AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಪಟಾಕಿ ಮಳಿಗೆ ಮಾರಾಟಗಾರರಿಗೆ ಗುಡ್​​ ನ್ಯೂಸ್: ನ. 17ರವರೆಗೆ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಅನುಮತಿ

firecrackers: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ​ತಾಲೂಕಿನಾದ್ಯಂತ ಒಟ್ಟು 30 ಮಳಿಗೆಗಳಿಗೆ ನ. 17ರ ವರೆಗ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಶನಿವಾರ ಅನುಮತಿ ನೀಡಿದೆ. ಆ ಮೂಲಕ ಪಟಾಕಿ ಮಳಿಗೆ ಮಾರಾಟಗಾರರಿಗೆ ಗುಡ್​​ ನ್ಯೂಸ್ ನೀಡಲಾಗಿದೆ. ಪಟಾಕಿ ಮಳಿಗೆಗಳ ಮಾರಾಟಗಾರರು ಹೈಕೋರ್ಟ್ ಮೊರೆ ಹೋಗಿದ್ದ ಬೆನ್ನಲ್ಲೆ ಇದೀಗ ಅನುಮತಿ ನೀಡಿದಲಾಗಿದೆ.

ಆನೇಕಲ್: ಪಟಾಕಿ ಮಳಿಗೆ ಮಾರಾಟಗಾರರಿಗೆ ಗುಡ್​​ ನ್ಯೂಸ್: ನ. 17ರವರೆಗೆ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಅನುಮತಿ
ಪಟಾಕಿ, ಹೈಕೋರ್ಟ್
ರಾಮು, ಆನೇಕಲ್​
| Edited By: |

Updated on:Nov 11, 2023 | 5:08 PM

Share

ಆನೇಕಲ್, ನವೆಂಬರ್​​​​ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ​ತಾಲೂಕಿನಾದ್ಯಂತ ಒಟ್ಟು 30 ಮಳಿಗೆಗಳಿಗೆ ನ. 17ರ ವರೆಗ ಪಟಾಕಿ (firecrackers) ಮಾರಾಟಕ್ಕೆ ಹೈಕೋರ್ಟ್ ಶನಿವಾರ ಅನುಮತಿ ನೀಡಿದೆ. ಆ ಮೂಲಕ ಪಟಾಕಿ ಮಳಿಗೆ ಮಾರಾಟಗಾರರಿಗೆ ಗುಡ್​​ ನ್ಯೂಸ್ ನೀಡಲಾಗಿದೆ. ಪಟಾಕಿ ಮಳಿಗೆಗಳ ಮಾರಾಟಗಾರರು ಹೈಕೋರ್ಟ್ ಮೊರೆ ಹೋಗಿದ್ದ ಬೆನ್ನಲ್ಲೆ ಇದೀಗ ಅನುಮತಿ ನೀಡಿದಲಾಗಿದೆ. ಹಾಗಾಗಿ ಹಲವಾರು ಗೊಂದಲಗಳ ಬಳಿಕ ಪಟಾಕಿ ಮಳಿಗೆಗಳು ತೆರೆದಿದ್ದು, ಗ್ರಾಹಕರು ಖರೀದಿಗೆ ಮುಗಿಬಿದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಒಂದೆಡೆ ಪಟಾಕಿ ಖರೀದಿ, ಇನ್ನೊಂದೆಡೆ ಊರುಗಳತ್ತ ಹೊರಟ ಜನರು: ಹೆದ್ದಾರಿಯಲ್ಲಿ ಟ್ರಾಫಿಕ್​ಜಾಮ್

ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಜನರು ತಮ್ಮ ಊರುಗಳಿಗೆ ಹೊರಟಿದ್ದಾರೆ. ಒಂದೆಡೆ ಪಟಾಕಿ ಖರೀದಿ ಮಾಡುತ್ತಿದ್ದಾರೆ ಹಾಗಾಗಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ.

ಇದನ್ನೂ ಓದಿ: ದೀಪಾವಳಿಗೆ ವಿಶೇಷ ಚೇತನ ಮಕ್ಕಳ ಕೈಯಿಂದ ತಯಾರಾಯ್ತು ಕಲರ್​ಫುಲ್​ ಹಣತೆ; ಮಂಗಳೂರಿನಲ್ಲಿ ಫುಲ್ ಡಿಮ್ಯಾಂಡ್

ತಮಿಳುನಾಡಿನಲ್ಲಿ ದೀಪಾವಳಿ ಹಬ್ಬ ವಿಜೃಂಭಣೆಯಿಂದ ಆಚರಣೆ ಹಿನ್ನೆಲೆ ಹೆಬ್ಬಗೋಡಿಯಿಂದ 10 ಕಿಲೋ ಮೀಟರ್​ವರೆಗೆ ರಾಷ್ಟ್ರೀಯ ಹೆದ್ದಾರಿ ಟ್ರಾಫಿಕ್​ ಜಾಮ್​ ಆಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಕಳೆದ 2 ಗಂಟೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಅತ್ತಿಬೆಲೆ ಸುತ್ತಮುತ್ತ ಪಟಾಕಿ ಖರೀದಿಗೆ ಗ್ರಾಹಕರು ಆಗಮಿಸುತ್ತಿದ್ದು, ಪಟಾಕಿ ಖರೀದಿ ಭರಾಟೆಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್​ಜಾಮ್ ಆಗಿದೆ.

ಪಟಾಕಿ ಪ್ರಕರಣ ಎದುರಿಸಲು ಸಿದ್ಧವಾದ ಮಿಂಟೋ ಆಸ್ಪತ್ರೆ

ದೀಪಾವಳಿ ಹಬ್ಬಕ್ಕೂ ಮುನ್ನವೇ ಮಕ್ಕಳ ಕಣ್ಣಿನ ಪ್ರಕರಣ ದಾಖಲಾಗುತ್ತಿವೆ. ಪಟಾಕಿ ಕೇಸ ಬರ್ತಿದಂತೆ ಮಿಂಟೋ ಆಸ್ಪತ್ರೆ ಅಲರ್ಟ್ ಆಗಿದ್ದು, ಮಕ್ಕಳ ಪಟಾಕಿ ಪ್ರಕರಣ ಎದುರಿಸಲು ಪ್ರತ್ಯೇಕ ಬೆಡ್ ಸಿದ್ಧತೆ ಮಾಡಲಾಗಿದೆ. ಮಕ್ಕಳಿಗೆ ಒಂದು ಪ್ರತ್ಯೇಕ ವಾರ್ಡ್, 15 ಬೆಡ್ ಮಿಸಲಿಡಲಾಗಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್ ಗಳನ್ನ ಮೀಸಲಿರಿಸಿದೆ.

ಇದನ್ನೂ ಓದಿ: ದೀಪಾವಳಿ: ಪಟಾಕಿ ಮಾರಾಟಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಸುತ್ತೋಲೆ

ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಕಂಪ್ಲೀಟ್ ಸಿದ್ಧತೆ ಮಾಡಿಕೊಂಡಿದೆ. ತುರ್ತು ಎಮೆರ್ಜೆನ್ಸಿಗೆ ಸರ್ಜರಿಗೆ ಬೇಕಾದ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಔಷಧಿಗಳನ್ನ ಐ ಡ್ರಾಪ್ಸ್ ಎಲ್ಲವೂ ವಾರ್ಡ್ ಗಳಲ್ಲಿ ಶೇಖರಿಸಿದೆ. ಮುಂದಿನ ಒಂದು ವಾರ 24*7 ವೈದ್ಯರು ಕೆಲಸ ನಿರ್ವಹಿಸಲಿದ್ದು. ಮಿಂಟೋ ಪಟಾಕಿ ಪ್ರಕರಣ ಎದುರಿಸಲು ಸಿದ್ಧವಾಗಿದೆ. ತುರ್ತು ಸಹಾಯವಾಣಿ – 9481740137, 08026707176 ಶುರು ಮಾಡಿದೆ.

ಕಣ್ಣು ಮಾತ್ರವಲ್ಲ ಪಟಾಕಿಯಿಂದ ಸುಟ್ಟು ಗಾಯವಾದ್ರೆ, ವಿಕ್ಟೋರಿಯಾದಲ್ಲಿ ಬರ್ನಿಂಗ್ ವಾರ್ಡ್ ಗೆ ಶಿಫ್ಟ್‌ ಮಾಡಿಸುವಂತೆ ಯೋಜನೆ ಮಾಡಿಕೊಂಡಿದೆ. ವಿಕ್ಟೋರಿಯಾದಲ್ಲಿಯೂ ಒಂದು ವಾರ್ಡ್ ಪ್ರತ್ಯೇಕವಾಗಿ ಮೀಸಲಿಡುವ ಬಗ್ಗೆಯೂ ಸೂಚನೆ ನೀಡಿದೆ.

ಹಬ್ಬಕ್ಕೆ ವಾರ ಮೊದಲೇ ವೈದ್ಯರು ಪೋಷಕರು ಮಕ್ಕಳಿಗೆ ಎಚ್ಚರಿಕೆಯಿಂದ ಪಟಾಕಿ ಸಿಡಿಸಿ ಅಂತಾ ವೈದ್ಯರ ಮನವಿ ಮಾಡಿದ್ದಾರೆ. ಕಣ್ಣಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ವಹಿಸವಂತೆ ಜನರಿಗೆ ವೈದ್ಯರ ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:47 pm, Sat, 11 November 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!