Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತದಿಂದ ಮೃತಪಟ್ಟ ಸಂಗೀತಾ
Follow us
|

Updated on: Feb 09, 2023 | 7:37 AM

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತ ವಿದ್ಯಾರ್ಥಿನಿ, ಸಂಗೀತಾ ಪ್ರಥಮ ಪಿಯು ತಂಡದಲ್ಲಿ ಆಕೆ ಆಡುತ್ತಿದ್ದಳು. ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ಸಂಗೀತಾ ವಾಸವಿದ್ದಳು. ಕಬಡ್ಡಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಂಗೀತಾ ಮೃತಪಟ್ಟಿದ್ದರು.

ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆ (St. Philomena School Attibele) ಯಲ್ಲಿ ಘಟನೆ ನಡೆದಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಂಗೀತಾ ಸಾವನ್ನಪ್ಪಿದ್ದಾಳೆ. ಸಂಗೀತಾ ಧಾರವಾಡ (Dharwad) ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಕ್ರೀಡಾ ಉತ್ಸವದಲ್ಲಿ ಮಹಿಳೆಯರ ತಂಡದ ಕಬಡ್ಡಿ ಕೂಡ ಇತ್ತು, ಸಂಗೀತಾ ತನ್ನ ತಂಡದ ಪರವಾಗಿ ರೈಡಿಂಗ್ ಹೋಗಿದ್ದಳು. ಆಗ ಎದುರಾಳಿ ತಂಡದವರು ಆಕೆಯನ್ನು ಹಿಡಿಯಲು ಮುಂದಾಗಿದ್ದರು. ಆಗ ಒಮ್ಮೆಗೆ ಹೃದಯಾಘಾತಗೊಂಡು ಸಂಗೀತಾ ಕುಸಿದುಬಿದ್ದಿದ್ದಳು. ಕೂಡಲೇ ಆಕೆಯನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರಿಸಲಾಗಿದೆ. ವಿದ್ಯಾರ್ಥಿನಿ ಸಂಗೀತಾ ಸಾವು ಹಿನ್ನೆಲೆ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುವ ಯುವಕರ ಸಂಖ್ಯೆ ಹೆಚ್ಚಾಗಿದೆ. 20-45ರವೊಳಗಿನ ಪುರುಷರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಹೆಚ್ಚಿನ ಯುವಕರು ಹೃದಯ ತಪಾಸಣೆ ಒಳಗಾದರಾದರೂ, ಸಾವಿನ ಪ್ರಮಾಣ ತಗ್ಗಿಲ್ಲ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿತ್ತು. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿಯಾಗಿದ್ದಾನೆ. ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಜನವರಿ 11 ರಂದು ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ ಮೃತಪಟ್ಟಿದ್ದರು. ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜದಾತ್ರಯ್ಯ ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಕುಸಿದು ಮೃತಪಟ್ಟಿದ್ದ. ದಕ್ಷಿಣ ಕನ್ನಡದ ಸೂರತ್ಕಲ್​ನ ಕೃಷ್ಣಾಪುರ ನಿವಾಸಿ ಅಬ್ದುಲ್ ರೆಹಮಾನ್ ಎಂಬುವವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಹಸೀನ್ (14) ಶಾಲೆಗೆ ಹೊರಡಲೆಂದು ರೆಡಿ ಆಗುತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!