AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತದಿಂದ ಮೃತಪಟ್ಟ ಸಂಗೀತಾ
ನಯನಾ ರಾಜೀವ್
|

Updated on: Feb 09, 2023 | 7:37 AM

Share

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತ ವಿದ್ಯಾರ್ಥಿನಿ, ಸಂಗೀತಾ ಪ್ರಥಮ ಪಿಯು ತಂಡದಲ್ಲಿ ಆಕೆ ಆಡುತ್ತಿದ್ದಳು. ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ಸಂಗೀತಾ ವಾಸವಿದ್ದಳು. ಕಬಡ್ಡಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಂಗೀತಾ ಮೃತಪಟ್ಟಿದ್ದರು.

ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆ (St. Philomena School Attibele) ಯಲ್ಲಿ ಘಟನೆ ನಡೆದಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಂಗೀತಾ ಸಾವನ್ನಪ್ಪಿದ್ದಾಳೆ. ಸಂಗೀತಾ ಧಾರವಾಡ (Dharwad) ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಕ್ರೀಡಾ ಉತ್ಸವದಲ್ಲಿ ಮಹಿಳೆಯರ ತಂಡದ ಕಬಡ್ಡಿ ಕೂಡ ಇತ್ತು, ಸಂಗೀತಾ ತನ್ನ ತಂಡದ ಪರವಾಗಿ ರೈಡಿಂಗ್ ಹೋಗಿದ್ದಳು. ಆಗ ಎದುರಾಳಿ ತಂಡದವರು ಆಕೆಯನ್ನು ಹಿಡಿಯಲು ಮುಂದಾಗಿದ್ದರು. ಆಗ ಒಮ್ಮೆಗೆ ಹೃದಯಾಘಾತಗೊಂಡು ಸಂಗೀತಾ ಕುಸಿದುಬಿದ್ದಿದ್ದಳು. ಕೂಡಲೇ ಆಕೆಯನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರಿಸಲಾಗಿದೆ. ವಿದ್ಯಾರ್ಥಿನಿ ಸಂಗೀತಾ ಸಾವು ಹಿನ್ನೆಲೆ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುವ ಯುವಕರ ಸಂಖ್ಯೆ ಹೆಚ್ಚಾಗಿದೆ. 20-45ರವೊಳಗಿನ ಪುರುಷರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಹೆಚ್ಚಿನ ಯುವಕರು ಹೃದಯ ತಪಾಸಣೆ ಒಳಗಾದರಾದರೂ, ಸಾವಿನ ಪ್ರಮಾಣ ತಗ್ಗಿಲ್ಲ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿತ್ತು. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿಯಾಗಿದ್ದಾನೆ. ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಜನವರಿ 11 ರಂದು ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ ಮೃತಪಟ್ಟಿದ್ದರು. ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜದಾತ್ರಯ್ಯ ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಕುಸಿದು ಮೃತಪಟ್ಟಿದ್ದ. ದಕ್ಷಿಣ ಕನ್ನಡದ ಸೂರತ್ಕಲ್​ನ ಕೃಷ್ಣಾಪುರ ನಿವಾಸಿ ಅಬ್ದುಲ್ ರೆಹಮಾನ್ ಎಂಬುವವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಹಸೀನ್ (14) ಶಾಲೆಗೆ ಹೊರಡಲೆಂದು ರೆಡಿ ಆಗುತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್