Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಅಡಿ ಜಾಗಕ್ಕೆ ಕೊಲೆ ಮಾಡಿದ್ದ ಆರೋಪಿಗಳು ಅರೆಸ್ಟ್; ಹತ್ಯೆಯ ಹಿಂದಿದೆ ಒಂದು ವರ್ಷ ಹಳೆಯ ಸೇಡು

ಹಳೆ ವೈಷಮ್ಯದ ನೆಪದಲ್ಲಿ ಜಾಗದ ವಿಚಾರವಾಗಿ ಕಿರಿಕ್ ಮಾಡಿ ಪಕ್ಕದ ಮನೆಯ ರಮೇಶ್‌‌‌‌ ಎಂಬ ವ್ಯಕ್ತಿಯನ್ನು ಜಗದೀಶ್, ಮೋಸಿಸ್, ಕೃಷ್ಣಪ್ಪ ಅಲಿಯಾಸ್ ಜೋಸೆಫ್ ಎಂಬುವವರು ಕೊಚ್ಚಿ ಕೊಲೆ ಮಾಡಿದ್ದರು. ಸದ್ಯ ಈಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕೊಲೆಗೆ ಕಾರಣವಾಗಿರುವ ಒಂದು ವರ್ಷ ಹಳೆಯ ಸೇಡು ಹಾಗೂ ಕೊಲೆಗೆ ಮಾಡಲಾಗಿದ್ದ ಮಾಸ್ಟರ್ ಪ್ಲಾನ್ ಬಗ್ಗೆ ಆರೋಪಿಗಳು ಎಲೆ ಎಲೆಯಾಗಿ ಬಿಚ್ಚಿಟ್ಟಿದ್ದಾರೆ.

ಒಂದು ಅಡಿ ಜಾಗಕ್ಕೆ ಕೊಲೆ ಮಾಡಿದ್ದ ಆರೋಪಿಗಳು ಅರೆಸ್ಟ್; ಹತ್ಯೆಯ ಹಿಂದಿದೆ ಒಂದು ವರ್ಷ ಹಳೆಯ ಸೇಡು
ಬಂಧಿತ ಕೊಲೆ ಆರೋಪಿಗಳು
Follow us
ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on: Nov 05, 2023 | 12:03 PM

ಆನೇಕಲ್, ನ.05: ಕೇವಲ ಒಂದು ಅಡಿ ಜಾಗಕ್ಕೆ ವ್ಯಕ್ತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ (Murder) ಮಾಡಿದ್ದ ಆರೋಪಿಗಳನ್ನು ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸರು (Hebbagodi Police) ಬಂಧಿಸಿದ್ದಾರೆ. ಆರೋಪಿಗಳ ಬಂಧನದ ಬಳಿಕ ಕೊಲೆ ಅಸಲಿ ಸತ್ಯ ಬಯಲಾಗಿದೆ. ಕಳೆದ ತಿಂಗಳ (ಅ.29) 29ನೇ ತಾರೀಖಿನಂದು ಹಳೆ ವೈಷಮ್ಯದ ನೆಪದಲ್ಲಿ ಜಾಗದ ವಿಚಾರವಾಗಿ ಕಿರಿಕ್ ಮಾಡಿ ಪಕ್ಕದ ಮನೆಯ ರಮೇಶ್‌‌‌‌ ಎಂಬ ವ್ಯಕ್ತಿಯನ್ನು ಜಗದೀಶ್, ಮೋಸಿಸ್, ಕೃಷ್ಣಪ್ಪ ಅಲಿಯಾಸ್ ಜೋಸೆಫ್ ಎಂಬುವವರು ಕೊಚ್ಚಿ ಕೊಲೆ ಮಾಡಿದ್ದರು. ಸದ್ಯ ಈಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಜಗದೀಶ್, ಮೋಸಿಸ್ ಇಬ್ಬರೂ ಹೆಬ್ಬಗೋಡಿ ಸ್ಟೇಷನ್​ನಲ್ಲಿ ರೌಡಿ ಶೀಟರ್​ಗಳಾಗಿದ್ದು ಕೊಲೆ, ಕಳ್ಳತನ, ದರೋಡೆ, ಹಲ್ಲೆ ಇತ್ಯಾದಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.

ಹಳೆಯ ಜಗಳದ ನೆಪದಲ್ಲಿ ಕಿರಿಕ್ ಮಾಡಿ ಕೊಲೆ

ಕಳೆದ ಒಂದು ವರ್ಷದ ಹಿಂದೆ ಪಟಾಕಿ ಹೊಡೆಯುವ ವಿಚಾರಕ್ಕೆ ಗಲಾಟೆ ನಡೆದಿತ್ತು. ಆಗ ಜೋಸೆಫ್, ಶೋಭಿತ, ಜಗದೀಶ್ ಹಾಗೂ ಮೋಸಿಸ್ ಎಂಬುವವರು ಮೃತ ರಮೇಶ್ ಪತ್ನಿ ಕಾವ್ಯಳ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ರಮೇಶ್ ಪತ್ನಿ ಕಾವ್ಯ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಜಗದೀಶ್ ಹಾಗೂ ಮೋಸಿಸ್ ಇಬ್ಬರನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಜೈಲಿನಿಂದ ಬೇಲ್ ಮೇಲೆ ಬಂದ ಜಗದೀಶ್ ಹಾಗೂ ಮೋಸಿಸ್ ಪ್ರತಿ ದಿನ ರಮೇಶ್ ಕುಟುಂಬಕ್ಕೆ ಟಾರ್ಚರ್ ಕೊಡುತ್ತಿದ್ದರು. ಪತ್ನಿ ಮತ್ತು ಮಕ್ಕಳೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಾಗಿದ್ದ ರಮೇಶ್ ತನ್ನ ಹಳೆ ಮನೆ ಕೆಡವಿ ಹೊಸ ಮನೆ ಕಟ್ಟಲು ಮುಂದಾಗಿದ್ದರು. ಆದರೆ ಈ ಆರೋಪಿಗಳು ಹಳೆ ವೈಷಮ್ಯದ ನೆಪದಲ್ಲಿ ಜಾಗದ ವಿಚಾರವಾಗಿ ರಮೇಶ್ ಕುಟುಂಬದ ಜೊತೆ ಕಿರಿಕ್ ಮಾಡಿಕೊಂಡಿದ್ದರು.

ಇದನ್ನೂ ಓದಿ: ಹೆಲ್ಮೆಟ್​ ಇಲ್ಲ, ಸಿಗ್ನಲ್​ ಜಂಪ್; ಈ ವರ್ಷ ಬೆಂಗಳೂರಿನಲ್ಲಿ ಲಕ್ಷ ಲಕ್ಷ ಟ್ರಾಫಿಕ್ ಬ್ರೇಕ್ ಕೇಸ್​ ದಾಖಲು

ಹೊಂಚು ಹಾಕಿ ಕೊಲೆ

ಇನ್ನು ಜೋಸೆಫ್, ಜಗದೀಶ್, ಮೋಸಿಸ್ ರಮೇಶ್ ಕೊಲೆ ಮಾಡಲು ಪ್ಲಾನ್ ರೂಪಿಸಿದ್ದರು. ಹೊಂಚು ಹಾಕಿ ಬಾತ್ ರೂಮ್ ನಲ್ಲಿ ಅವಿತುಕೊಂಡಿದ್ದರು. ರಮೇಶ್ ಹೊರ ಬರುತ್ತಿದ್ದಂತೆ ಕೊಲೆ ಮಾಡಿದ್ದಾರೆ. ತಾನು ಕಟ್ಟುತ್ತಿದ್ದ ನಿರ್ಮಾಣ ಹಂತದ ಮನೆಯ ಜಾಗದಲ್ಲೇ ರಮೇಶ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪತ್ನಿ, ಮಕ್ಕಳ ಎದುರಲ್ಲೆ ಹಂತಕರು ಪ್ರಾಣ ತೆಗೆದಿದ್ದಾರೆ. ಕೊಲೆಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು ಕೃತ್ಯ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ