AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ

ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಪಾಕ್ ಪ್ರಜೆಗಳ ಬಗ್ಗೆ ಕೆಲವೊಂದಿಷ್ಟು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ
ಎಡಿಜಿಪಿ ಹಿತೇಂದ್ರ
ರಾಮು, ಆನೇಕಲ್​
| Edited By: |

Updated on: Oct 01, 2024 | 6:13 PM

Share

ಬೆಂಗಳೂರು ಗ್ರಾಮಾಂತರ, ಅ.01: ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ(ADGP Hitendra) ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ ಎರಡು ದಿನಗಳ ಹಿಂದೆ ಆನೇಕಲ್‌ನಲ್ಲಿ ಬಂಧಿತರಾದವರು ಪಾಕಿಸ್ತಾನದ ಕರಾಚಿ ನಿವಾಸಿಗಳು. ಅಪ್ನ ಅಂಗಾನ್ ಬಡಾವಣೆಯ ಎರಡು ವಿಲ್ಲಾಗಳಲ್ಲಿ ವಾಸ ಮಾಡುತ್ತಿದ್ದರು. ಇವರು 2014ರಲ್ಲಿ ಭಾರತಕ್ಕೆ ಬಾಂಗ್ಲಾದೇಶದ ಮೂಲಕ ಬಂದಿದ್ದಾರೆ. ಎರಡ್ಮೂರು ವರ್ಷಗಳಿಂದ ಬಿರಿಯಾನಿ ಹೋಟೆಲ್ ಬಿಸಿನೆಸ್ ಮಾಡಿಕೊಂಡಿದ್ದರು.

ಇನ್ನು ಈ ಆರೋಪಿಗಳ ಬಳಿ ಭಾರತೀಯ ಪಾಸ್‌ಪೋರ್ಟ್, ಆಧಾರ್, ಡಿಎಲ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ವೇಳೆ ಕೆಲವೊಂದು ಮಾಹಿತಿಗಳು ಲಭ್ಯ ಆಗಿವೆ. ಹಾಗಾಗಿ ನಾನು ಕೂಡ ಆಗಮಿಸಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ್ದೆನೆ. ಯಾವ ರೀತಿ ತನಿಖೆ ನಡೆಯಬೇಕು ಎಂಬುದರ ಬಗ್ಗೆ ನಿರ್ದೇಶನ ನೀಡಿದ್ದೆನೆ. ಪಾಸ್‌ಪೋರ್ಟ್, ಆಧಾರ್ ಪ್ಯಾನ್ ಕಾರ್ಡ್ ಹೇಗೆ ಬಂತು ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!

ಈ ಆರೋಪಿಗಳ ಮನೆಯಲ್ಲಿ ಸಿಕ್ಕ ಮೊಬೈಲ್, ಲ್ಯಾಪ್‌ಟಾಪ್ ಕೆಲ ದಾಖಲೆಗಳನ್ನು FSL ಗೆ ಕಳುಹಿಸಲಾಗಿದೆ. ಆರೋಪಿಗಳು ನೀಡುತ್ತಿರುವ ಮಾಹಿತಿ ಸತ್ಯ ಎಂದು ನಂಬಲು ಸಾಧ್ಯವಿಲ್ಲ. ಧರ್ಮ ಪ್ರಚಾರದ ಜೊತೆಗೆ ಬೇರೆ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ ಬಗ್ಗೆ ಮಾಹಿತಿ ಇಲ್ಲ. ಚೆನ್ನೈನಲ್ಲಿ ಆರೋಪಿಗಳ ಸಂಬಂಧಿಗಳು ಅರೆಸ್ಟ್ ಆಗಿರುವುದು ಸತ್ಯ. ದಾವಣಗೆರೆ ಮೂಲದ ಅಲ್ತಾಫ್ ಅರೆಸ್ಟ್ ಆಗಿರುವುದು ನಿಜ. ಆದ್ರೆ, ಇವರುಗಳ ಜೊತೆ ಆತನ ಪಾತ್ರ ಇನ್ನೂ ಕನ್ಫರ್ಮ್ ಇಲ್ಲ. ಸದ್ಯ ಪ್ರಕರಣವನ್ನು IB ,NIA ಮತ್ತು ಆನೇಕಲ್ ಉಪ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ