ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿದ ಡ್ರೋನ್ ಹಾರಾಟ: ತನಿಖೆ ಶುರು

ವಿಮಾನಗಳ ಪಕ್ಕದಲ್ಲೆ ಡ್ರೋನ್ ಹಾರಿದ ಪರಿಣಾಮ ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿದೆ. ಟೇಕ್ ಆಫ್​ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದ್ದು, ಡ್ರೊನ್ ಹಾರಾಟ ಕಂಡು ಎಟಿಸಿ ಕಂಟ್ರೋಲ್​ಗೆ‌ ಪೈಲೆಟ್ ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿದ ಡ್ರೋನ್ ಹಾರಾಟ: ತನಿಖೆ ಶುರು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2023 | 11:25 AM

ಬೆಂಗಳೂರು, ಸೆ.27: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ದ ರನ್ ವೇ ಬಳಿ ಅನಾಮಿಕ ಡ್ರೋನ್ ಹಾರಾಟ ನಡೆಸಿದೆ. ಹೌದು, ವಿಮಾನಗಳ ಪಕ್ಕದಲ್ಲೆ ಡ್ರೋನ್(Drone) ಹಾರಿದ ಪರಿಣಾಮ ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿದೆ. ಟೇಕ್ ಆಫ್​ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದ್ದು, ಡ್ರೊನ್ ಹಾರಾಟ ಕಂಡು ಎಟಿಸಿ ಕಂಟ್ರೋಲ್​ಗೆ‌ ಪೈಲೆಟ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ದೆಹಲಿ ಮತ್ತು ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಗಳ ಹಾರಾಟ ಸ್ಥಳದಲ್ಲೆ ಆರೆಂಜ್ ಮತ್ತು ಹಳದಿ ಬಣ್ಣದ ಡ್ರೋನ್ ಹಾರಿದೆ.

ಅನಾಮಿಕ ಡ್ರೋನ್​ಹಾರಾಟದ ಬಗ್ಗೆ ತನಿಖೆ ಶುರು

ಇನ್ನು ನಿಷೇದದ ನಡುವೆಯು ಡ್ರೋನ್ ಹಾರಿದ್ದು ಹೇಗೆ? ಎಂದು ಏರ್ಪೋಟ್ ಭದ್ರತಾ ಪಡೆ ಹಾಗೂ ಎಟಿಸಿ ಕಂಟ್ರೋಲ್ ಟೀಂ ನಿಂದ ತನಿಖೆ ಶುರುವಾಗಿದೆ. ಅನಾಮಿಕ ಡ್ರೋನ್ ಹಾರಾಟದ ಬಗ್ಗೆ ಪೊಲೀಸರಿಗೆ ಏರ್ಪೋಟ್ ಸಿಬ್ಬಂದಿ ದೂರು‌ ನೀಡಿದ್ದು, ಕೂಡಲೇ ಡ್ರೋನ್​ ಹಾರಾಟದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಷ್ಟೊಂದು ಸೆಕ್ಯೂರಿಟಿ ನಡುವೆಯೂ ಡ್ರೋನ್​ ಹಾರಲು ಹೇಗೆ ಸಾಧ್ಯ ಎಂಬ ಅನುಮಾನ ಇದೀಗ ಶುರುವಾಗಿದೆ.

ಇದನ್ನೂ ಓದಿ:ಸಲೂನ್​​​​ವೊಂದರಲ್ಲಿ ಕೆಲಸ ಮಾಡಲು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ವಿಮಾನ ನಿಲ್ದಾಣದಿಂದ ನಾಪತ್ತೆ

ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ದೇಶಿ ಹಣ

ದೇವನಹಳ್ಳಿ:  ಏರ್ಪೋಟ್ ಭದ್ರತಾ ಪಡೆ (CISF ) ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಏರ್ಪೋಟ್ ಗೆ ಬಂದಿದ್ದ ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ದೇಶಿ ಹಣ ಪತ್ತೆಯಾಗಿದೆ. ಅದನ್ನು ಕಂಡು ಅಧಿಕಾರಿಗಳು ಒಂದು ಕ್ಷಣ ಶಾಕ್​ ಆಗಿದ್ದಾರೆ. ಈ ಮಹಿಳೆ ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದಳು.
ಈ ವೇಳೆ ಲಗೇಜ್ ಸ್ಕ್ಯಾನಿಂಗ್ ಮಾಡಿದ್ದು, ಮಹಿಳೆಯ ಬ್ಯಾಗ್ ನಲ್ಲಿ 15 ಲಕ್ಷ ನಗದು ಹಣ ಕಂಡು ಬಂದಿದೆ. ಹಣದ ಸಮೇತ ಮಹಿಳೆಯನ್ನು ಏರ್ಪೋಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಂತರ ಹಣ ಹಾಗೂ ಮಹಿಳೆಯನ್ನ ಆಧಾಯ ತೆರಿಗೆ ಇಲಾಖೆ‌ ಅಧಿಕಾರಿಗಳ ವಶಕ್ಕೆ ನೀಡಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಿಳೆಯ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Wed, 27 September 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us