲತಂದೆ ನಿರಂತರವಾಗಿ ಹಲ್ಲೆ ನಡೆಸಿದ್ದು, ವಾಟರ್ ಹೀಟರ್ ಮತ್ತು ಸಿಗರೇಟ್​ನಿಂದ ಸುಟ್ಟು ಅಮಾನವೀಯತೆ ಮೆರೆದಿದ್ದಾನೆ.‌

ಆನೇಕಲ್​: 4 ವರ್ಷದ ಬಾಲಕಿ ಮೇಲೆ ಮಲತಂದೆ ಕ್ರೌರ್ಯ; ಸಿಗರೇಟ್​ನಿಂದ ಸುಟ್ಟು ವಿಕೃತಿ
ಹೆಬ್ಬಗೋಡಿಯಲ್ಲಿ ಮಗುವಿನ ಮೇಲೆ ಮಲತಂದೆ ಹಲ್ಲೆ
ರಾಮು, ಆನೇಕಲ್​
| Edited By: |

Updated on: Mar 17, 2024 | 4:56 PM

Share

ಬೆಂಗಳೂರು ಗ್ರಾಮಾಂತರ, ಮಾ.17: ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ(Hebbagodi). ಸುಮಾರು 4 ವರ್ಷ ವಯಸ್ಸಿನ ದಿಶಾ ಎಂಬ ಮಗುವಿನ ಮೇಲೆ ಮಲತಂದೆ ಮಂಜುನಾಥ್ ಎಂಬಾತ ಕುಡಿದ ಮತ್ತಿನಲ್ಲಿ ವಾಟರ್ ಹೀಟರ್ ಮತ್ತು ಸಿಗರೇಟ್​ನಿಂದ ಸುಟ್ಟು ಕ್ರೌರ್ಯ ಮೆರೆದಿದ್ದಾನೆ. ಮಾತ್ರವಲ್ಲದೆ ಕುಕ್ಕರ್​ನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಮಲತಂದೆ ಹಲ್ಲೆ ನಡೆಸಿದ್ದು, ಹೆತ್ತ ತಾಯಿ ಮಂಜುಳಾ ಈ ಬಗ್ಗೆ ಚಕಾರವೆತ್ತಿಲ್ಲ. ಆದ್ರೆ, ಪುಟ್ಟ ಮಗುವಿನ ಮೇಲಿನ ಕ್ರೌರ್ಯ ಕಂಡು ರೋಸಿ ಹೋದ ಸ್ಥಳೀಯರು, ಮಾ.15 ರ ರಾತ್ರಿ ಮಲತಂದೆ ಮಂಜುನಾಥನಿಗೆ ಧರ್ಮದೇಟು ನೀಡಿ ಹೆಬ್ಬಗೋಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಇನ್ನು ಮೂಲತಃ ಚಿಕ್ಕಬಳ್ಳಾಪುರ ಮೂಲದ ಮಲತಂದೆ ಮಂಜುನಾಥ್, ಪತಿ ಅಕಾಲಿಕ ಸಾವಿನಿಂದ ಇಬ್ಬರು ಮಕ್ಕಳ ಜೊತೆ ಒಂಟಿಯಾಗಿದ್ದ ಮಂಜುಳಾ ಜೊತೆ ವಾಸವಾಗಿದ್ದಾನೆ. ಕುಡಿತದ ಚಟ ಜೊತೆಗೆ ತಮ್ಮ ಖಾಸಗಿ ಕ್ಷಣಗಳಿಗೆ ಮಗು ಅಡ್ಡಿಯೆಂದು ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ. ಎಣ್ಣೆ ಹೊಡೆಯಲು ಸ್ನಾಕ್ಸ್, ಸಿಗರೇಟ್ ತರಲು ರಾತ್ರಿ ವೇಳೆ ಮಗುವನ್ನು ಹೊರಗಡೆ ಕಳುಹಿಸುತ್ತಿದ್ದ. ಮಗು ಒಪ್ಪದಿದ್ದರೆ ಸಿಗರೇಟ್, ಹೀಟರ್ ಮತ್ತು ಕುಕ್ಕರ್ ಹೀಗೆ ಕೈಗೆ ಸಿಕ್ಕಿದ ವಸ್ತುಗಳಿಂದ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ. ಮೊನ್ನೆ ಸಹ ಹಲ್ಲೆ ‌ನಡೆಸುತ್ತಿದ್ದಾಗ ಸ್ಥಳೀಯರು ಮಲತಂದೆಗೆ ಧರ್ಮದೇಟು ನೀಡಿ ಮಗುವನ್ನು ರಕ್ಷಣೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಒಟ್ಟಿನಲ್ಲಿ ಮಕ್ಕಳಿಲ್ಲ ಎಂದು ಅದೆಷ್ಟೋ ಮಂದಿ ತಾಯಂದಿರುವ ಪರಿತಪಿಸುತ್ತಿದ್ದಾರೆ. ಆದ್ರೆ, ಇಲ್ಲಿ ಮಲತಂದೆ ಪುಟ್ಟ ಬಾಲಕಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ತಾಯಿ ಹಲ್ಲೆ ಮಾಡಲು ಸಹಕರಿಸಿದ್ದಾಳೆ. ಸದ್ಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಧ್ಯ ಮಗುವನ್ನು ಡಿಸಿಪಿಓ ಸುಪರ್ದಿಗೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ