AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿದ ಡ್ರೋನ್ ಹಾರಾಟ: ತನಿಖೆ ಶುರು

ವಿಮಾನಗಳ ಪಕ್ಕದಲ್ಲೆ ಡ್ರೋನ್ ಹಾರಿದ ಪರಿಣಾಮ ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿದೆ. ಟೇಕ್ ಆಫ್​ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದ್ದು, ಡ್ರೊನ್ ಹಾರಾಟ ಕಂಡು ಎಟಿಸಿ ಕಂಟ್ರೋಲ್​ಗೆ‌ ಪೈಲೆಟ್ ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿದ ಡ್ರೋನ್ ಹಾರಾಟ: ತನಿಖೆ ಶುರು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Sep 27, 2023 | 11:25 AM

Share

ಬೆಂಗಳೂರು, ಸೆ.27: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ದ ರನ್ ವೇ ಬಳಿ ಅನಾಮಿಕ ಡ್ರೋನ್ ಹಾರಾಟ ನಡೆಸಿದೆ. ಹೌದು, ವಿಮಾನಗಳ ಪಕ್ಕದಲ್ಲೆ ಡ್ರೋನ್(Drone) ಹಾರಿದ ಪರಿಣಾಮ ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿದೆ. ಟೇಕ್ ಆಫ್​ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದ್ದು, ಡ್ರೊನ್ ಹಾರಾಟ ಕಂಡು ಎಟಿಸಿ ಕಂಟ್ರೋಲ್​ಗೆ‌ ಪೈಲೆಟ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ದೆಹಲಿ ಮತ್ತು ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಗಳ ಹಾರಾಟ ಸ್ಥಳದಲ್ಲೆ ಆರೆಂಜ್ ಮತ್ತು ಹಳದಿ ಬಣ್ಣದ ಡ್ರೋನ್ ಹಾರಿದೆ.

ಅನಾಮಿಕ ಡ್ರೋನ್​ಹಾರಾಟದ ಬಗ್ಗೆ ತನಿಖೆ ಶುರು

ಇನ್ನು ನಿಷೇದದ ನಡುವೆಯು ಡ್ರೋನ್ ಹಾರಿದ್ದು ಹೇಗೆ? ಎಂದು ಏರ್ಪೋಟ್ ಭದ್ರತಾ ಪಡೆ ಹಾಗೂ ಎಟಿಸಿ ಕಂಟ್ರೋಲ್ ಟೀಂ ನಿಂದ ತನಿಖೆ ಶುರುವಾಗಿದೆ. ಅನಾಮಿಕ ಡ್ರೋನ್ ಹಾರಾಟದ ಬಗ್ಗೆ ಪೊಲೀಸರಿಗೆ ಏರ್ಪೋಟ್ ಸಿಬ್ಬಂದಿ ದೂರು‌ ನೀಡಿದ್ದು, ಕೂಡಲೇ ಡ್ರೋನ್​ ಹಾರಾಟದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಷ್ಟೊಂದು ಸೆಕ್ಯೂರಿಟಿ ನಡುವೆಯೂ ಡ್ರೋನ್​ ಹಾರಲು ಹೇಗೆ ಸಾಧ್ಯ ಎಂಬ ಅನುಮಾನ ಇದೀಗ ಶುರುವಾಗಿದೆ.

ಇದನ್ನೂ ಓದಿ:ಸಲೂನ್​​​​ವೊಂದರಲ್ಲಿ ಕೆಲಸ ಮಾಡಲು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ವಿಮಾನ ನಿಲ್ದಾಣದಿಂದ ನಾಪತ್ತೆ

ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ದೇಶಿ ಹಣ

ದೇವನಹಳ್ಳಿ:  ಏರ್ಪೋಟ್ ಭದ್ರತಾ ಪಡೆ (CISF ) ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಏರ್ಪೋಟ್ ಗೆ ಬಂದಿದ್ದ ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ದೇಶಿ ಹಣ ಪತ್ತೆಯಾಗಿದೆ. ಅದನ್ನು ಕಂಡು ಅಧಿಕಾರಿಗಳು ಒಂದು ಕ್ಷಣ ಶಾಕ್​ ಆಗಿದ್ದಾರೆ. ಈ ಮಹಿಳೆ ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದಳು. ಈ ವೇಳೆ ಲಗೇಜ್ ಸ್ಕ್ಯಾನಿಂಗ್ ಮಾಡಿದ್ದು, ಮಹಿಳೆಯ ಬ್ಯಾಗ್ ನಲ್ಲಿ 15 ಲಕ್ಷ ನಗದು ಹಣ ಕಂಡು ಬಂದಿದೆ. ಹಣದ ಸಮೇತ ಮಹಿಳೆಯನ್ನು ಏರ್ಪೋಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಂತರ ಹಣ ಹಾಗೂ ಮಹಿಳೆಯನ್ನ ಆಧಾಯ ತೆರಿಗೆ ಇಲಾಖೆ‌ ಅಧಿಕಾರಿಗಳ ವಶಕ್ಕೆ ನೀಡಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಿಳೆಯ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Wed, 27 September 23

ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ