AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಿಯಕರ ಆತನ ಸ್ನೇಹಿತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ ಪೊಲೀಸ್

ಕಳೆದ ವಾರ ತನ್ನ ಮೆನೆಗೆ ಬರಲು ಹೇಳಿದ್ದ. ರಾತ್ರಿ ಆಗಿದೆ ಹೇಗೆ ಬರಲಿ ಅಂತ ಯುವತಿ ಪ್ರಶ್ನಿಸಿ ಆತನ ಮನಗೆ ಹೋಗಲು ನಿರಾಕರಿಸಿದ್ದಳು. ಆದ್ರೆ ಇದನ್ನು ಒಪ್ಪದ ಆರೋಪಿ ಪ್ರಿಯಕರ ನಿನಗೆ ನಿಜವಾದ ಪ್ರೀತಿ ಇದ್ದರೆ ಬಾ, ನನ್ನ ಸ್ನೇಹಿತ ಕೂಡ ಅದೇ ರಸ್ತೆಯಿಂದನೇ ಬರ್ತಾನೆ ಅವನ ಜೊತೆ ಬಾ ಎಂದಿದ್ದ.

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಿಯಕರ ಆತನ ಸ್ನೇಹಿತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ ಪೊಲೀಸ್
ಪರಪ್ಪನ ಅಗ್ರಹಾರ
TV9 Web
| Updated By: ಆಯೇಷಾ ಬಾನು|

Updated on:May 18, 2022 | 7:14 PM

Share

ಆನೇಕಲ್; ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಸೂರ್ಯ ಸಿಟಿಯಲ್ಲಿ ಪ್ರಿಯಕರ ಮತ್ತು ಆತನ ಸ್ನೇಹಿತನ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದಾರೆ. ಈ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಉತ್ತರ ಭಾರತ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಒರಿಸ್ಸಾ ಮೂಲದ ಯುವತಿ ಕಳೆದ ಕೆಲ ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಯುವತಿ ಉತ್ತರ ಭಾರತ ಮೂಲದ ಬಂಧಿತ ಆರೋಪಿಗಳಲ್ಲಿ ಒಬ್ಬನನ್ನು ಪ್ರೀತಿಸುತ್ತಿದ್ದಳು. ಆರೋಪಿ ಪ್ರಿಯಕರ ಕಿತ್ತಗಾನ ಹಳ್ಳಿ ಬಳಿ ವಾಸವಿದ್ದ. ಯುವತಿಯ ಮನೆಯಿಂದ ಅರ್ಧ ಕಿ.ಮಿ ದೂರದಲ್ಲೇ ಇತನ ಮನೆ ಇತ್ತು. ಕೆಲ ದಿನಗಳ ಹಿಂದೆ ಯುವತಿಯನ್ನು ಪರಿಚಯ ಮಾಡಿಕೊಂಡು ಪ್ರೀತಿ ಹೆಸರಲ್ಲಿ ಸಲುಗೆ ಬೆಳೆಸಿದ್ದ. ಇಬ್ಬರೂ ಪ್ರೀತಿಯಲ್ಲಿದ್ದರು. ಆದ್ರೆ ಕಳೆದ ವಾರ ತನ್ನ ಮೆನೆಗೆ ಬರಲು ಹೇಳಿದ್ದ. ರಾತ್ರಿ ಆಗಿದೆ ಹೇಗೆ ಬರಲಿ ಅಂತ ಯುವತಿ ಪ್ರಶ್ನಿಸಿ ಆತನ ಮನಗೆ ಹೋಗಲು ನಿರಾಕರಿಸಿದ್ದಳು. ಆದ್ರೆ ಇದನ್ನು ಒಪ್ಪದ ಆರೋಪಿ ಪ್ರಿಯಕರ ನಿನಗೆ ನಿಜವಾದ ಪ್ರೀತಿ ಇದ್ದರೆ ಬಾ, ನನ್ನ ಸ್ನೇಹಿತ ಕೂಡ ಅದೇ ರಸ್ತೆಯಿಂದನೇ ಬರ್ತಾನೆ ಅವನ ಜೊತೆ ಬಾ ಎಂದಿದ್ದ. ಇದನ್ನೂ ಓದಿ: ಕೊಪ್ಪಳದ ಗ್ರಾಮವೊಂದರ ಹೊರವಲಯದಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಹೋದ ಧಾಬಾ, ಪ್ರಾಣಹಾನಿ ಇಲ್ಲ

ಪ್ರಿಯಕರನ ಮಾತನ್ನು ತಪ್ಪಲಾರದೆ ಯುವತಿ ಆರೋಪಿಯ ಸ್ನೇಹಿತನ ಜೊತೆ ಮನೆಗೆ ಬಂದಿದ್ದಳು. ಈ ವೇಳೆ ಯುವತಿಗೆ ಮತ್ತು ಬರುವ ಔಷಧಿ ನೀಡಿದ್ದು ಯುವತಿ ತಲೆ ಸುತ್ತು ಬಿದ್ದಾಗ ಪ್ರಿಯಕರ ಮತ್ತು ಆತನ ಸ್ನೇಹಿತ ಇಬ್ಬರೂ ಸೇರಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಯುವತಿ ಎಚ್ಚರವಾದ ನಂತರ ಮನೆಗೆ ಬಿಟ್ಟು ಬಂದಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲೇ ಸ್ಟೇಷನ್ ತೆರಳಿದ್ದ ಯುವತಿ ಇಬ್ಬರ ಮೇಲೂ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಿದ್ದಾರೆ. ಸಂತ್ರಸ್ತ ಯುವತಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:38 pm, Wed, 18 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ